Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎಲ್ ನಿನೋ, ಕಚ್ಚಾತೈಲ ಬೆಲೆಗಳಿಂದ ಭಾರತೀಯ...

ಎಲ್ ನಿನೋ, ಕಚ್ಚಾತೈಲ ಬೆಲೆಗಳಿಂದ ಭಾರತೀಯ ಆರ್ಥಿಕತೆಗೆ ಅಪಾಯ: ಕೇಂದ್ರ ವಿತ್ತ ಸಚಿವಾಲಯ

26 April 2023 9:55 PM IST
share
ಎಲ್ ನಿನೋ, ಕಚ್ಚಾತೈಲ ಬೆಲೆಗಳಿಂದ ಭಾರತೀಯ ಆರ್ಥಿಕತೆಗೆ ಅಪಾಯ: ಕೇಂದ್ರ ವಿತ್ತ ಸಚಿವಾಲಯ

ಹೊಸದಿಲ್ಲಿ,ಎ.26: ಮಳೆಯ ಮೇಲೆ ಎಲ್ ನಿನೋ ಪರಿಣಾಮ, ಪೆಟ್ರೋಲಿಯಂ ರಫ್ತು ರಾಷ್ಟ್ರಗಳ ಸಂಘಟನೆ (ಒಪೆಕ್)ಯಿಂದ ಕಚ್ಚಾತೈಲ ಉತ್ಪಾದನೆ ಕಡಿತ ಮತ್ತು ಮುಂದುವರಿದ ದೇಶಗಳಲ್ಲಿನ ಹಣಕಾಸು ತೊಂದರೆ ಇತ್ಯಾದಿಗಳು ಭಾರತದ ಆರ್ಥಿಕ ಬೆಳವಣಿಗೆಗೆ ಅಡ್ಡಿಯನ್ನುಂಟು ಮಾಡುವ ಅಪಾಯಕಾರಿ ಅಂಶಗಳಾಗಿವೆ ಎಂದು ಕೇಂದ್ರ ವಿತ್ತ ಸಚಿವಾಲಯವು ಮಂಗಳವಾರ ಮಾರ್ಚ್ ತಿಂಗಳಿಗೆ ತನ್ನ ಮಾಸಿಕ ಆರ್ಥಿಕ ಪರಾಮರ್ಶೆಯಲ್ಲಿ ಪಟ್ಟಿ ಮಾಡಿದೆ.

ಎಲ್ ನಿನೋದಿಂದ ಬರ ಪರಿಸ್ಥಿತಿ,ಕೃಷಿ ಉತ್ಪಾದನೆ ಕುಸಿತ ಮತ್ತು ಬೆಲೆಏರಿಕೆಯಂತಹ ಸಂಭಾವ್ಯ ಅಪಾಯಗಳ ವಿರುದ್ಧ ಕಟ್ಟೆಚ್ಚರ ವಹಿಸುವುದು ಮುಖ್ಯವಾಗಿದೆ ಎಂದು ಸರಕಾರವು ಹೇಳಿದೆ.

ಎಲ್ ನಿನೋ ವಿದ್ಯಮಾನವು ಪೂರ್ವ ಮತ್ತು ಮಧ್ಯ ಪೆಸಿಫಿಕ್ಗಳಲ್ಲಿಯ ಸಮುದ್ರದ ಮೇಲ್ಮೈ ತಾಪಮಾನ ಹೆಚ್ಚುವುದನ್ನು ಒಳಗೊಂಡಿರುತ್ತದೆ. ಇದು ಸಾಮಾನ್ಯವಾಗಿ ಪ್ರತಿ ಕೆಲವು ವರ್ಷಗಳಿಗೆ ಸಂಭವಿಸುತ್ತದೆ ಮತ್ತು ಬೆಳೆ ಹಾನಿ,ಬೆಂಕಿ ಅವಘಡ ಮತ್ತು ದಿಢೀರ್ ಪ್ರವಾಹಗಳಿಗೆ ಕಾರಣವಾಗುತ್ತದೆ.

