Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪತ್ರಕರ್ತ ಫಹಾದ್ ಶಾ ಬಂಧನ ರದ್ದುಗೊಳಿಸಿದ...

ಪತ್ರಕರ್ತ ಫಹಾದ್ ಶಾ ಬಂಧನ ರದ್ದುಗೊಳಿಸಿದ ಹೈಕೋರ್ಟ್

19 April 2023 10:05 PM IST
share
ಪತ್ರಕರ್ತ ಫಹಾದ್ ಶಾ ಬಂಧನ ರದ್ದುಗೊಳಿಸಿದ ಹೈಕೋರ್ಟ್

ಶ್ರೀನಗರ, ಎ. 19: ಸಾರ್ವಜನಿಕ ಸುರಕ್ಷಾ ಕಾಯ್ದೆ ಅಡಿಯಲ್ಲಿ ಪತ್ರಕರ್ತ ಫಹಾದ್ ಶಾ ಬಂಧನವನ್ನು ಜಮ್ಮು ಹಾಗೂ ಕಾಶ್ಮೀರ ಉಚ್ಚ ನ್ಯಾಯಾಲಯ ರದ್ದುಗೊಳಿಸಿದೆ. ಅಲ್ಲದೆ, ಅಧಿಕಾರಿಗಳು ಮಾತು ಹಾಗೂ ಕೃತಿಯಲ್ಲಿ ಪ್ರಕ್ರಿಯಾತ್ಮಕ ಅಗತ್ಯಗಳನ್ನು ಅನುಸರಿಸಿಲ್ಲ ಎಂದು ಅಭಿಪ್ರಾಯಿಸಿದೆ. 

ಆದರೆ, ಸುದ್ದಿ ಪೋರ್ಟಲ್ ‘ದಿ ಕಾಶ್ಮೀರ್ ವಲ್ಲಾ’ದ ಪ್ರಧಾನ ಸಂಪಾದಕರಾಗಿರುವ ಫಹಾದ್ ಶಾ ಅವರು ಕಾನೂನು ಬಾಹಿರ ಚಟುವಟಿಕೆ ತಡೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ಆರೋಪವನ್ನು ಎದುರಿಸುತ್ತಿರುವುದರಿಂದ ಕಾರಾಗೃಹದಲ್ಲೇ ಇರಲಿದ್ದಾರೆ. 

ಪೊಲೀಸರು ಕಳೆದ ವರ್ಷ ಫೆಬ್ರವರಿಯಲ್ಲಿ ಶಾ ಅವರನ್ನು ಬಂಧಿಸಿದ್ದರು. ಅವರ ವಿರುದ್ಧ ಭಯೋತ್ಪಾದನೆ ವೈಭವೀಕರಣ, ನಕಲಿ ಸುದ್ದಿಗಳ ಹರಡುವಿಕೆ ಹಾಗೂ ಹಿಂಸಾಚಾರಕ್ಕೆ ಉತ್ತೇಜನದ ಆರೋಪವನ್ನು ಹೊರಿಸಿದ್ದರು. ಆದರೆ, ಅವರ ವಿರುದ್ಧ ದಾಖಲಿಸಲಾದ ಮೂರು ಪ್ರಕರಣಗಳಲ್ಲಿ ಎರಡರಲ್ಲಿ ಜಾಮೀನು ಪಡೆದಿದ್ದರು. ಕಳೆದ ವರ್ಷ ಮಾರ್ಚ್‌ನಲ್ಲಿ ಶ್ರೀನಗರ ಜಿಲ್ಲಾ ಮ್ಯಾಜಿಸ್ಟ್ರೇಟ್ ಶಾ ಅವರನ್ನು ಜಮ್ಮು ಹಾಗೂ ಕಾಶ್ಮೀರ ಸಾರ್ವಜನಿಕ ಸುರಕ್ಷಾ ಕಾಯ್ದೆ ಅಡಿಯಲ್ಲಿ ಮುನ್ನೆಚ್ಚರಿಕೆ ಬಂಧನಕ್ಕೆ ಒಳಪಡಿಸುವಂತೆ ಆದೇಶ ನೀಡಿದ್ದರು.

ಕಳೆದ ವಾರ ಜಮ್ಮು ಹಾಗೂ ಕಾಶ್ಮೀರ ಉಚ್ಚ ನ್ಯಾಯಾಲಯದ  ನ್ಯಾಯಮೂರ್ತಿ ವಾಸಿಂ ಸಾದಿಕ್ ನಗ್ರಾಲ್ ಅವರು ತಡೆಗಟ್ಟುವ ಬಂಧನ  ಆದೇಶವನ್ನು ರದ್ದುಗೊಳಿಸಿದ್ದಾರೆ. ತನ್ನ ತೀರ್ಪಿನಲ್ಲಿ  ಅವರು ಶಾ ಬಂಧನಕ್ಕೆ ಉಲ್ಲೇಖಿಸಲಾದ ಬುನಾದಿ ಯಾವುದೇ ನಿರ್ದಿಷ್ಟ ವಿವರಗಳಿಲ್ಲದ, ಅಸ್ಪಷ್ಟ ಪ್ರತಿಪಾದನೆ ಎಂದು ಹೇಳಿದ್ದಾರೆ.  

ಬಂಧನ ಆದೇಶ ಜಾರಿಗೊಳಿಸುವುದಕ್ಕೆ ಆಧಾರವಾದ ದಾಖಲೆಗಳ ಪ್ರತಿಯನ್ನು ತನಗೆ ನೀಡಿಲ್ಲ ಎಂಬ ಪತ್ರಕರ್ತನ ಪ್ರತಿಪಾದನೆಯನ್ನು ಜಮ್ಮು ಹಾಗೂ ಕಾಶ್ಮೀರ ಸರಕಾರ ನಿರಾಕರಿಸಿಲ್ಲ ಎಂದು ನ್ಯಾಯಮೂರ್ತಿಗಳು ಗಮನಿಸಿದರು. 
ಶಾ ಅವರ ವಿರುದ್ಧ ಮೂರನೇ ಪ್ರಕರಣದಲ್ಲಿ ಜಾಮೀನು ಪಡೆಯದ ಕಾರಣ ಅವರನ್ನು ಸಾರ್ವಜನಿಕ ಸುರಕ್ಷಾ ಕಾಯ್ದೆ ಅಡಿಯಲ್ಲಿ ಬಂಧಿಸಲು ಕಾರಣ ಇಲ್ಲ ಎಂದು ಉಚ್ಚ ನ್ಯಾಯಾಲಯ ಬೆಟ್ಟು ಮಾಡಿದೆ.

share
Next Story
X