Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಾನೂನಿನ ಆಡಳಿತವನ್ನು ಸಂಭ್ರಮಿಸಬೇಕೇ,...

ಕಾನೂನಿನ ಆಡಳಿತವನ್ನು ಸಂಭ್ರಮಿಸಬೇಕೇ, ಅದರ ಸಾವಿಗೆ ದುಃಖಿಸಬೇಕೇ?: ಕಪಿಲ್ ಸಿಬಲ್ ಪ್ರಶ್ನೆ‌

ಗುಜರಾತ್‌ ಹತ್ಯಾಕಾಂಡ ಆರೋಪಿಗಳ ಖುಲಾಸೆ ಹಿನ್ನೆಲೆ

21 April 2023 9:55 PM IST
share
ಕಾನೂನಿನ ಆಡಳಿತವನ್ನು ಸಂಭ್ರಮಿಸಬೇಕೇ, ಅದರ ಸಾವಿಗೆ ದುಃಖಿಸಬೇಕೇ?: ಕಪಿಲ್ ಸಿಬಲ್ ಪ್ರಶ್ನೆ‌
ಗುಜರಾತ್‌ ಹತ್ಯಾಕಾಂಡ ಆರೋಪಿಗಳ ಖುಲಾಸೆ ಹಿನ್ನೆಲೆ

ಹೊಸದಿಲ್ಲಿ, ಎ. 21: 2002ರ ಗುಜರಾತ್ ಹತ್ಯಾಕಾಂಡಕ್ಕೆ ಸಂಬಂಧಿಸಿದ ನರೋದಾ ಗಾಮ್ ಪ್ರಕರಣದ ಎಲ್ಲಾ 67 ಆರೋಪಿಗಳನ್ನು ದೋಷಮುಕ್ತಗೊಳಿಸಿದ ಅಹ್ಮದಾಬಾದ್ ನ್ಯಾಯಾಲಯದ ನಿರ್ಧಾರವನ್ನು ರಾಜ್ಯಸಭಾ ಸದಸ್ಯ ಹಾಗೂ ಹಿರಿಯ ವಕೀಲ ಕಪಿಲ್ ಸಿಬಲ್ ಶುಕ್ರವಾರ ಟೀಕಿಸಿದ್ದಾರೆ. ‘‘ನಾವು ಕಾನೂನಿನ ಆಡಳಿತವನ್ನು ಸಂಭ್ರಮಿಸಬೇಕೇ ಅಥವಾ ಅದರ ಸಾವಿಗೆ ದುಃಖಿಸಬೇಕೇ’’ ಎಂದು ಅವರು ಪ್ರಶ್ನಿಸಿದ್ದಾರೆ.

ಅಹ್ಮದಾಬಾದ್ ನ ನರೋದಾ ಗಾಮ್ ನಲ್ಲಿ ಮುಸ್ಲಿಮ್ ಸಮುದಾಯದ 11 ಮಂದಿ ಕೊಲೆಯಾದ 21 ವರ್ಷಗಳ ಬಳಿಕ, ಅಹ್ಮದಾಬಾದ್ ನ ವಿಶೇಷ ನ್ಯಾಯಾಲಯವೊಂದು ಗುರುವಾರ ಪ್ರಕರಣದ ಎಲ್ಲಾ 67 ಮಂದಿಯನ್ನು ದೋಷಮುಕ್ತಗಳಿಸಿದೆ. ದೋಷಮುಕ್ತಗೊಂಡವರಲ್ಲಿ, ಅಂದು ಗುಜರಾತ್ ಸರಕಾರದಲ್ಲಿ ಸಚಿವೆಯಾಗಿದ್ದ ಮಾಯಾ ಕೊಡ್ನಾನಿ ಮತ್ತು ಬಜರಂಗ ದಳ ನಾಯಕ ಬಾಬು ಬಜರಂಗಿ ಇದ್ದಾರೆ.

