Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ರಾಜ್ಯೋತ್ಸವ ಪ್ರಶಸ್ತಿ ವಿಜೇತ ಸಿರಿ...

ರಾಜ್ಯೋತ್ಸವ ಪ್ರಶಸ್ತಿ ವಿಜೇತ ಸಿರಿ ಕಾವ್ಯದ ಕಣಜ ಮಾಚಾರು ಗೋಪಾಲ ನಾಯ್ಕ ನಿಧನ

24 April 2023 2:28 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ರಾಜ್ಯೋತ್ಸವ ಪ್ರಶಸ್ತಿ ವಿಜೇತ ಸಿರಿ ಕಾವ್ಯದ ಕಣಜ ಮಾಚಾರು ಗೋಪಾಲ ನಾಯ್ಕ ನಿಧನ

ಉಡುಪಿ : ತುಳುನಾಡಿನ ಹಿರಿಯ ಜನಪದ ಕಲಾವಿದ, ತುಳು ಸಿರಿ ಕಾವ್ಯದ ಕಣಜ ಎಂದೇ ಖ್ಯಾತಿ ಪಡೆದು 2005ರಲ್ಲಿ ರಾಜ್ಯೋತ್ಸವ ಪ್ರಶಸ್ತಿ ವಿಜೇತರಾದ ಬೆಳ್ತಂಗಡಿ ತಾಲೂಕು ಬೆಳಾಲು ಗ್ರಾಮದ ಮಾಚಾರು ಗೋಪಾಲ ನಾಯ್ಕ್ (85) ಅವರು ಇಂದು ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. 

ಅವರು ಪತ್ನಿ, ಪುತ್ರ ಹಾಗೂ ನಾಲ್ವರು ಪುತ್ರಿಯರನ್ನು ಅಗಲಿದ್ದಾರೆ.

ಸಿರಿ ಸಂಧಿ ಪಾಡ್ದನದ 15,683 ಸಾಲುಗಳ ಸುಧೀರ್ಘ ಪಠ್ಯವನ್ನು ನಿರರ್ಗಳವಾಗಿ ಕಂಠಪಾಠದ ಮೂಲಕ ಹಾಡುತಿದ್ದ ಇವರು ಸಿರಿ ಪಾಡ್ದನಗಳ ಕುರಿತು 80ರ ದಶಕದಲ್ಲಿ ಸಂಶೋಧನೆ ನಡೆಸಿದ ಜನಪದ ವಿದ್ವಾಂಸ ಫಿನ್ಲೆಂಡಿನ ಡಾ.ಲ್ಯಾರಿ ಹ್ಯಾಂಕೋ ಅವರಿಗೆ ಮಾರ್ಗದರ್ಶಕರಾಗಿ ಸಿರಿಸಂಧಿ ಪಠ್ಯದ ಸಂಗ್ರಹಕ್ಕೆ ನೆರವಾಗಿದ್ದರು.

ತುಳು ಜನಪದ, ಪುರಾಣ ಹಾಗೂ ಪರಂಪರೆಗಳ ಕುರಿತು ಅಪಾರವಾದ ತಿಳುವಳಿಕೆಯನ್ನು ಹೊಂದಿದ್ದ ಗೋಪಾಲ ನಾಯ್ಕ, ಉಡುಪಿಯ ಪ್ರಾದೇಶಿಕ ಜಾನಪದ ರಂಗಕಲೆಗಳ ಅಧ್ಯಯನ ಕೇಂದ್ರದ (ಆರ್‌ಆರ್‌ಸಿ) ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಸಿರಿ ಪಾಡ್ದನ ಪದ್ಯದ ದಾಖಲೀಕರಣದಲ್ಲಿ ಮುಖ್ಯ ಪಾತ್ರವನ್ನು ವಹಿಸಿದ್ದರು. 

ಆರ್‌ಆರ್‌ಸಿಯಲ್ಲಿ ಸಂತಾಪ ಸಭೆ: ಮಂಗಳೂರಿನಲ್ಲಿ ನಿಧನರಾದ ಸಿರಿಪಾಡ್ಡನದ ಕಣಜ ಎಂದೇ ಹೆಸರಾದ ಮಾಚಾರು ಗೋಪಾಲ ನಾಯ್ಕ ಅವರ ನಿಧನಕ್ಕೆ ಪ್ರಾದೇಶಿಕ ಜಾನಪದ ರಂಗಕಲೆಗಳ ಅಧ್ಯಯನ ಕೇಂದ್ರದ ವತಿ ಯಿಂದ ಸಂತಾಪ ಸಭೆ ಇಂದು ಆರ್‌ಆರ್‌ಸಿಯ ಸಭಾಂಗಣದಲ್ಲಿ ಖ್ಯಾತ ಜಾನಪದ ವಿದ್ವಾಂಸ ಡಾ.ಬಿ.ಎ ವಿವೇಕ ರೈ ಅಧ್ಯಕ್ಷತೆಯಲ್ಲಿ ನಡೆಯಿತು.

