Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 2025ಕ್ಕೆ 121 ವಿಮಾನ ನಿಲ್ದಾಣಗಳಲ್ಲಿ...

2025ಕ್ಕೆ 121 ವಿಮಾನ ನಿಲ್ದಾಣಗಳಲ್ಲಿ ಹಸಿರು ಇಂಧನ ಬಳಕೆ ಭಾರತದ ಗುರಿ: ಕೇಂದ್ರ ವಾಯುಯಾನ ಸಚಿವ

20 April 2023 10:10 PM IST
share
2025ಕ್ಕೆ 121 ವಿಮಾನ ನಿಲ್ದಾಣಗಳಲ್ಲಿ ಹಸಿರು ಇಂಧನ ಬಳಕೆ ಭಾರತದ ಗುರಿ: ಕೇಂದ್ರ ವಾಯುಯಾನ ಸಚಿವ

ಹೊಸದಿಲ್ಲಿ,ಎ.20: ಪ್ರಸ್ತುತ ದೇಶದಲ್ಲಿಯ 25 ವಿಮಾನ ನಿಲ್ದಾಣಗಳು ಹಸಿರು ಇಂಧನವನ್ನು ಬಳಸುತ್ತಿದ್ದು, 2025ರ ವೇಳೆಗೆ ಇದನ್ನು ಇನ್ನೂ 121 ವಿಮಾನ

ನಿಲ್ದಾಣಗಳಿಗೆ ವಿಸ್ತರಿಸಲಾಗುವುದು ಎಂದು ಕೇಂದ್ರ ವಾಯುಯಾನ ಸಚಿವ ಜ್ಯೋತಿರಾದಿತ್ಯ ಸಿಂದಿಯಾ ಅವರು ಗುರುವಾರ ಪ್ರಕಟಿಸಿದರು.

ಎರಡು ದಿನಗಳ ಐರೋಪ್ಯ ಒಕ್ಕೂಟ-ಭಾರತ ವಾಯುಯಾನ ಶೃಂಗಸಭೆಯಲ್ಲಿ ಮಾಡಿದ ತನ್ನ ವರ್ಚುವಲ್ ಭಾಷಣದಲ್ಲಿ ಸಿಂದಿಯಾ ಈ ವಿಷಯವನ್ನು ತಿಳಿಸಿದರು. ಕೋವಿಡ್ಗೆ ಪಾಸಿಟಿವ್ ಆಗಿರುವ ಸಿಂದಿಯಾ ಶೃಂಗಸಭೆಯಲ್ಲಿ ಖುದ್ದಾಗಿ ಭಾಗವಹಿಸಲು ಸಾಧ್ಯವಾಗಿಲ್ಲ.

‘ಇಂಗಾಲ ಹೊರಸೂಸುವಿಕೆಯಲ್ಲಿ ವಾಯುಯಾನ ಉದ್ಯಮದ ಕೊಡುಗೆಯನ್ನು ತೀವ್ರ ಪರಿಶೀಲನೆಗೆ ಒಳಪಡಿಸಲಾಗಿದೆ. ವಾಯುಯಾನ ಉದ್ಯಮದಿಂದ ಇಂಗಾಲ ಹೊರಸೂಸುವಿಕೆಯನ್ನು ಕನಿಷ್ಠಗೊಳಿಸಲು ನಾವು ಹಲವಾರು ಕ್ರಮಗಳನ್ನು ಕೈಗೊಂಡಿದ್ದೇವೆ’ ಎಂದು ಹೇಳಿದ ಸಿಂದಿಯಾ,ಭಾರತ ಮತ್ತು ಐರೋಪ್ಯ ಒಕ್ಕೂಟ ಹವಾಮಾನ ಬದಲಾವಣೆಯನ್ನು ಎದುರಿಸುವ ಸಮಾನ ಗುರಿಯನ್ನು ಹೊಂದಿವೆ ಎಂದು ಒತ್ತಿ ಹೇಳಿದರು.

‘2024ರ ವೇಳೆಗೆ ಹಸಿರು ಇಂಧನವನ್ನು ಬಳಸಲು ಮತ್ತು 2030ರ ವೇಳೆಗೆ ಶೂನ್ಯ ಇಂಗಾಲ ಹೊರಸೂಸುವಿಕೆಯನ್ನು ಸಾಧಿಸಲು ನಮ್ಮ ವಿಮಾನ ನಿಲ್ದಾಣಗಳನ್ನು ನಾವು ಪ್ರೋತ್ಸಾಹಿಸುತ್ತಿದ್ದೇವೆ’ ಎಂದು ಸಿಂದಿಯಾ ನುಡಿದರು.

ಗುರುವಾರ ಆರಂಭಗೊಂಡಿರುವ ಶೃಂಗಸಭೆಯು ಐರೋಪ್ಯ ಒಕ್ಕೂಟ-ಭಾರತ ವಾಯು ಸಾರಿಗೆ ಸಂಬಂಧಗಳು ಹಾಗೂ ಕೋವಿಡ್ ಬಳಿಕ ವಿಮಾನ ಸಂಚಾರದ ಚೇತರಿಕೆ,ಹೆಚ್ಚಿನ ಸುಸ್ಥಿರತೆ,ಸುರಕ್ಷತೆ ಮತ್ತು ಮಾನವರಹಿತ ವಿಮಾನ ವ್ಯವಸ್ಥೆಗಳ ಅಭಿವೃದ್ಧಿಯಂತಹ ಉಭಯ ಪ್ರದೇಶಗಳು ಪರಸ್ಪರ ಹಂಚಿಕೊಂಡಿರುವ ಸವಾಲುಗಳು ಮತ್ತು ಅವಕಾಶಗಳ ಮೇಲೆ ಗಮನವನ್ನು ಕೇಂದ್ರೀಕರಿಸಲಿದೆ.

ಉದ್ಯಮಕ್ಕೆ ಗರಿಷ್ಠ ಅನುಕೂಲವಾಗುವಂತೆ ದೇಶದಲ್ಲಿ ವಿಮಾನ ತಯಾರಿಕೆಯನ್ನು ಉತ್ತೇಜಿಸಲು ಭಾರತವು ನಿಯಂತ್ರಣ ಕಾರ್ಯವಿಧಾನವನ್ನು ಉತ್ತಮಗೊಳಿಸಿದೆ ಎಂದು ಹೇಳಿದ ಸಿಂದಿಯಾ,ಈ ಅವಕಾಶಗಳನ್ನು ಬಳಸಿಕೊಳ್ಳುವಂತೆ ಮತ್ತು ವಿಶ್ವದಲ್ಲಿಯೇ ವೇಗವಾಗಿ ಬೆಳೆಯುತ್ತಿರುವ ವಾಯುಯಾನ ಉದ್ಯಮದ ಭಾಗವಾಗುವಂತೆ ಐರೋಪ್ಯ ಒಕ್ಕೂಟದ ಉದ್ಯಮಿಗಳನ್ನು ಆಗ್ರಹಿಸಿದರು.

share
Next Story
X