Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸತ್ಯಪಾಲ್ ಮಲಿಕ್‌ಗೆ ಸಿಬಿಐ ಸಮನ್ಸ್:...

ಸತ್ಯಪಾಲ್ ಮಲಿಕ್‌ಗೆ ಸಿಬಿಐ ಸಮನ್ಸ್: ನಮ್ಮ ವಿರುದ್ಧ ಮಾತನಾಡಿದ್ದಕ್ಕಲ್ಲ ಎಂದ ಕೇಂದ್ರ ಗೃಹ ಸಚಿವ ಅಮಿತ್ ಶಾ

23 April 2023 11:08 AM IST
share
ಸತ್ಯಪಾಲ್ ಮಲಿಕ್‌ಗೆ ಸಿಬಿಐ ಸಮನ್ಸ್: ನಮ್ಮ ವಿರುದ್ಧ ಮಾತನಾಡಿದ್ದಕ್ಕಲ್ಲ ಎಂದ ಕೇಂದ್ರ ಗೃಹ ಸಚಿವ ಅಮಿತ್ ಶಾ

ಬೆಂಗಳೂರು: ವಿಮಾ ಹಗರಣದ ಭಾಗವಾಗಿ ಮೂರನೆಯ ಬಾರಿ ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲರಾದ ಸತ್ಯಪಾಲ್ ಮಲಿಕ್ (Satya Pal Malik) ಅವರಿಗೆ ಸಿಬಿಐ ಸಮನ್ಸ್ ಜಾರಿಗೊಳಿಸಿದೆಯೇ ಹೊರತು ನಮ್ಮ ಬಿಜೆಪಿ (BJP) ನೇತೃತ್ವದ ಸರ್ಕಾರದ ವಿರುದ್ಧ ಅವರು ಆರೋಪ ಮಾಡಿದ್ದಾರೆಂದು ಅಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಹೇಳಿದ್ದಾರೆ.

ಇಂಡಿಯಾ ಟುಡೇ ಆಯೋಜಿಸಿದ್ದ 'ಕರ್ನಾಟಕ ರೌಂಡ್ ಟೇಬಲ್' ಕಾರ್ಯಕ್ರಮದ ಲ್ಲಿ ಭಾಗವಹಿಸಿ ಮಾತನಾಡಿದ ಅವರು, ಜನರಿಂದ ಬಚ್ಚಿಡುವಂಥ ಏನನ್ನೂ ಬಿಜೆಪಿ ಸರ್ಕಾರ ಮಾಡಿಲ್ಲ. ಒಂದು ವೇಳೆ ವೈಯಕ್ತಿಕ, ರಾಜಕೀಯ ಹಿತಾಸಕ್ತಿಯಿಂದ ಅಂತಹ ಮಾತುಗಳನ್ನಾಡಿದ್ದರೆ ಅವನ್ನು ಅದೇ ರೀತಿ ಭಾವಿಸಬೇಕು ಎಂದು ಹೇಳಿದ್ದಾರೆ.

"ನನಗಿರುವ ಮಾಹಿತಿಯ ಪ್ರಕಾರ, ಅವರನ್ನು ಎರಡು ಅಥವಾ ಮೂರನೆಯ ಬಾರಿಗೆ ವಿಚಾರಣೆಗೆ ಕರೆಯಲಾಗಿದೆ. ಈ ಕುರಿತು ತನಿಖೆ ಪ್ರಗತಿಯಲ್ಲಿದ್ದು, ಕೆಲವು ಹೊಸ ಮಾಹಿತಿ ಅಥವಾ ಸಾಕ್ಷ್ಯ ದೊರೆತಿರುವುದರಿಂದ ಅವರನ್ನು ಮೂರನೆಯ ಬಾರಿಗೆ ವಿಚಾರಣೆಗೆ ಕರೆದಿರಬಹುದು. ನಮ್ಮ ವಿರುದ್ಧ ಮಾತನಾಡಿದ್ದಕ್ಕೆ ಅವರನ್ನು ವಿಚಾರಣೆಗೆ ಕರೆಯಲಾಗಿದೆ ಎಂಬ ಮಾತಿನಲ್ಲಿ ಯಾವುದೇ ಸತ್ಯಾಂಶವಿಲ್ಲ" ಎಂದು ಅಮಿತ್ ಶಾ ಸ್ಪಷ್ಟಪಡಿಸಿದ್ದಾರೆ.

ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ಧದ ಸತ್ಯಪಾಲ್ ಮಲಿಕ್ ಅವರ ಆರೋಪಗಳನ್ನು ಪ್ರಸ್ತಾಪಿಸಿದ ಅವರು, "ನಮ್ಮನ್ನು ತೊರೆದ ನಂತರ ಇಂತಹ ವಿಚಾರಗಳೆಲ್ಲ ಅವರ ತಲೆಗೆ ಹೇಗೆ ಬಂದವು ಎಂಬುದನ್ನು ಪ್ರಶ್ನಿಸಬೇಕಿದೆ" ಎಂದು ಹೇಳಿದ್ದಾರೆ.

"ನೀವು ಅಧಿಕಾರದಲ್ಲಿದ್ದಾಗ ಯಾಕೆ ನಿಮ್ಮ ಆತ್ಮಸಾಕ್ಷಿ ಎಚ್ಚರಗೊಳ್ಳಲಿಲ್ಲ? ಈ ಮಾತಿನ ವಿಶ್ವಾಸಾರ್ಹತೆಯನ್ನು ಜನತೆ ಹಾಗೂ ಪತ್ರಕರ್ತರು ಗಮನಿಸುತ್ತಾರೆ. ಇವೆಲ್ಲವೂ ಸತ್ಯವೇ ಆಗಿದ್ದರೆ ನೀವು ರಾಜ್ಯಪಾಲರಾಗಿದ್ದಾಗ ಏಕೆ ಮೌನವಾಗಿದ್ದಿರಿ? ಇವೆಲ್ಲ ಸಾರ್ವಜನಿಕ ಚರ್ಚೆಯ ಸಂಗತಿಗಳಲ್ಲ. ಜನರಿಂದ ಬಚ್ಚಿಡುವಂಥ ಏನನ್ನೂ ಬಿಜೆಪಿ ನೇತೃತ್ವದ ಸರ್ಕಾರ ಮಾಡಿಲ್ಲ ಎಂದು ದೇಶದ ಜನತೆಗೆ ಹೇಳಲು ನಾನು ಬಯಸುತ್ತೇನೆ. ಒಂದು ವೇಳೆ ವೈಯಕ್ತಿಕ, ರಾಜಕೀಯ ಹಿತಾಸಕ್ತಿಗಾಗಿ ಇಂತಹ ಹೇಳಿಕೆಗಳನ್ನು ನೀಡಿದ್ದರೆ ಅದನ್ನು ದೇಶದ ಜನತೆ ಹಾಗೂ ಮಾಧ್ಯಮಗಳು ಮೌಲ್ಯಮಾಪನ ಮಾಡಬೇಕು" ಎಂದು ಮನವಿ ಮಾಡಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಲ್ಲಿನ ವಿಮಾ ಹಗರಣದ ಕುರಿತು ಸ್ಪಷ್ಟನೆ ನೀಡುವಂತೆ ಸಿಬಿಐ ತನ್ನನ್ನು ವಿಚಾರಣೆಗೆ ಕರೆದಿದೆ ಎಂದು ಶುಕ್ರವಾರ ಸತ್ಯಪಾಲ್ ಮಲಿಕ್ ಹೇಳಿದ್ದರು.

share
Next Story
X