Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಗಾಂಜಾ ಕಳ್ಳಸಾಗಣೆ ಆರೋಪ: ಭಾರತೀಯ ಮೂಲದ...

ಗಾಂಜಾ ಕಳ್ಳಸಾಗಣೆ ಆರೋಪ: ಭಾರತೀಯ ಮೂಲದ ವ್ಯಕ್ತಿಯನ್ನು ನೇಣಿಗೇರಿಸಿದ ಸಿಂಗಾಪುರ

26 April 2023 11:45 AM IST
share
ಗಾಂಜಾ ಕಳ್ಳಸಾಗಣೆ ಆರೋಪ: ಭಾರತೀಯ ಮೂಲದ ವ್ಯಕ್ತಿಯನ್ನು ನೇಣಿಗೇರಿಸಿದ ಸಿಂಗಾಪುರ

ಬ್ಯಾಂಕಾಕ್: ಮರಣ ದಂಡನೆಯನ್ನು ವಿಧಿಸಬಾರದು ಎಂಬ ಪ್ರಮುಖ ಮರಣ ದಂಡನೆ ವಿರೋಧಿ ಹೋರಾಟಗಾರರ ಮನವಿಯನ್ನು ಸರ್ಕಾರವು ನಿರಾಕರಿಸಿದ್ದರಿಂದ ಮಾದಕ ವಸ್ತು ಕಳ್ಳ ಸಾಗಾಣಿಕೆಯಲ್ಲಿ ದೋಷಿಯೆಂದು ಘೋಷಿತನಾಗಿದ್ದ 46 ವರ್ಷದ ಭಾರತೀಯ ಮೂಲದ ವ್ಯಕ್ತಿಯನ್ನು ಬುಧವಾರ ಸಿಂಗಾಪುರದಲ್ಲಿ ನೇಣಿಗೇರಿಸಲಾಗಿದೆ.

ಅಕ್ಟೋಬರ್ 9, 2018ರಂದು ಒಂದು ಕೆಜಿಗೂ ಹೆಚ್ಚು ಗಾಂಜಾವನ್ನು ಕಳ್ಳ ಸಾಗಣೆ ಮಾಡಿದ ಆರೋಪಕ್ಕೆ ಗುರಿಯಾಗಿದ್ದ ತಂಗರಾಜು ಸುಪ್ಪಯ್ಯ ಎಂಬ ವ್ಯಕ್ತಿಗೆ ನ್ಯಾಯಾಲಯವು ಮರಣ ದಂಡನೆ ವಿಧಿಸಿತ್ತು. ಮಾದಕ ದ್ರವ್ಯ ಸೇವನೆ ಹಾಗೂ ಮಾದಕ ದ್ರವ್ಯ ಪತ್ತೆ ಪರೀಕ್ಷೆಗೆ ಒಳಗಾಗಲು ವಿಫಲನಾಗಿದ್ದರಿಂದ 2014ರಲ್ಲಿ ಆತನನ್ನು ಬಂಧಿಸಲಾಗಿತ್ತು.

ಮಂಗಳವಾರ ತಂಗರಾಜುಗೆ ವಿಧಿಸಿರುವ ಮರಣ ದಂಡನೆಯ ಕುರಿತು ತಮ್ಮ ಬ್ಲಾಗ್‌ಸ್ಪಾಟ್‌ನಲ್ಲಿ "ತಂಗರಾಜು ಏಕೆ ಸಾಯಲು ಅರ್ಹನಲ್ಲ?" ಎಂಬ ಪೋಸ್ಟ್ ಮಾಡಿದ್ದ ಬ್ರಿಟಿಷ್ ಕೋಟ್ಯಧಿಪತಿ ರಿಚರ್ಡ್ ಬ್ರಾನ್ಸನ್, "ಸುಪ್ಪಯ್ಯಗೆ ವಿಧಿಸಲಾಗಿರುವ ಶಿಕ್ಷೆಯು ಮಾನದಂಡಗಳಿಗೆ ಅನುಗುಣವಾಗಿಲ್ಲ ಮತ್ತು ಸಿಂಗಾಪುರವು ಮುಗ್ಧ ವ್ಯಕ್ತಿಯನ್ನು ಹತ್ಯೆಗೈಯ್ಯುವುದರಲ್ಲಿದೆ" ಎಂದು ಕಳವಳ ವ್ಯಕ್ತಪಡಿಸಿದ್ದರು.

