Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸುಡಾನ್ ನಿಂದ ಭಾರತೀಯರು ಸೇರಿದಂತೆ 66...

ಸುಡಾನ್ ನಿಂದ ಭಾರತೀಯರು ಸೇರಿದಂತೆ 66 ವಿದೇಶಿಯರನ್ನು ತೆರವುಗೊಳಿದ ಸೌದಿ ಅರೇಬಿಯ

23 April 2023 8:40 PM IST
share
ಸುಡಾನ್ ನಿಂದ ಭಾರತೀಯರು ಸೇರಿದಂತೆ 66 ವಿದೇಶಿಯರನ್ನು ತೆರವುಗೊಳಿದ ಸೌದಿ ಅರೇಬಿಯ

ಹೊಸದಿಲ್ಲಿ, ಎ.23: ಸೌದಿ ಅರೇಬಿಯದ ಅಧಿಕಾರಿಗಳು ಶನಿವಾರ ಭಾರತೀಯರು ಸೇರಿದಂತೆ 66 ವಿದೇಶಿಯರನ್ನು ಅಂತರ್ಯುದ್ಧ ಪೀಡಿತ ಸುಡಾನಿನಿಂದ ತೆರವುಗೊಳಿಸಿದ್ದಾರೆ ಎಂದು ಆ ದೇಶದ ವಿದೇಶಾಂಗ ಸಚಿವಾಲಯವು ಪ್ರಕಟಿಸಿದೆ. ತೆರವುಗೊಂಡಿರುವ ಭಾರತೀಯರ ನಿಖರವಾದ ಸಂಖ್ಯೆ ತಿಳಿದುಬಂದಿಲ್ಲ.

ಸೌದಿ ಅರೇಬಿಯದ 91 ಮತ್ತು ಇತರ ದೇಶಗಳ 66 ಪ್ರಜೆಗಳನ್ನು ಹೊತ್ತ ಹಡಗು ಶನಿವಾರ ಪೋರ್ಟ್ ಸುಡಾನ್ನಿಂದ ಜೆದ್ದಾಕ್ಕೆ ಪ್ರಯಾಣಿಸಿದೆ ಎಂದು ಸುದ್ದಿಸಂಸ್ಥೆಯು ವರದಿ ಮಾಡಿದೆ. ತೆರವುಗೊಂಡವರಲ್ಲಿ ರಾಜತಾಂತ್ರಿಕರು ಮತ್ತು ಅಂತರರಾಷ್ಟ್ರೀಯ ಅಧಿಕಾರಿಗಳು ಸೇರಿದ್ದಾರೆ. ಎರಡು ಮಿಲಿಟರಿ ಬಣಗಳು ನಿಯಂತ್ರಣಕ್ಕಾಗಿ ಹೋರಾಡುತ್ತಿರುವ ಸೂಡಾನ್ನಿಂದ ಇದು ಮೊದಲ ನಾಗರಿಕರ ತೆರವು ಕಾರ್ಯಾಚರಣೆಯಾಗಿದೆ.

ಸುಡಾನ್ನಲ್ಲಿ ಅಂತರ್ಯುದ್ಧ ಆರಂಭಗೊಂಡ ಬಳಿಕ ರಾಜಧಾನಿ ಖಾರ್ಟೂಮ್ ಮತ್ತು ಇತರ ನಗರಗಳಲ್ಲಿ ಹಲವಾರು ಭಾರತೀಯರು ಸಿಕ್ಕಿಹಾಕಿಕೊಂಡಿದ್ದಾರೆ. ಜ.ಅಬ್ದೆಲ್ ಫತ್ತಾಹ್ ಅಲ್-ಬುರ್ಹಾನ್ ನೇತೃತ್ವದ ಸೂಡಾನ್ ಸೇನೆಯು ಜ.ಮುಹಮ್ಮದ್ ಹಮ್ದಾನ್ ಡಾಗಲೋ ನೇತೃತ್ವದ ಅರೆಸೇನಾ ಪಡೆ ರ್ಯಾಪಿಡ್ ಸಪೋರ್ಟ್ ಫೋರ್ಸಸ್ ಜೊತೆ ಕಾದಾಡುತ್ತಿದೆ.

ಎ.16ರಂದು ಗುಂಡಿನ ಕಾಳಗದ ನಡುವೆ ಗುಂಡು ತಗುಲಿ ಅಲ್ಬರ್ಟ್ ಆಗಸ್ಟಿನ್ ಎಂಬ ಭಾರತೀಯ ಪ್ರಜೆ ಮೃತಪಟ್ಟಿದ್ದರು. ಮನೆ ಬಿಟ್ಟು ಹೊರಗೆ ತೆರಳದಂತೆ ಸೂಡಾನಿನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯು ಎ.20ರಂದು ಆ ದೇಶದಲ್ಲಿರುವ ಭಾರತೀಯರಿಗೆ ಸೂಚಿಸಿತ್ತು.

ಸೇನೆಯ ಇತರ ಶಾಖೆಗಳ ಬೆಂಬಲದೊಂದಿಗೆ ತೆರವು ಕಾರ್ಯಾಚರಣೆಯನ್ನು ನಡೆಸಲಾಗಿದೆ ಎಂದು ಸೌದಿ ಅರೇಬಿಯಾ ಶನಿವಾರ ತಿಳಿಸಿದೆ. ಸುಡಾನ್ನಿಂದ ರಕ್ಷಿಸಲಾಗಿರುವವರಲ್ಲಿ ಭಾರತೀಯರಲ್ಲದೆ ಕುವೈತ್, ಖತರ್, ಯುಎಇ, ಈಜಿಪ್ಟ್, ಟ್ಯುನಿಷಿಯಾ, ಪಾಕಿಸ್ತಾನ, ಬಾಂಗ್ಲಾದೇಶ, ಫಿಲಿಪ್ಪೀನ್ಸ್, ಬುರ್ಕಿನಾ ಫಾಸೋ ಮತ್ತು ಕೆನಡಾಗಳ ಪ್ರಜೆಗಳೂ ಸೇರಿದ್ದಾರೆ.

ರಕ್ಷಿಸಲಾಗಿರುವ ವಿದೇಶಿ ಪ್ರಜೆಗಳನ್ನು ಅವರ ದೇಶಗಳಿಗೆ ರವಾನಿಸಲು ಎಲ್ಲ ಅಗತ್ಯ ಸಿದ್ಧತೆಗಳನ್ನು ನಡೆಸಲಾಗುತ್ತಿದೆ ಎಂದು ಸೌದಿ ಅರೇಬಿಯ ಹೇಳಿಕೆಯಲ್ಲಿ ತಿಳಿಸಿದೆ.

share
Next Story
X