ಈ ತೀರ್ಪಿಗೆ ಪ್ರತಿಕ್ರಿಯಿಸಿರುವ ಕಪಿಲ್ ಸಿಬಲ್, ‘‘ನರೋದಾ ಗಾಮ್: 12 ವರ್ಷದ ಬಾಲಕಿಯೂ ಸೇರಿದಂತೆ ನಮ್ಮ ನಾಗರಿಕರ ಪೈಕಿ 11 ಮಂದಿಯ ಕೊಲೆಯಾಯಿತು. 21 ವರ್ಷಗಳ ಬಳಿಕ, 67 ಆರೋಪಿಗಳು ದೋಷಮುಕ್ತಗೊಂಡರು. ನಾವು ಕಾನೂನಿನ ಆಡಳಿತವನ್ನು ಸಂಭ್ರಮಿಸಬೇಕೇ ಅಥವಾ ಅದರ ಸಾವಿಗೆ ದುಃಖಿಸಬೇಕೇ?’’ ಎಂಬುದಾಗಿ ಟ್ವಿಟರ್ನಲ್ಲಿ ಬರೆದಿದ್ದಾರೆ.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘‘ಯಾರನ್ನೋ ಕೊಲೆ ಮಾಡಲಾಯಿತು. ಕೊಲೆ ಯಾರು ಮಾಡಿದರು ಎನ್ನುವುದನ್ನು ಪತ್ತೆಹಚ್ಚುವುದು ತನಿಖಾ ಸಂಸ್ಥೆಯ ಕೆಲಸ. ತನಿಖಾ ಸಂಸ್ಥೆಯು ಕೊಲೆ ಮಾಡಿದವರನ್ನು ಪತ್ತೆಹಚ್ಚಿತು. ಆರೋಪಿಗಳಿಗೆ ಶಿಕ್ಷೆಯಾಗದಿರುವುದು ತನಿಖಾ ಸಂಸ್ಥೆಯ ವೈಫಲ್ಯವಲ್ಲವೇ? ತನಿಖಾ ಸಂಸ್ಥೆಗಳು ಆರೋಪಿಗಳಿಗೆ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕೇ ಅಥವಾ ಅವರ ದೋಷಮುಕ್ತಿಯನ್ನು ಕೋರಬೇಕೇ? ಈ ಪ್ರಕರಣದಲ್ಲಿ ತನಿಖಾ ಸಂಸ್ಥೆಯು ಮೇಲ್ಮನವಿ ಸಲ್ಲಿಸುವುದಿಲ್ಲ ಎನ್ನುವುದು ಸ್ಪಷ್ಟ’’ ಎಂದು ಹೇಳಿದರು.

‘‘ನ್ಯಾಯಾಲಯದ ವಿಚಾರಣೆಗಳಲ್ಲಿ ಒಂದರ ಬಳಿಕ ಒಂದರಂತೆ ಅನ್ಯಾಯವೇ ವಿಜೃಂಭಿಸುತ್ತಿದೆ. ಇದನ್ನು ನ್ಯಾಯಾಲಯಗಳು ಮೂಕ ಪ್ರೇಕ್ಷಕರಂತೆ ನೋಡುತ್ತಿವೆಯೇ ಎಂಬ ಅನುಮಾನ ನನ್ನನ್ನು ಕಾಡುತ್ತಿದೆೆ’’ ಎಂದರು.

ಅಯೋಧ್ಯೆಯಿಂದ ಮರಳುತ್ತಿದ್ದ ಸಾಬರ್ಮತಿ ರೈಲು ಬೆಂಕಿಗೆ ಆಹುತಿಯಾದ ಬಳಿಕ, ಗುಜರಾತ್ ರಾಜ್ಯಾದ್ಯಂತ ಮುಸ್ಲಿಮರ ವಿರುದ್ಧ ಭುಗಿಲೆದ್ದ ಹಿಂಸಾಚಾರದ ವೇಳೆ ನರೋದಾ ಗಾಮ್ ಹತ್ಯಾಕಾಂಡವೂ ನಡೆದಿತ್ತು. ಪ್ರಕರಣದ ತನಿಖೆಯನ್ನು ಸುಪ್ರೀಂ ಕೋರ್ಟ್ ನೇಮಿತ ವಿಶೇಷ ತನಿಖಾ ತಂಡ (ಸಿಟ್) ನಡೆಸಿತ್ತು. ಆದರೆ, ವಿಶೇಷ ತನಿಖಾ ತಂಡ ಪ್ರಕರಣಗಳ ವಿಶೇಷ ನ್ಯಾಯಾಧೀಶ ಎಸ್.ಕೆ. ಬಕ್ಷಿ, ಭೀಕರ ಹತ್ಯಾಕಾಂಡ ಪ್ರಕರಣದ ಎಲ್ಲಾ ಆರೋಪಿಗಳನ್ನು ಗುರುವಾರ ದೋಷಮುಕ್ತಗೊಳಿಸಿದ್ದಾರೆ.

ಪ್ರಕರಣದಲ್ಲಿ ಆರಂಭದಲ್ಲಿ ಒಟ್ಟು 86 ಆರೋಪಿಗಳಿದ್ದರು. ಅವರ ಪೈಕಿ 18 ಮಂದಿ ವಿಚಾರಣೆಯ ಸುದೀರ್ಘ ಅವಧಿಯಲ್ಲಿ ನಿಧನರಾಗಿದ್ದಾರೆ. ಆರೋಪಿಗಳ ಪೈಕಿ ಒಬ್ಬನನ್ನು ಸಾಕ್ಷಗಳ ಕೊರತೆಯಿಂದಾಗಿ ನ್ಯಾಯಾಲಯವು ಹಿಂದೆಯೇ ದೋಷಮುಕ್ತಗೊಳಿಸಿತ್ತು.

share
Next Story
X