ಕನ್ನಡಿಗರಿಗೆ ‘ಕ್ರೈಮ್ ಕ್ಯಾಪಿಟಲ್’ ಯುಪಿ ಮಾದರಿ ಬೇಡ: ಆದಿತ್ಯನಾಥ್ ವಿರುದ್ಧ ಕಾಂಗ್ರೆಸ್ ಆಕ್ರೋಶ

ಬೆಂಗಳೂರು, ಎ. 26: ‘ಯುಪಿ ಸಿಎಂ ಆದಿತ್ಯನಾಥ್ ಅವರೇ, ತಮ್ಮ ರಾಜ್ಯ, ತಮ್ಮ ಆಡಳಿತ ನಡೆಯುತ್ತಿರುವುದು ಕನ್ನಡಿಗರು ಕಟ್ಟುತ್ತಿರುವ ಬೆವರಿನ ತೆರಿಗೆಯಲ್ಲಿ ಎನ್ನುವುದು ನೆನಪಿರಲಿ. ಕರ್ನಾಟಕದ ತೆರಿಗೆ ಹಣವನ್ನಷ್ಟೇ ಅಲ್ಲ, ಕರ್ನಾಟಕದ ಏರ್ ಶೋವನ್ನೂ ಹೈಜಾಕ್ ಮಾಡಲು ಯತ್ನಿಸಿದ ತಮ್ಮ ಉಪದೇಶ ಕನ್ನಡಿಗರಿಗೆ ಬೇಕಿಲ್ಲ. ಪರಾವಲಂಬಿ ಯೋಗಿ ಮಾತಾಡೋದೆಲ್ಲ ಡೋಂಗಿ’ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.
ಬುಧವಾರ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ದೇಶದ 100 ಅಪರಾಧ ಪ್ರಕರಣಗಳಲ್ಲಿ ಅತೀ ಹೆಚ್ಚು ಪ್ರಕರಣಗಳು ಉತ್ತರ ಪ್ರದೇಶದಲ್ಲಿ ನಡೆಯುತ್ತವೆ. ಅಪರಾಧದಲ್ಲಿ ಮುಂಚೂಣಿಯಲ್ಲಿರುವ ರಾಜ್ಯವಾದ ಯುಪಿಯ ಮುಖ್ಯಮಂತ್ರಿ ಕರ್ನಾಟಕಕ್ಕೆ ಬಂದು ಕಾನೂನು ಸುವ್ಯವಸ್ಥೆ ಹಾಗೂ ಅಪರಾಧದ ಬಗ್ಗೆ ಉಪದೇಶ ಕೊಡುವುದು ಪರಮ ಹಾಸ್ಯ. ಮೊದಲು ತಮ್ಮ ರಾಜ್ಯದ ಮಕ್ಕಳನ್ನು ರಕ್ಷಿಸಿಕೊಳ್ಳಲಿ’ ಎಂದು ಲೇವಡಿ ಮಾಡಿದೆ.
‘ಕೋವಿಡ್ನಿಂದ ತನ್ನ ರಾಜ್ಯದ ಜನರನ್ನು ರಕ್ಷಿಸದೆ ಗಂಗೆಯಲ್ಲಿ ತೇಲಿಸಿದ ಯೋಗಿ ಆದಿತ್ಯ ನಾಥ್ ಅವರು ಆಕ್ಸಿಜನ್ ನೀಡದೆ ಕರ್ನಾಟಕದ ಜನರನ್ನು ಕೊಂದ ಬಿಜೆಪಿಗರಿಗೆ ಆದರ್ಶ ಎನಿಸಿರಬಹುದು. ಆದರೆ, ಕನ್ನಡಿಗರಿಗೆ ಇಂತಹ ದುರಂತದ ‘ಯುಪಿ ಮಾದರಿ ಬೇಡ’ ದೇಶಕ್ಕೆ ಕರ್ನಾಟಕವೇ ಮಾಡೆಲ್ ಎನ್ನುವಂತಹ ಆಡಳಿತವನ್ನು ಕಾಂಗ್ರೆಸ್ ನೀಡಿದೆ, ಮುಂದೆಯೂ ನೀಡಲಿದೆ’ ಎಂದು ಕಾಂಗ್ರೆಸ್ ಹೇಳಿದೆ.
‘ಮಹಿಳೆಯರ ಮೃಗಗಳಂತೆ ಮುಗಿಬೀಳುವ ಅತ್ಯಂತ ಕ್ರೂರ ಪರಿಸ್ಥಿತಿ ಇರುವ ಯುಪಿ ಸಿಎಂ ಕರ್ನಾಟಕದಲ್ಲಿ ಡೋಂಗಿ ಭಾಷಣ ಕುಟ್ಟುವ ಅಗತ್ಯವಿಲ್ಲ. ಅತ್ಯಾಚಾರ ಸಂತ್ರಸ್ತೆಯ ಕುಟುಂಬದ ಗುಡಿಸಲಿಗೆ ಬೆಂಕಿ ಹಚ್ಚಿ, ಎಳೆ ಮಕ್ಕಳನ್ನು ಬೇಯಿಸಿದ ಘಟನೆ ಕಣ್ಣ ಮುಂದಿರುವಾಗ ಯಾವ ನೈತಿಕತೆಯಲ್ಲಿ ಯುಪಿ ಮಾಡೆಲ್ ಜಪಿಸುತ್ತೀರಿ?’ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.
