Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಕೆಯು ರೈತ ಚಳವಳಿಯನ್ನು ಪಠ್ಯದಿಂದ...

ಬಿಕೆಯು ರೈತ ಚಳವಳಿಯನ್ನು ಪಠ್ಯದಿಂದ ಕೈಬಿಟ್ಟ ಎನ್‌ಸಿಇಆರ್‌ಟಿ

26 April 2023 9:21 PM IST
share
ಬಿಕೆಯು ರೈತ ಚಳವಳಿಯನ್ನು ಪಠ್ಯದಿಂದ ಕೈಬಿಟ್ಟ ಎನ್‌ಸಿಇಆರ್‌ಟಿ

ಹೊಸದಿಲ್ಲಿ,ಎ.25: ಇತ್ತೀಚಿನ ವರ್ಷಗಳಲ್ಲಿ ರಾಷ್ಟ್ರಾದ್ಯಂತ ಗಮನಸೆಳೆದಿದ್ದ ಕೆಲವು ವಿಷಯಗಳನ್ನು ರಾಷ್ಟ್ರೀಯ ಶಿಕ್ಷಣ ಸಂಶೋಧನಾ ಮಂಡಳಿ (ಎನ್‌ಸಿಇಆರ್‌ಟಿ) ತನ್ನ ಪಠ್ಯಪುಸ್ತಕಗಳಿಂದ ಕೈಬಿಟ್ಟಿದ್ದು, ಅವುಗಳಲ್ಲಿ ಭಾರತೀಯ ಕಿಸಾನ್ ಯೂನಿಯನ್ ನೇತೃತ್ವದಲ್ಲಿ ನಡೆದ ರೈತ ಚಳವಳಿಯೂ ಒಂದಾಗಿದೆ ಎಂದು ‘ ದಿ ಟ್ರಿಬ್ಯೂನ್’ ವರದಿ ಮಾಡಿದೆ.

‌ಭಾರತೀಯ ಕಿಸಾನ್ ಯೂನಿಯನ್ನ ರೈತ ಚಳವಳಿಯು, 12ನೇ ತರಗತಿಯ ರಾಜಕೀಯಶಾಸ್ತ್ರದ ಪಠ್ಯಪುಸ್ತಕದಲ್ಲಿ ‘ಜನಪ್ರಿಯ ಚಳವಳಿಗಳ ಉದಯ’ (ರೈಸ್ ಆಫ್ ಪೊಪ್ಯುಲರ್ ಮೂವ್ಮೆಂಟ್ಸ್) ಪಠ್ಯದಲ್ಲಿ ಉಲ್ಲೇಖಿಸಲ್ಪಟ್ಟಿತ್ತು. ಆದರೆ ಈಗ ಅದನ್ನು ಪಠ್ಯಭಾಗದಿಂದ ತೆಗೆದುಹಾಕಲಾಗಿದೆಯೆಂದು ವರದಿ ಹೇಳಿದೆ.

‘‘80ರ ದಶಕದುದ್ದಕ್ಕೂ, ಭಾರತೀಯ ಕಿಸಾನ್ ಯೂನಿಯನ್ ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ಹಾಗೂ ರಾಷ್ಟ್ರ ರಾಜಧಾನಿಯಲ್ಲಿ ರೈತ ಚಳವಳಿಗಳನ್ನು ಆಯೋಜಿಸಿತ್ತು’’ ಎಂಬುದಾಗಿ ಪಠ್ಯದಲ್ಲಿ ಉಲ್ಲೇಖಿಸಲಾಗಿತ್ತು.

ಬಿಕೆಯು ನೇತೃತ್ವದ ರೈತಚಳವಳಿಯ ಕುರಿತ ವಿಷಯವನ್ನು ಎನ್‌ಸಿಇಆರ್‌ಟಿ ಪಠ್ಯದಿಂದ ಕೈಬಿಟ್ಟಿರುವ ವಿಚಾರವಾಗಿ ಕೇಂದ್ರ ಸರಕಾರದ ಪ್ರತಿನಿಧಿಗಳ ಜೊತೆ ತಾನು ಮಾತುಕತೆ ನಡೆಸುವುದಾಗಿ ಭಾರತೀಯ ಕಿಸಾನ್ ಯೂನಿಯನ್ ಹೇಳಿಕೆಯೊಂದರಲ್ಲಿ ತಿಳಿಸಿದೆ.

ಭಾರತೀಯ ಕಿಸಾನ್ಯೂನಿಯನ್ ಅನ್ನು ಮಹೇಂದ್ರ ಸಿಂಗ್ ಟಿಕಾಯತ್, ಚೌಧರಿ ಚರಣ್ ಸಿಂಗ್, ಎಂ.ಡಿ.ನಂಜುಂಡ ಸ್ವಾಮಿ, ನಾರಾಯಣಸ್ವಾಮಿ ನಾಯ್ಡು ಹಾಗೂ ಭೂಪಿಂದರ್ ಸಿಂಗ್ ಮಾನ್ ಸೇರಿದಂತೆ ಭಾರತದ ಪ್ರಮುಖ ರೈತ ನಾಯಕರು 1980 ದಶಕದ ಉತ್ತರಾರ್ಧದಲ್ಲಿ ಸ್ಥಾಪಿಸಿದ್ದರು.

ಪ್ರಸಕ್ತ ಮಹೇಂದ್ರ ಟಿಕಾಯತ್ ಅವರ ಪುತ್ರ ರಾಕೇಶ್ ಟಿಕಾಯತ್ ಅವರು ಭಾರತೀಯ ಕಿಸಾನ್ ಯೂನಿಯನ್ನ ನೇತೃತ್ವ ವಹಿಸಿದ್ದಾರೆ. 2021ರಲ್ಲಿ ಕೇಂದ್ರ ಸರಕಾರ ಜಾರಿಗೊಳಿಸಿದ್ದ ಮೂರು ಕೃಷಿ ಕಾಯ್ದೆಗಳ ವಿರುದ್ಧ ರಾಜಧಾನಿ ಹೊಸದಿಲ್ಲಿ ಸೇರಿದಂತೆ ದೇಶದ ವಿವಿಧೆಡೆ ರೈತ ಪ್ರತಿಭಟನೆಯನ್ನು ಬಿಕೆಯು ಆಯೋಜಿಸಿತ್ತು.

ಮೊಗಲ್ ಸಾಮ್ರಾಜ್ಯದ ಕುರಿತ ವಿವರಗಳು, ಆರೆಸ್ಸೆಸ್ ನ ಮೇಲೆ ನಿಷೇಧ ಹೇರಿಕೆ ಹಾಗೂ ಹಿಂದೂ-ಮುಸ್ಲಿಂ ಏಕತೆಯನ್ನು ಪ್ರತಿಪಾದಿಸಿದ್ದಕ್ಕಾಗಿ ಮಹಾತ್ಮಾಗಾಂಧಿಯವರ ಹತ್ಯೆ ನಡೆಸಲಾಯಿತು ಎಂಬ ವಿಷಯಗಳು ಎನ್‌ಸಿಇಆರ್‌ಟಿ ತನ್ನ ಪಠ್ಯಪುಸ್ತಕದಲ್ಲಿ ಕೈಬಿಟ್ಟಿರು ಇತರ ಪಠ್ಯ ಭಾಗಗಳಾಗಿವೆ.

share
Next Story
X