Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೈ ಹಿಡಿದ ವಿಶ್ವನಾಥ್ ಪಾಟೀಲ್; ಬಿಜೆಪಿಯ...

ಕೈ ಹಿಡಿದ ವಿಶ್ವನಾಥ್ ಪಾಟೀಲ್; ಬಿಜೆಪಿಯ ಅಣೆಕಟ್ಟು ಒಡೆದಿರುವುದಕ್ಕೆ ಇದಕ್ಕಿಂತ ಸಾಕ್ಷಿ ಬೇಕಾ ಎಂದ ಡಿಕೆ ಶಿವಕುಮಾರ್

22 April 2023 6:04 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಕೈ ಹಿಡಿದ ವಿಶ್ವನಾಥ್ ಪಾಟೀಲ್; ಬಿಜೆಪಿಯ ಅಣೆಕಟ್ಟು ಒಡೆದಿರುವುದಕ್ಕೆ ಇದಕ್ಕಿಂತ ಸಾಕ್ಷಿ ಬೇಕಾ ಎಂದ ಡಿಕೆ ಶಿವಕುಮಾರ್

ಬೆಂಗಳೂರು: ‘ಬಿಜೆಪಿ ಪಕ್ಷದ ಅಣೆಕಟ್ಟು ಒಡೆದಿದ್ದು, ಅದರ ನಾಯಕರೆಲ್ಲರೂ ನೀರಿನಂತೆ ಹರಿದು ಬರುತ್ತಿರುವುದಕ್ಕೆ ಮೂರು ಬಾರಿ ಶಾಸಕರಾಗಿದ್ದ ವಿಶ್ವನಾಥ್ ಪಾಟೀಲ್ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಿರುವುದೇ ಸಾಕ್ಷಿ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬಿಜೆಪಿಗೆ ಕುಟುಕಿದ್ದಾರೆ.

ಸದಾಶಿವನಗರ ನಿವಾಸದಲ್ಲಿ ಕಲ್ಯಾಣ ಕರ್ನಾಟಕ ಭಾಗದ ಬಿಜೆಪಿ ನಾಯಕ ಶಿವಾನಂದ ಪಾಟೀಲ್, ಅರವಿಂದ ಚೌಹಾಣ್ ಸೇರಿದಂತೆ ಅನೇಕ ನಾಯಕರನ್ನು ಶಿವಕುಮಾರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಂಡರು. ಈ ಸಂದರ್ಭದಲ್ಲಿ ಕೆಪಿಸಿಸಿ ಸಂವಹನ ವಿಭಾಗದ ಮುಖ್ಯಸ್ಥರಾದ ಪ್ರಿಯಾಂಕ್ ಖರ್ಗೆ ಅವರು ಉಪಸ್ಥಿತರಿದ್ದರು.

ಈ ವೇಳೆ ಮಾತನಾಡಿದ ಶಿವಕುಮಾರ್ ಅವರು ‘ಬಿಜಾಪುರ, ಕಲ್ಯಾಣ ಕರ್ನಾಟಕದ ಅನೇಕ ನಾಯಕರು ಕಾಂಗ್ರೆಸ್ ತತ್ವ, ಸಿದ್ಧಾಂತಗಳನ್ನು ಒಪ್ಪಿ ಪಕ್ಷ ಸೇರಲು ಬಯಸಿದ್ದಾರೆ. ಹೀಗಾಗಿ ನಾನು ವಿವಿಧ ಮೂಲೆಯ ಜಿಲ್ಲಾ ಹಾಗೂ ಬ್ಲಾಕ್ ಘಟಕಗಳು ಸ್ಥಳೀಯ ಮಟ್ಟದಲ್ಲಿ ಅನ್ಯ ಪಕ್ಷಗಳ ನಾಯಕರ ಸೇರ್ಪಡೆಗೆ ಅನುಮತಿ ನೀಡಿದ್ದೇನೆ. ರಾಜ್ಯದಲ್ಲಿ ಈಗ ಬದಲಾವಣೆಯ ಕಾಲ ಬರುತ್ತಿದ್ದು, ಇದು ನಿಮ್ಮ ಕಾಲ. ಭ್ರಷ್ಟಾಚಾರ ಬಡಿದೋಡಿಸುವ ಕಾಲ ಬಂದಿದ್ದು ಈ ಬದಲಾವಣೆ ಸಮಯದಲ್ಲಿ ಎಲ್ಲರೂ ನಮ್ಮ ಜತೆ ಕೈ ಜೋಡಿಸಬೇಕು ಎಂದರು.

