Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮುಸ್ಲಿಮ್ ದಂಪತಿಯ ಮದುವೆ ಪ್ರಮಾಣ ಪತ್ರ...

ಮುಸ್ಲಿಮ್ ದಂಪತಿಯ ಮದುವೆ ಪ್ರಮಾಣ ಪತ್ರ ಮನೆಬಾಗಿಲಿಗೆ; ದ.ಕ. ಜಿಲ್ಲೆಯಲ್ಲಿ ಸ್ಪೀಡ್ ಪೋಸ್ಟ್ ಮೂಲಕ ಸೇವೆ ಆರಂಭ

26 April 2023 5:10 PM IST
share
ಮುಸ್ಲಿಮ್ ದಂಪತಿಯ ಮದುವೆ ಪ್ರಮಾಣ ಪತ್ರ ಮನೆಬಾಗಿಲಿಗೆ; ದ.ಕ. ಜಿಲ್ಲೆಯಲ್ಲಿ ಸ್ಪೀಡ್ ಪೋಸ್ಟ್ ಮೂಲಕ ಸೇವೆ ಆರಂಭ

ಮಂಗಳೂರು : ದ.ಕ.ಜಿಲ್ಲೆಯಲ್ಲಿ ಸ್ಪೀಡ್ ಪೋಸ್ಟ್ ಮೂಲಕ ಮುಸ್ಲಿಮ್ ದಂಪತಿಯ ಮದುವೆ ಪ್ರಮಾಣ ಪತ್ರವನ್ನು ಮನೆ ಬಾಗಿಲಿಗೆ ತಲುಪಿಸುವ ಯೋಜನೆಗೆ ಬುಧವಾರ ಚಾಲನೆ ನೀಡಲಾಯಿತು.

ದ.ಕ.ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಬಿ.ಎ. ಅಬ್ದುಲ್ ನಾಸಿರ್ ಲಕ್ಕಿಸ್ಟಾರ್ ಹಾಗೂ ಮಂಗಳೂರು ವಿಭಾಗದ ಹಿರಿಯ ಅಂಚೆ ಅಧೀಕ್ಷಕ ಶ್ರೀಹರ್ಷ ಎನ್. ಅವರು ಈ ಬಗ್ಗೆ ಒಪ್ಪಂದ ಮಾಡಿಕೊಂಡರು. ಅದರಂತೆ ರಾಜ್ಯದಲ್ಲೇ ಮೊದಲ ಬಾರಿಗೆ ದ.ಕ.ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಮೂಲಕ ವಿತರಿಸಲಾಗುವ ಮದುವೆ ಪ್ರಮಾಣ ಪತ್ರಗಳನ್ನು ಸ್ಪೀಡ್ ಪೋಸ್ಟ್ ಸೇವೆಯ ಮೂಲಕ ಅರ್ಜಿದಾರರ ಮನೆಬಾಗಿಲಿಗೆ ತಲುಪಿಸುವ ವ್ಯವಸ್ಥೆ ಜಾರಿಗೆ ಬಂದಿದೆ.

ಮದುವೆ ಪ್ರಮಾಣ ಪತ್ರಗಳಿಗೆ ಅರ್ಜಿ ಸಲ್ಲಿಸುವಾಗ ವಕ್ಫ್ ಸಲಹಾ ಸಮಿತಿಯು ಅರ್ಜಿದಾರರಿಗೆ ಎರಡು ಆಯ್ಕೆ ಗಳನ್ನು ನೀಡುತ್ತದೆ. ಅರ್ಜಿದಾರರು ದ.ಕ. ಜಿಲ್ಲಾ ವಕ್ಫ್ ಕಚೇರಿಗೆ ಖುದ್ದಾಗಿ ಭೇಟಿ ನೀಡಿ ಈ ಪ್ರಮಾಣ ಪತ್ರವನ್ನು ಪಡೆದುಕೊಳ್ಳಬಹುದು ಅಥವಾ ಸ್ಪೀಡ್ ಪೋಸ್ಟ್ ಸೇವೆಯ ಮೂಲಕ ಪ್ರಮಾಣ ಪತ್ರವನ್ನು ತಮ್ಮ ಮನೆಬಾಗಿಲಲ್ಲಿ ಪಡೆದುಕೊಳ್ಳಬಹುದು.

ಗ್ರಾಹಕರ ಆಯ್ಕೆಯು ಕ್ರ.ಸಂ 2 ಆಗಿದ್ದಲ್ಲಿ ಮದುವೆ ಪ್ರಮಾಣ ಪತ್ರದ ಅರ್ಜಿಯಲ್ಲಿ ಪ್ರಮಾಣ ಪತ್ರವನ್ನು ಸ್ಪೀಡ್ ಪೋಸ್ಟ್ ಮೂಲಕ  ಪಡೆದುಕೊಳ್ಳುವ ಆಯ್ಕೆಗೆ ಗುರುತು ಮಾಡಿ ಅರ್ಜಿಯನ್ನು ಕೌಂಟರ್‌ನಲ್ಲಿ ನೀಡಬೇಕು. ಈ ಪ್ರಮಾಣ ಪತ್ರದ ಅರ್ಜಿಯಲ್ಲಿ, ರವಾನೆಯಾಗಬೇಕಿರುವ ವಿಳಾಸ ಹಾಗೂ ಮೊಬೈಲ್ ಸಂಖ್ಯೆಯನ್ನು ಭರ್ತಿ ಮಾಡಬೇಕು ಹಾಗೂ 80 ರೂ.ವನ್ನು ರವಾನೆ ಮಾಡುವ ಸಂದರ್ಭ ಪೋಸ್ಟ್‌ಮ್ಯಾನ್‌ಗೆ ನೀಡಲು ತಮ್ಮ ಸಮ್ಮತಿ ಇದೆ ಎಂದು ಸಹಿ ಮಾಡಬೇಕು. ಪ್ರಮಾಣ ಪತ್ರವು ಮುದ್ರಣಗೊಂಡ ಬಳಿಕ ಅಂಚೆ ಇಲಾಖೆಯು ಈ ಪ್ರಮಾಣ ಪತ್ರವನ್ನು ಸ್ಪೀಡ್ ಪೋಸ್ಟ್ ಮೂಲಕ ಅರ್ಜಿದಾರರ ಮನೆಗೆ ರವಾನಿಸಲಿದೆ.