‘ಉತ್ತರ ಪ್ರದೇಶವೆಂದರೆ ‘ಕ್ರಿಮಿನಲ್ಗಳ ಸ್ವರ್ಗ’ ಎಂದೇ ಜನಜನಿತವಾಗಿದೆ. ಹಾಡಹಗಲೇ ಯಾವುದೇ ಭಯ ಇಲ್ಲದೆ ಕ್ರಿಮಿನಲ್ ಚಟುವಟಿಕೆಗಳು ನಡೆಯುತ್ತವೆ. ಪೊಲೀಸರ ಎದುರಲ್ಲೇ ಹತ್ಯೆಗಳು ನಡೆಯುತ್ತವೆ. ಯೋಗಿ ಆದಿತ್ಯ ನಾಥ್ ಅವರೇ, ನಿಮ್ಮ ಪ್ರವಚನ ಕನ್ನಡಿಗರಿಗೆ ಬೇಕಿಲ್ಲ, ನಿಮ್ಮ ತಟ್ಟೆಯಲ್ಲಿನ ಹೆಗ್ಗಣವನ್ನು ನೋಡಿಕೊಳ್ಳಿ. ನಮಗೆ ನಿಮ್ಮ ಯುಪಿ ಮಾದರಿ ಬೇಡ’ ಎಂದು ಕಾಂಗ್ರೆಸ್ ಕಿಡಿಕಾರಿದೆ.
‘ಕ್ರೈಮ್ ಕ್ಯಾಪಿಟಲ್’ ಎಂದೇ ಕುಖ್ಯಾತಿ ಪಡೆದಿರುವ ರಾಜ್ಯದ ಮುಖ್ಯಮಂತ್ರಿ ಸರ್ವಜನಾಂಗದ ಶಾಂತಿಯ ತೋಟ ಎನಿಸಿಕೊಂಡಿರುವ ಕರ್ನಾಟಕಕ್ಕೆ ಬಂದು ಬಡಾಯಿ ಕೊಚ್ಚಿಕೊಳ್ಳುವುದಕ್ಕಿಂತ ಹಾಸ್ಯ ಬೇರೊಂದಿಲ್ಲ. 3 ವರ್ಷದಲ್ಲಿ 11 ಸಾವಿರ ಹತ್ಯೆಗಳು ನಡೆದಿದ್ದು ಕಾನೂನು ಸುವ್ಯವಸ್ಥೆ ಅಧೋಗತಿಗೆ ಇಳಿದಿದ್ದು ತಮ್ಮ ಅಸಾಮರ್ಥ್ಯದಿಂದ ಅಲ್ಲವೇ?’
-ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ
"ಕ್ರೈಮ್ ಕ್ಯಾಪಿಟಲ್" ಎಂದೇ ಕುಖ್ಯಾತಿ ಪಡೆದಿರುವ ರಾಜ್ಯದ ಮುಖ್ಯಮಂತ್ರಿ ಸರ್ವಜನಾಂಗದ ಶಾಂತಿಯ ತೋಟ ಎನಿಸಿಕೊಂಡಿರುವ ಕರ್ನಾಟಕಕ್ಕೆ ಬಂದು ಬಡಾಯಿ ಕೊಚ್ಚಿಕೊಳ್ಳುವುದಕ್ಕಿಂತ ಹಾಸ್ಯ ಬೇರೊಂದಿಲ್ಲ.
— Karnataka Congress (@INCKarnataka) April 26, 2023
3 ವರ್ಷದಲ್ಲಿ 11 ಸಾವಿರ ಹತ್ಯೆಗಳು ನಡೆದಿದ್ದು ಕಾನೂನು ಸುವ್ಯವಸ್ಥೆ ಅಧೋಗತಿಗೆ ಇಳಿದಿದ್ದು ತಮ್ಮ ಅಸಾಮರ್ಥ್ಯದಿಂದ ಅಲ್ಲವೇ?#UPModelBeda pic.twitter.com/nNAFHteOo2
ಮಹಿಳೆಯರ ಮೃಗಗಳಂತೆ ಮುಗಿಬೀಳುವ ಅತ್ಯಂತ ಕ್ರೂರ ಪರಿಸ್ಥಿತಿ ಇರುವ ಯುಪಿ ಸಿಎಂ ಕರ್ನಾಟಕದಲ್ಲಿ ಡೋಂಗಿ ಭಾಷಣ ಕುಟ್ಟುವ ಅಗತ್ಯವಿಲ್ಲ.
— Karnataka Congress (@INCKarnataka) April 26, 2023
ಅತ್ಯಾಚಾರ ಸಂತ್ರಸ್ತೆಯ ಕುಟುಂಬದ ಗುಡಿಸಲಿಗೆ ಬೆಂಕಿ ಹಚ್ಚಿ, ಎಳೆ ಮಕ್ಕಳನ್ನು ಬೇಯಿಸಿದ ಘಟನೆ ಕಣ್ಣ ಮುಂದಿರುವಾಗ ಯಾವ ನೈತಿಕತೆಯಲ್ಲಿ ಯುಪಿ ಮಾಡೆಲ್ ಜಪಿಸುತ್ತೀರಿ?
ನಮಗೆ ಇಂತ ಕ್ರೂರ #UPmodelBeda. pic.twitter.com/61aiD4eIv8