ಸಿರಿ ಆರಾಧನೆಯಲ್ಲಿ ಮುಖ್ಯ ಪಾತ್ರ ನಿರ್ವಸಿದ ಗೋಪಾಲ ನಾಯ್ಕ ಒಬ್ಬ ಕಲಾವಿದರಲ್ಲದೆ, ವಿದ್ವಾಂಸರೂ ಆಗಿದ್ದರು. ಫಿನ್ಲೆಂಡ್‌ನ ಲ್ಯಾರಿ ಹ್ಯಾಂಕೊ ಹಾಗೂ ಪ್ರೊ.ಕು.ಶಿ ಹರಿದಾಸ ಭಟ್ ನೇತೃತ್ವದಲ್ಲಿ ಆರ್‌ಆರ್‌ಸಿಯಲ್ಲಿ ನಡೆಸಿದ ಸಿರಿ ಪಾಡ್ದನ ಯೋಜನೆಯ ಅನುಷ್ಠಾನದಲ್ಲಿ ಪ್ರಮುಖರಾಗಿದ್ದರು. ಅವರು ತುಳುನಾಡಿನ ಹೋಮರ್. ಅವರ ಜ್ಞಾನ ಸಂಪತ್ತು, ಕಾವ್ಯಕಟ್ಟುವ ಪ್ರತಿಭೆ ವಿಶ್ಲೇಷಣೆಯ ರೀತಿ ಬೆರಗು ತರಿಸುವಂತಿತ್ತು ಎಂದು ಪ್ರೊ. ರೈ  ಗೋಪಾಲ ನಾಯ್ಕರಿಗೆ ಶೃದ್ದಾಂಜಲಿ ಅರ್ಪಿಸುತ್ತಾ ಹೇಳಿದರು.

ಇನ್ನೊಬ್ಬ ಜಾನಪದ ವಿದ್ವಾಂಸ ಡಾ. ಕೆ. ಚಿನ್ನಪ್ಪ ಗೌಡ ಅವರು ಮಾತನಾಡಿ  ಗೋಪಾಲ ನಾಯ್ಕ್ ತುಳುನಾಡಿನ ಸಾಂಸ್ಕೃತಿಕ ಲೋಕದ ದೈತ್ಯರು. ಅವರ  250 ಗಂಟೆ ವೀಡಿಯೊ, 500 ಗಂಟೆ ಆಡಿಯೋ ಹಾಗೂ 5000 ಚಿತ್ರಗಳ ಸಂಗ್ರಹ ಆರ್‌ಆರ್‌ಸಿ ಸಂಗ್ರಹದಲ್ಲಿದೆ. ಇವುಗಳಲ್ಲಿ ಕಾವ್ಯದ ಪ್ರಸ್ತುತಿ ಹಾಗೂ ಸಿರಿ ಆರಾಧನೆಯ ವಿವರವಿದೆ. ಅವರೊಬ್ಬ ಮಹಾ ವಿದ್ವಾಂಸ ಎಂದು ಬಣ್ಣಿಸಿ ತುಳು ಪಾಡ್ದನ ಲೋಕಕ್ಕೆ ಅವರ ಕೊಡುಗೆಯನ್ನು ಸ್ಮರಿಸಿದರು.

ಗೋಪಾಲ ನಾಯ್ಕ್ ಅವರಿಗೆ 2005ರಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಜಾನಪದ ಶ್ರೀ ಪ್ರಶಸ್ತಿ, ಕರ್ನಾಟಕ ತುಳು ಅಕಾಡೆಮಿ ಗೌರವ ಪ್ರಶಸ್ತಿ ಮುಂತಾದ ಪ್ರಶಸ್ತಿಗಳು ಲಭಿಸಿವೆ.

ಮೃತರ ಆತ್ಮಕ್ಕೆ ಶಾಂತಿಕೋರಿ ಮೌನ ಪ್ರಾರ್ಥನೆ ಸಲ್ಲಿಸಲಾಯಿತು. ಸಭೆಯಲ್ಲಿ ಪ್ರೊ.ಎ.ವಿ.ನಾವಡ, ಡಾ.ಎಸ್.ಡಿ ಶೆಟ್ಟಿ, ಪ್ರೊ.ಮುರಳೀಧರ ಉಪಾಧ್ಯಾಯ, ಡಾ.ಎನ್.ಟಿ ಭಟ್, ಡಾ.ಮಹಾಬಲೇಶ್ವರ ರಾವ್, ಡಾ. ಪಾದೇಕಲ್ಲು ವಿಷ್ಣು ಭಟ್, ಡಾ.ಅರುಣ್ ಕುಮಾರ್ ಎಸ್.ಆರ್, ಡಾ.ರೇಖಾ ಬನ್ನಾಡಿ, ಕೆ.ಎಲ್. ಕುಂಡಂತಾಯ ಹಾಗೂ ಆರ್‌ಆರ್‌ಸಿಯ ಆಡಳಿತಾಧಿಕಾರಿ ಡಾ. ಬಿ. ಜಗದೀಶ್ ಶೆಟ್ಟಿ ಉಪಸ್ಥಿತರಿದ್ದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X