ಹೆಲಿಕಾಪ್ಟರ್ ಪರಿಶೀಲನೆ ವಿಳಂಬಕ್ಕೆ ಅಸಮಾಧಾನ: ಚುನಾವಣಾ ಅಧಿಕಾರಿಗಳಿಗೆ ಡಿಕೆಶಿ ಹೇಳಿದ್ದಿಷ್ಟು…

ಬೆಂಗಳೂರು: ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದ್ದು, ಚುನಾವಣಾ ಪ್ರಚಾರಕ್ಕಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಹೆಲಿಕಾಪ್ಟರ್ ನಲ್ಲೇ ಹೆಚ್ಚಾಗಿ ಪ್ರಯಾಣಿಸುತ್ತಿದ್ದಾರೆ.
ನಿನ್ನೆ ಮತ್ತು ಇಂದು ಚುನಾವಣಾ ಆಯೋಗದ ಅಧಿಕಾರಿಗಳು ಅವರ ಹೆಲಿಕಾಪ್ಟರ್ ಅನ್ನು ಪರಿಶೀಲನೆ ನಡೆಸಿದ್ದು, ಇದು ಡಿ.ಕೆ.ಶಿವಕುಮಾರ್ ಅಸಮಾಧಾನಕ್ಕೆ ಕಾರಣವಾಗಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಡಿಕೆಶಿ, 'ಚುನಾವಣಾ ಆಯೋಗದ ಅಧಿಕಾರಿಗಳು ನಿನ್ನೆ ಮತ್ತು ಇಂದು ಎರಡೂ ದಿನ ನನ್ನ ಹೆಲಿಕಾಪ್ಟರ್ಅನ್ನೇ ಪರಿಶೀಲನೆ ನಡೆಸಿದ್ದಾರೆ. ಅಧಿಕಾರಿಗಳು ಪ್ರತಿದಿನ ಪರಿಶೀಲಿಸಲು ನನ್ನ ಅಭ್ಯಂತರವೇನಿಲ್ಲ. ಆದರೆ, ಕಾಲಮಿತಿಯೊಳಗೆ ಪರಿಶೀಲನೆ ಮುಗಿಸಿ ಚುನಾವಣಾ ಪ್ರಚಾರಕ್ಕೆ ಅನುವು ಮಾಡಿಕೊಡಬೇಕು' ಎಂದು ಒತ್ತಾಯಿಸಿದ್ದಾರೆ.
ಚುನಾವಣಾ ಆಯೋಗದ ಅಧಿಕಾರಿಗಳು ನಿನ್ನೆ ಮತ್ತು ಇಂದು ಎರಡೂ ದಿನ ನನ್ನ ಹೆಲಿಕಾಪ್ಟರ್ಅನ್ನೇ ಪರಿಶೀಲನೆ ನಡೆಸಿದ್ದಾರೆ. ಅಧಿಕಾರಿಗಳು ಪ್ರತಿದಿನ ಪರಿಶೀಲಿಸಲು ನನ್ನ ಅಭ್ಯಂತರವೇನಿಲ್ಲ. ಆದರೆ, ಕಾಲಮಿತಿಯೊಳಗೆ ಪರಿಶೀಲನೆ ಮುಗಿಸಿ ಚುನಾವಣಾ ಪ್ರಚಾರಕ್ಕೆ ಅನುವು ಮಾಡಿಕೊಡಬೇಕು. pic.twitter.com/BSwUJjhmHP
— DK Shivakumar (@DKShivakumar) April 23, 2023
