ತರೀಕೆರೆ | ಮರಕ್ಕೆ ಕಾರು ಢಿಕ್ಕಿ: ದಂಪತಿ ಸ್ಥಳದಲ್ಲೇ ಮೃತ್ಯು, ಇಬ್ಬರು ಮಕ್ಕಳು ಗಂಭೀರ

ಚಿಕ್ಕಮಗಳೂರು, ಎ.21: ಕಾರೊಂದು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ದಂಪತಿ ಸ್ಥಳದಲ್ಲೇ ಮೃತಪಟ್ಟು ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ಬೆಟ್ಟದತಾವರಕೆರೆ ಗ್ರಾಮದಲ್ಲಿ ಶುಕ್ರವಾರ ಸಂಜೆ ವರದಿಯಾಗಿದೆ.
ಮೃತರನ್ನು ಶ್ರೀನಿವಾಸ್ ಹಾಗೂ ಪತ್ನಿ ಶ್ವೇತ ಎಂದು ಗುರುತಿಸಲಾಗಿದ್ದು, ಈ ದಂಪತಿಯ ಇಬ್ಬರ ಮಕ್ಕಳಿಗೆ ಅಪಘಾತದ ವೇಳೆ ಗಂಭೀರ ಗಾಯವಾಗಿದ್ದು, ಚಿಕಿತ್ಸೆಗಾಗಿ ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಈ ದಂಪತಿ ತಮ್ಮ ಮಕ್ಕಳೊಂದಿಗೆ ಬೆಂಗಳೂರಿನಿಂದ ಭದ್ರಾವತಿಗೆ ಸಂಬಂಧಿಕರ ಮದುವೆ ನಿಶ್ಚಿತಾರ್ಥಕ್ಕೆ ಹೋಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದ್ದು, ಘಟನೆ ಸಂಬಂಧ ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Next Story