ಈ ಸೇವೆಯು ಸಂಪೂರ್ಣವಾಗಿ ಐಚ್ಭಿಕವಾಗಿದೆ. ಪ್ರಮಾಣ ಪತ್ರವನ್ನು ಭಾರತದ ಯಾವುದೇ ಊರಿಗೂ 80 ರೂ. ಶುಲ್ಕವನ್ನು ಪಾವತಿಸಿ ಸ್ಪೀಡ್ ಪೋಸ್ಟ್ ಸೇವೆಯ ಮೂಲಕ ಪಡೆಯಬಹುದು. ಅರ್ಜಿದಾರರು ಪ್ರಮಾಣ ಪತ್ರವನ್ನು ಮನೆಯ ವಿಳಾಸ ಅಥವಾ ಕಚೇರಿಯ ವಿಳಾಸದಲ್ಲೂ ಪಡೆಯಬಹುದು. ಅರ್ಜಿದಾರರ ಅನುಪಸ್ಥಿತಿಯಲ್ಲಿ ಅವರ ಕುಟುಂಬದ ಯಾವುದೇ ಸದಸ್ಯರು ಪ್ರಮಾಣಪತ್ರವನ್ನು ಪಡೆದುಕೊಳ್ಳಬಹುದು.

ದ.ಕ. ಜಿಲ್ಲಾ ವಕ್ಫ್  ಕಚೇರಿಗೆ ಅರ್ಜಿ ಸಲ್ಲಿಸಿದ 15 ದಿನದೊಳಗಾಗಿ ಪ್ರಮಾಣ ಪತ್ರವು ಮುದ್ರಣಗೊಳ್ಳಲಿದೆ. ನಂತರ ಅದನ್ನು 5 ದಿನಗಳ ಒಳಗಾಗಿ ಸ್ಪೀಡ್ ಪೋಸ್ಟ್ ಮೂಲಕ ಅರ್ಜಿದಾರರ ಮನೆ ಬಾಗಿಲಿಗೆ ತಲುಪಿಸಲಾಗು ವುದು. ಪ್ರತೀ ಹಂತದಲ್ಲೂ ಅರ್ಜಿದಾರರಿಗೆ ಎಸ್‌ಎಂಎಸ್ ಮೂಲಕ ಮಾಹಿತಿ ನೀಡಲಾಗುವುದು. ಈ ಸೇವೆಯನ್ನು ಪಡೆಯಲು ದ.ಕ. ಜಿಲ್ಲಾ ವಕ್ಫ್ ಕಚೇರಿ ಕೌಂಟರ್‌ನಲ್ಲಿ ಪ್ರತ್ಯೇಕ ಶುಲ್ಕ ಭರಿಸಬೇಕಾಗಿಲ್ಲ. ಸ್ಪೀಡ್ ಪೋಸ್ಟ್ ವಿತರಣೆಯ ಸಂದರ್ಭ ಪೋಸ್ಟ್‌ಮ್ಯಾನ್ ಮೂಲಕ 80 ರೂ. ನಿಗದಿತ ಶುಲ್ಕವನ್ನು ಅಂಚೆ ಕಚೇರಿಗೆ ಪಾವತಿಸಬೇಕು.

ಪ್ರಮಾಣ ಪತ್ರವನ್ನು ಪಡೆಯಲು ಪುನಃ ದ.ಕ. ಜಿಲ್ಲಾ ವಕ್ಫ್  ಕಚೇರಿಗೆ ಮತ್ತೆ ಮತ್ತೆ ಭೇಟಿ ನೀಡಬೇಕಾಗಿಲ್ಲ. ಪ್ರಮಾಣ ಪತ್ರವನ್ನು ಒಳಗೊಂಡ ಸ್ಪೀಡ್‌ಪೋಸ್ಟ್ ರವಾನೆಯ ಯಾವ ಹಂತದಲ್ಲಿವೆ ಎಂಬುದನ್ನು www.indiapost.gov.in ನಲ್ಲಿ ಟ್ರ್ಯಾಕ್ ಮಾಡಿ ತೆಗೆದುಕೊಳ್ಳಬಹುದು ಎಂದು ಅಂಚೆ ಅಧೀಕ್ಷಕ ಶ್ರೀ ಹರ್ಷ ತಿಳಿಸಿದ್ದಾರೆ.

share
Next Story
X