ಚಿತ್ತಾಪುರ ಕ್ಷೇತ್ರದಲ್ಲಿ ಮೂರು ಬಾರಿ ಶಾಸಕರಾಗಿದ್ದ ವಿಶ್ವನಾಥ ಪಾಟೀಲ್ ಅವರು ಇಂದು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರುತ್ತಿದ್ದಾರೆ. ಇವರ ಜತೆಗೆ ಜಿಲ್ಲಾ ಪಂಚಾಯ್ತಿಯಲ್ಲಿ ವಿವಿಧ ಸ್ಥಾನಗಳಲ್ಲಿ ಕೆಲಸ ಮಾಡಿದ್ದ ಅರವಿಂದ್ ಚೌಹಾಣ್ ಅವರು ಸೇರಿದಂತೆ ಅನೇಕ ನಾಯಕರು, ಮುಖಂಡರು ಇಂದು ಪಕ್ಷ ಸೇರುತ್ತಿದ್ದಾರೆ. ಈ ಎಲ್ಲಾ ನಾಯಕರನ್ನು ನಾವು ಹೃದಯಪೂರ್ವಕವಾಗಿ ಪಕ್ಷಕ್ಕೆ ಸ್ವಾಗತಿಸುತ್ತೇವೆ. ಇವರ ಸೇರ್ಪಡೆಯಿಂದ ಈ ಭಾಗದಲ್ಲಿ ಪಕ್ಷಕ್ಕೆ ಹೆಚ್ಚಿನ ಶಕ್ತಿ ಸಿಕ್ಕಿದೆ ಎಂದರು.

ಬಿಜೆಪಿ, ಮುಖ್ಯಮಂತ್ರಿಗಳ ಕಚೇರಿಯಿಂದ ಅಧಿಕಾರ ದುರುಪಯೋಗ ಮಾಡಿಕೊಂಡು ಕಾಂಗ್ರೆಸ್ ಅಭ್ಯರ್ಥಿಗಳ ನಾಮಪತ್ರ ತಿರಸ್ಕರಿಸಲು ಷಡ್ಯಂತ್ರ ನಡೆಯುತ್ತಿದೆ. ಚುನಾವಣಾ ಆಯೋಗ ಮುಖ್ಯಮಂತ್ರಿ ಕಚೇರಿಯ ದೂರವಾಣಿ ಕರೆ ಪಟ್ಟಿ ತರೆಸಿಕೊಳ್ಳಬೇಕು.ಸವದತ್ತಿ  ಯೆಲ್ಲಮ್ಮ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಾಮಪತ್ರದಲ್ಲಿ ದೋಷವಿದ್ದರೂ ಅದನ್ನು ತಿದ್ದಲು ಮುಖ್ಯಮಂತ್ರಿ ಕಚೇರಿಯಿಂದ ಚುನಾವಣಾಧಿಕಾರಿಗಳಿಗೆ ಕರೆ ಮಾಡಿ ಒತ್ತಡ ಹೇರಲಾಗುತ್ತಿದೆ ಎಂದರು.

              

ರಮಝಾನ್ ಹಬ್ಬದ ಶುಭಾಶಯಗಳು

ಕರ್ನಾಟಕ ರಾಜ್ಯದ ಜನರಿಗೆ ಪವಿತ್ರ ರಮಝಾನ್ ಹಬ್ಬದ ಶುಭಾಶಯಗಳು. ಅಲ್ಪಸಂಖ್ಯಾತ ಸಮುದಾಯದ ಬಾಂಧವರು ಕಳೆದ ಒಂದು ತಿಂಗಳಿಂದ ನೆಮ್ಮದಿ ಶಾಂತಿಗಾಗಿ ಉಪವಾಸ ಮಾಡಿ ಪ್ರಾರ್ಥನೆ ಮಾಡಿದ್ದಾರೆ. ಅವರೆಲ್ಲರಿಗೂ ಕಾಂಗ್ರೆಸ್ ಪಕ್ಷದ ಅಧ್ಯಕ್ಷನಾಗಿ ಶುಭಾಶಯ ಕೋರುತ್ತೇನೆ ಎಂದು ಶಿವಕುಮಾರ್ ಈ ಸಂದರ್ಭದಲ್ಲಿ ಹೇಳಿದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X