Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇಂದ್ರ ಗೃಹ ಸಚಿವರ ವಿರುದ್ಧ ಚುನಾವಣಾ...

ಕೇಂದ್ರ ಗೃಹ ಸಚಿವರ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಕಾಂಗ್ರೆಸ್

‘ಕಾಂಗ್ರೆಸ್ ಅಧಿಕಾರಕ್ಕೆ ಮರಳಿದಲ್ಲಿ ರಾಜ್ಯದಲ್ಲಿ ಗಲಭೆ ಎಂಬ ಅಮಿತ್ ಶಾ ಹೇಳಿಕೆಗೆ ಖಂಡನೆ

26 April 2023 9:51 PM IST
share
ಕೇಂದ್ರ ಗೃಹ ಸಚಿವರ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಕಾಂಗ್ರೆಸ್
‘ಕಾಂಗ್ರೆಸ್ ಅಧಿಕಾರಕ್ಕೆ ಮರಳಿದಲ್ಲಿ ರಾಜ್ಯದಲ್ಲಿ ಗಲಭೆ ಎಂಬ ಅಮಿತ್ ಶಾ ಹೇಳಿಕೆಗೆ ಖಂಡನೆ

ಹೊಸದಿಲ್ಲಿ,,ಎ.26; ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಮರಳಿದಲ್ಲಿ, ರಾಜ್ಯವು ಗಲಭೆಗಳಿಂದ ತತ್ತರಿಸಲಿದೆಯೆಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಎಚ್ಚರಿಕೆ ನೀಡಿರುವುದನ್ನು ಹಿರಿಯ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಬುಧವಾರ ತೀವ್ರವಾಗಿ ಖಂಡಿಸಿದ್ದಾರೆ. ಈ ವಿಷಯವನ್ನು ಭಾರತೀಯ ಚುನಾವಣಾ ಆಯೋಗದ ಮುಂದೆ ಪ್ರಸ್ತಾವಿಸುವುದಾಗಿ ಅವರು ಹೇಳಿದ್ದಾರೆ.

ಅಮಿತ್ ಶಾ ಅವರ ಹೇಳಿಕೆಯು ‘ಬಹಿರಂಗವಾಗಿ ಒಡ್ಡಿರುವ ಬೆದರಿಕೆ’ ಎಂದು ಜೈರಾಮ್ ರಮೇಶ್ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಚಾರಕ್ಕೆ ಜನತೆ ನೀಡಿರುವ ಅಭೂತಪೂರ್ವ ಪ್ರತಿಕ್ರಿಯಿಂದ ಬೆಚ್ಚಿಬಿದ್ದಿರುವ ಅಮಿತ್ ಶಾ ಅವರು, ‘ಅಪಮಾನಿಸು, ಕಿಚ್ಚುಹೊತ್ತಿಸು, ಪ್ರಚೋದಿಸು ಹಾಗೂ ಬೆದರಿಸು’ ಎಂಬ ನಾಲ್ಕು ಕಾರ್ಯತಂತ್ರಗಳನ್ನು ಅನುಸರಿಸುತ್ತಿದ್ದಾರೆ ಎಂದು ಜೈರಾಮ್ ಆರೋಪಿಸಿದ್ದಾರೆ.

ಮಂಗಳವಾರ ಬೆಳಗಾವಿ ಜಿಲ್ಲೆಯ ತೆರದಾಳದಲ್ಲಿ ನಡೆದ ಬಿಜೆಪಿಯ ಚುನಾವಣಾ ಪ್ರಚಾರ ಸಭೆ ಮಾತನಾಡಿದ ಅಮಿತ್ ಶಾ ಅವರು ಒಂದು ವೇಳೆ ಕಾಂಗ್ರೆಸ್ ಕರ್ನಾಟಕದಲ್ಲಿ ಅಧಿಕಾರಕ್ಕೆ ಮರಳಿದಲ್ಲಿ, ರಾಜ್ಯದಲ್ಲಿ ವಂಶಾಡಳಿತವು ಹಿಂದೆಂದಿಗಿಂತಲೂ ಹೆಚ್ಚಾಗಲಿದೆ ಮತ್ತು ಅದು ಗಲಭೆಯಿಂದ ತತ್ತರಿಸಲಿದೆಯೆಂದುಹೇಳಿದ್ದರು ಕೇವಲ ಭಾರತೀಯಜನತಾ ಪಕ್ಷವೊಂದೇ ನವಕರ್ನಾಟಕದ ನಿರ್ಮಾಣದತ್ತ ರಾಜ್ಯವನ್ನು ಕೊಂಡೊಯ್ಯಲಿದೆಯೆಂದವರು ಹೇಳಿದ್ದರು.

