ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಗಲಭೆಗಳು ನಡೆಯಲಿವೆ ಎಂಬ ಅಮಿತ್ ಶಾ ಹೇಳಿಕೆಗೆ ಡಿಕೆಶಿ ಕಿಡಿ

ಬೆಂಗಳೂರು: 'ದೇಶದ ಅತ್ಯಂತ ಹಳೆಯ ಪಕ್ಷ ಅಧಿಕಾರಕ್ಕೆ ಬಂದರೆ ಕರ್ನಾಟಕದಲ್ಲಿ ಗಲಭೆಗಳು ನಡೆಯಲಿವೆ' ಎಂಬ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕಿಡಿಕಾರಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, 'ಕೇವಲ ರಾಜಕೀಯಕ್ಕಾಗಿ ಕೇಂದ್ರ ಗೃಹ ಸಚಿವರು ಇಷ್ಟು ಕೀಳುಮಟ್ಟಕ್ಕಿಳಿದಿರುವುದು ನಾಚಿಕೆಗೇಡಿನ ಸಂಗತಿ. ಬಿಜೆಪಿಯಿಂದ ಮಾತ್ರ ಇಂಥ ಅನಾಗರಿಕ ನಡೆ ಸಾಧ್ಯ. BJP ಆಡಳಿತಕ್ಕಿಂತ ಕಾಂಗ್ರೆಸ್ ಆಡಳಿತವಿರುವ ರಾಜ್ಯದಲ್ಲಿ ಜನರು ಯಾವಾಗಲೂ ಸುರಕ್ಷಿತವಾಗಿರುತ್ತಾರೆ. ಎಲ್ಲಕ್ಕಿಂತ ಹೆಚ್ಚಾಗಿ ಸಮಾನತೆ ಮತ್ತು ಶಾಂತಿಯನ್ನು ಸಾರಿದ ಬಸವಣ್ಣನವರ ನಾಡಿದು' ಎಂದು ತಿರುಗೇಟು ನೀಡಿದ್ದಾರೆ.
''ಕೇಂದ್ರ ಗೃಹ ಸಚಿವರು ಕನ್ನಡಿಗರಿಗೆ ಅವಮಾನ ಮಾಡಿದ್ದಾರೆ. ಅದಕ್ಕೆ ಪ್ರತಿಫಲ ಅನುಭವಿಸುತ್ತಾರೆ. ಬಿಜೆಪಿ ಪಾಪದ ಕೊಡ ತುಂಬಿದೆ. ಮೇ 13ಕ್ಕೆ ತಕ್ಕ ಶಾಸ್ತಿಯಾಗಲಿದೆ'' ಎಂದು ಡಿ.ಕೆ ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.
ಕೇವಲ ರಾಜಕೀಯಕ್ಕಾಗಿ ಕೇಂದ್ರ ಗೃಹ ಸಚಿವರು ಇಷ್ಟು ಕೀಳುಮಟ್ಟಕ್ಕಿಳಿದಿರುವುದು ನಾಚಿಕೆಗೇಡಿನ ಸಂಗತಿ. ಬಿಜೆಪಿಯಿಂದ ಮಾತ್ರ ಇಂಥ ಅನಾಗರಿಕ ನಡೆ ಸಾಧ್ಯ. BJP ಆಡಳಿತಕ್ಕಿಂತ ಕಾಂಗ್ರೆಸ್ ಆಡಳಿತವಿರುವ ರಾಜ್ಯದಲ್ಲಿ ಜನರು ಯಾವಾಗಲೂ ಸುರಕ್ಷಿತವಾಗಿರುತ್ತಾರೆ. ಎಲ್ಲಕ್ಕಿಂತ ಹೆಚ್ಚಾಗಿ ಸಮಾನತೆ ಮತ್ತು ಶಾಂತಿಯನ್ನು ಸಾರಿದ ಬಸವಣ್ಣನವರ ನಾಡಿದು.
— DK Shivakumar (@DKShivakumar) April 26, 2023
1/2 pic.twitter.com/LHobZ29UrP