ಈ ಪೋಸ್ಟ್‌ಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದ ಸಿಂಗಾಪುರ ಗೃಹ ವ್ಯವಹಾರಗಳ ಸಚಿವಾಲಯವು, ಮರಣ ದಂಡನೆಗೆ ಸಂಬಂಧಿಸಿದಂತೆ ಬ್ರಾನ್ಸನ್ ಅವರ ಸಿಂಗಾಪುರ ಪ್ರಜೆಗಳ ಕುರಿತ ದೃಷ್ಟಿಕೋನವು ದೇಶದ ನ್ಯಾಯಾಧೀಶರು ಹಾಗೂ ದೇಶದ ಅಪರಾಧ ನ್ಯಾಯ ವ್ಯವಸ್ಥೆಗೆ ಅಗೌರವ ತೋರಿದೆ ಎಂದು ಟೀಕಿಸಿದೆ.

ಬ್ರಾನ್ಸನ್ ಅಲ್ಲದೆ ಸಿಂಗಾಪುರದಲ್ಲಿನ ಯೂರೋಪ್ ಒಕ್ಕೂಟದ ನಿಯೋಗ ಹಾಗೂ ಆಸ್ಟ್ರೇಲಿಯಾದ ಸಂಸದ ಗ್ರಹಾಂ ಪೆರೆಟ್ ಕೂಡಾ ಮರಣ ದಂಡನೆ ಕುರಿತು ಹೇಳಿಕೆ ನೀಡಿದ್ದರು.

ಸೋಮವಾರ ಸಿಂಗಾಪೂರದಲ್ಲಿನ ಯೂರೋಪ್ ಒಕ್ಕೂಟದ ಸದಸ್ಯ ದೇಶಗಳು, ನಾರ್ವೆ ಹಾಗೂ ಸ್ವಿಝರ್ಲೆಂಡ್‌ನ ರಾಯಭಾರಿ ನಿಯೋಗಗಳು ತಂಗರಾಜುಗೆ ವಿಧಿಸಿರುವ ಮರಣ ದಂಡನೆಯನ್ನು ತಡೆ ಹಿಡಿದು, ಅದನ್ನು ಮರಣ ದಂಡನೆಯೇತರ ಶಿಕ್ಷೆಯನ್ನಾಗಿ ಪರಿವರ್ತಿಸಬೇಕು ಎಂದು ಪ್ರಾಧಿಕಾರಗಳನ್ನು ಒತ್ತಾಯಿಸಿದ್ದವು.

ಕಳೆದ ಗುರುವಾರ ಈ ಕುರಿತು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದ ಪೆರೆಟ್, "ತಂಗರಾಜುಗೆ ಮರಣ ದಂಡನೆ ವಿಧಿಸುವ ಯೋಜನೆಯು ಅಂತಾರಾಷ್ಟ್ರೀಯ ಕಾನೂನು ಮಾನದಂಡಗಳ ಉಲ್ಲಂಘನೆಯಾಗಿದೆ" ಎಂದು ಪ್ರತಿಪಾದಿಸಿದ್ದರು ಎಂದು ವರದಿಯಾಗಿದೆ.

ಆದರೆ, ಈ ಆಗ್ರಹಗಳನ್ನು ತಳ್ಳಿ ಹಾಕಿರುವ ಸಿಂಗಾಪುರ ಗೃಹ ವ್ಯವಹಾರಗಳ ಸಚಿವಾಲಯವು, ಮಾದಕ ದ್ರವ್ಯ ಕಳ್ಳ ಸಾಗಣೆ ನಿಭಾವಣೆ ಕುರಿತ ತನ್ನ ಶೂನ್ಯ ಸಹಿಷ್ಣುತೆ ಹಾಗೂ ಬಹು ಮಾದರಿ ದೃಷ್ಟಿಕೋನವನ್ನು ಪುನರುಚ್ಚರಿಸಿದ್ದು, ಈ ನೀತಿಯಲ್ಲಿ ಪುನರ್ವಸತಿ ಕಾರ್ಯಕ್ರಮಗಳೂ ಸೇರಿವೆ ಎಂದು ಸ್ಪಷ್ಟಪಡಿಸಿದೆ.

share
Next Story
X