ಒಂದು ವೇಳೆ ಕಾಂಗ್ರೆಸ್ ಪ್ರಮಾದವಶಾತ್ಅಧಿಕಾರಕ್ಕೆ ಬಂದಲ್ಲಿ, ಭ್ರಷ್ಟಾಚಾರವು ಸಾರ್ವಕಾಲಿಕವಾಗಿ ಅಧಿಕವಾಗಲಿದೆ ಹಾಗೂ ತುಷ್ಟೀಕರಣ ರಾಜಕೀಯವನ್ನು ಕಾಣಲಿದೆ ಎಂದು ಅಮಿತ್ ಶಾ ಹೇಳಿದ್ದರು.

ಅಮಿತ್ ಶಾ ಭಾಷಣದ ಬಗ್ಗೆ ಪ್ರತಿಕ್ರಿಯಿಸಿರುವ ಜೈರಾಮ್ ರಮೇಶ್ ಇಂದು ಈ ಬಗ್ಗೆ ಟ್ವೀಟ್ ಮಾಡಿದ್ದು, ‘‘ ಇದೊಂದು ನಿರ್ಲಜ್ಜೆಯೊಂದಿಗೆ ಒಡ್ಡಿರುವ ಬೆದರಿಕೆಯಾಗಿದೆ. ಭಾರತದ ಪ್ರಪ್ರಥಮ ಗೃಹ ಸಚಿವರಿಂದ ನಿಷೇಧಿಸಲ್ಪಟ್ಟ ಸಂಘಟನೆಗೆ ನಿಷ್ಠರಾಗಿರುವ ಕೇಂದ್ರ ಗೃಹ ಸಚಿವರು ಈಗ, ಚುನಾವಣೆಯಲ್ಲಿ ತನ್ನ ಪಕ್ಷಕ್ಕೆ ಸೋಲು ಖಚಿತವೆಂದು ಅರಿವಾದಾಗ, ಬಹಿರಂಗವಾಗಿ ಬೆದರಿಕೆಗಳನ್ನು ಒಡ್ಡುತ್ತಿದ್ದಾರೆ’’ ಎಂದರು.

ಕರ್ನಾಟಕದಲ್ಲಿ ಬಿಜೆಪಿಯು ನಿರ್ಣಾಯಕ ಸೋಲನ್ನು ಕಾಣಲಿರುವುದು ಸ್ಪಷ್ಟವಾಗಿದೆ. ಕಾಂಗ್ರೆಸ್ ನಾಯಕತ್ವದ ಚುನಾವಣಾ ಪ್ರಚಾರಕ್ಕೆ ಜನತೆಯ ಪ್ರತಿಕ್ರಿಯೆಯು ಅಗಾಧವಾಗಿದೆ. ಈ ಕಾರಣಕ್ಕಾಗಿ ಅಮಿತ್ ಶಾ ಅವರು ಅಪಮಾನಿಸು, ಕಿಚ್ಚುಹೊತ್ತಿಸು, ಪ್ರಚೋದಿಸು ಹಾಗೂ ಬೆದರಿಸು ಎಂಬ ನಾಲ್ಕು ಕಾರ್ಯತಂತ್ರಗಳನ್ನು ಅನುಸರಿಸುವುದಕ್ಕೆ ಇದು ಕಾರಣವಾಗಿದೆ ಎಂದು ಅವರು ಹೇಳಿದ್ದಾರೆ.

share
Next Story
X