Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಶ್ರೀಲಂಕಾದಿಂದ 1 ಲಕ್ಷ ಕೋತಿಗಳಿಗೆ...

ಶ್ರೀಲಂಕಾದಿಂದ 1 ಲಕ್ಷ ಕೋತಿಗಳಿಗೆ ಬೇಡಿಕೆ ಸಲ್ಲಿಸಿದ ಚೀನಾ!

20 April 2023 12:44 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಶ್ರೀಲಂಕಾದಿಂದ 1 ಲಕ್ಷ ಕೋತಿಗಳಿಗೆ ಬೇಡಿಕೆ ಸಲ್ಲಿಸಿದ ಚೀನಾ!

ಕೊಲಂಬೋ:  ಶ್ರೀಲಂಕಾದಿಂದ ಅಳಿವಿನಂಚಿನಲ್ಲಿರುವ 1 ಲಕ್ಷ ಟೋಕೆ ಮಕಾಖ್‌ ಕೋತಿಗಳನ್ನು ಆಮದು ಮಾಡಲು ಚೀನಾದಿಂದ ವಿನಂತಿಯೊಂದು ಬಂದಿದೆ ಎಂಬುದನ್ನು ಶ್ರೀಲಂಕಾದ ಕೃಷಿ ಸಚಿವಾಲಯದ ಹಿರಿಯ ಅಧಿಕಾರಿ ಗುಣದಾಸ ಸಮರಸಿಂಘೆ ದೃಢೀಕರಿಸಿದ್ದಾರೆ. ಆದರೆ ಈ ಪ್ರಸ್ತಾವನೆಯು ದೇಶದ ಪರಿಸರವಾದಿಗಳ ಆಕ್ರೋಶಕ್ಕೆ ಕಾರಣವಾಗಿದೆ.

ಝೂಲಾಜಿಕಲ್‌ ಗಾರ್ಡನ್ಸ್‌ ಜೊತೆಗೆ ನಂಟು ಹೊಂದಿರುವ ಖಾಸಗಿ ಚೀನೀ ಕಂಪೆನಿ ಈ ವಿನಂತಿ ಸಲ್ಲಿಸಿದೆ ಎಂದು ಅವರು ಹೇಳಿದ್ದಾರೆ.

"ಅವರು ಕೋರಿದ ಒಂದು ಲಕ್ಷ ಕೋತಿಗಳನ್ನು ಒಮ್ಮೆಗೆ ಕಳುಹಿಸಲಾಗುವುದಿಲ್ಲ, ಆದರೆ ದೇಶದಲ್ಲಿ ಕೋತಿಗಳು ಉಂಟುಮಾಡುತ್ತಿರುವ ಬೆಳೆ ನಷ್ಟವನ್ನು ಪರಿಗಣಿಸಲಾಗುವುದು. ಸಂರಕ್ಷಿತ ಪ್ರದೇಶಗಳ ಕೋತಿಗಳನ್ನು ಕಳುಹಿಸಲಾಗುವುದಿಲ್ಲ, ಕೃಷಿ ಪ್ರದೇಶಗಳಲ್ಲಿರುವ ಕೋತಿಗಳನ್ನು ಕಳುಹಿಸುವ ಬಗ್ಗೆ ಯೋಚಿಸಲಾಗುವುದು," ಎಂದು ಅವರು ಹೇಳಿದ್ದಾರೆ.

ಈ ನಿರ್ದಿಷ್ಟ ಜಾತಿಯ ಕೋತಿಗಳು ಶ್ರೀಲಂಕಾದಲ್ಲಿ ಮಾತ್ರ ಇದ್ದು ಇಂಟರ್‌ನ್ಯಾಷನಲ್‌ ಯೂನಿಯನ್‌ ಫಾರ್‌ ಕನ್ಸರ್ವೇಶನ್‌ ಆಫ್‌ ನೇಚರ್‌ ಕೆಂಪು ಪಟ್ಟಿಯಲ್ಲಿ ಈ ಜಾತಿಯ ಕೋತಿಗಳಿವೆ.

ಚೀನಾದ ಮೃಗಾಲಯದಲ್ಲಿ ಪ್ರದರ್ಶಿಸಲು ಕೋತಿಗಳನ್ನು ಕಳುಹಿಸಿಕೊಡಲು ಬಂದಿರುವ  ಬೇಡಿಕೆಯ ಕುರಿತು ಕಳೆದ ವಾರ  ಶ್ರೀಲಂಕಾದ ಕೃಷಿ ಸಚಿವ ಮಹಿಂದ ಅಮರವೀರ ಕೂಡ ಹೇಳಿದ್ದರು.

ಅಲ್ಲಿನ 1000ಕ್ಕೂ ಅಧಿಕ ಮೃಗಾಲಯಗಳಿಗಾಗಿ ಈ ಬೇಡಿಕೆ ಬಂದಿದೆ ಎಂದು ಅವರು ಹೇಳಿದ್ದಾರೆ. ಶ್ರೀಲಂಕಾದ ಕಾನೂನುಗಳು ಜೀವಂತ ಪ್ರಾಣಿಗಳ ರಫ್ತಿಗೆ ನಿಷೇಧ ಹೇರಿವೆ. ಈ ವರ್ಷ ಶ್ರೀಲಂಕಾದಲ್ಲಿರುವ ಮೂರು ಜಾತಿಯ ಕೋತಿಗಳು, ನವಿಲುಗಳು,  ಕಾಡು ಹಂದಿಗಳನ್ನು ತನ್ನ ಸಂರಕ್ಷಿತ ಪಟ್ಟಿಯಿಂದ ತೆಗೆದುಹಾಕಿದ್ದು ಕೃಷಿನಾಶಗೈಯ್ಯುವವುಗಳನ್ನು ಕೊಲ್ಲಲು ಅನುಮತಿಸಿದೆ.

ಚೀನಾ ಬೇಡಿಕೆಯಿರಿಸಿರುವ ಜಾತಿಯ ಕೋತಿಗಳು ಶ್ರೀಲಂಕಾದಲ್ಲಿ ಹಲವೆಡೆ ಬೆಳೆಹಾನಿ ನಡೆಸುತ್ತಿದ್ದು ಜನರ ಮೇಲೂ ದಾಳಿ ನಡೆಸುತ್ತವೆ.

ಚೀನಾದ ಖಾಸಗಿ ಕಂಪೆನಿಗೆ ʻಪ್ರಾಯೋಗಿಕ ಉದ್ಧೇಶಗಳಿಗೆʼ ಕೋತಿಗಳ ಬೇಡಿಕೆ ಇರಿಸಿರುವ ಬಗ್ಗೆ ತನಗೆ ತಿಳಿದಿಲ್ಲ ಎಂದು ಕೊಲಂಬೋದಲ್ಲಿರುವ ಚೀನಾ ದೂತಾವಾಸ ಹೇಳಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X