ಈ ವರ್ಷ ದೇಶದಲ್ಲಿ ಸಾಮಾನ್ಯ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಎ.11ರಂದು ತಿಳಿಸಿತ್ತು. ಆದರೂ,ಇಲಾಖೆಯ ಮಹಾ ನಿರ್ದೇಶಕ ಮೃತ್ಯುಂಜಯ ಮೊಹಾಪಾತ್ರಾ ಅವರು,ಮಳೆಗಾಲದ ಉತ್ತರಾರ್ಧದಲ್ಲಿ ಎಲ್ ನಿನೋ ಸ್ಥಿತಿಗಳು ಮಳೆಯ ಮೇಲೆ ಪ್ರತಿಕೂಲ ಪರಿಣಾಮಗಳನ್ನು ಬೀರಬಹುದು ಎಂದು ಹೇಳಿದ್ದರು.

ಒಪೆಕ್ನಿಂದ ಅಚ್ಚರಿದಾಯಕ ಉತ್ಪಾದನೆ ಕಡಿತವು ಎಪ್ರಿಲ್ನಲ್ಲಿ ತೈಲ ಬೆಲೆಗಳ ಏರಿಕೆಗೆ ಕಾರಣವಾಗಿದೆ ಎಂದು ವಿತ್ತ ಸಚಿವಾಲಯವು ತನ್ನ ಮಾಸಿಕ ವರದಿಯಲ್ಲಿ ತಿಳಿಸಿದೆ.

ಮೇ ತಿಂಗಳಿನಿಂದ ಆರಂಭಿಸಿ ವರ್ಷಾಂತ್ಯದವರೆಗೆ ತಮ್ಮ ದೈನಂದಿನ ತೈಲ ಉತ್ಪಾದನೆಯನ್ನು ದಿನವೊಂದಕ್ಕೆ 3.66 ಮಿ.ಬ್ಯಾರಲ್ಗಳಷ್ಟು ತಗ್ಗಿಸುವುದಾಗಿ ಒಪೆಕ್ ಮತ್ತು ಅದರ ಮಿತ್ರದೇಶಗಳು ಎ.2ರಂದು ಹೇಳಿದ್ದವು. ಉತ್ಪಾದನೆಯಲ್ಲಿ ಕಡಿತದ ಪ್ರಮಾಣವು ಕಚ್ಚಾ ತೈಲಕ್ಕಾಗಿ ಜಾಗತಿಕ ಬೇಡಿಕೆಯ ಶೇ.3.7ರಷ್ಟಿದೆ. ಒಪೆಕ್ ಪ್ರಕಟಣೆಯ ಮರುದಿನವೇ ಜಾಗತಿಕ ಕಚ್ಚಾತೈಲ ಬೆಲೆಗಳು ಶೇ.5ರಷ್ಟು ಏರಿಕೆಯನ್ನು ಕಂಡಿದ್ದವು.

ಭಾರತವು ತನ್ನ ಶೇ.85ರಷ್ಟು ಕಚ್ಚಾತೈಲ ಅಗತ್ಯಗಳಿಗಾಗಿ ಆಮದನ್ನೇ ಅವಲಂಬಿಸಿದೆ.

ಮುಂದುವರಿದಿರುವ ದೇಶಗಳಲ್ಲಿಯ ಆರ್ಥಿಕ ತೊಂದರೆಗಳು ಹಣಕಾಸು ಮಾರುಕಟ್ಟೆಗಳಲ್ಲಿ ಸುರಕ್ಷತೆಯ ಬಗ್ಗೆ ಹಿಂಜರಿಕೆಯನ್ನು ಸೃಷ್ಟಿಸಬಹುದು ಮತ್ತು ಇದು ಬಂಡವಾಳ ಒಳಹರಿವಿಗೆ ಅಡ್ಡಿಯನ್ನುಂಟು ಮಾಡಬಹುದು ಎಂದೂ ವಿತ್ತ ಸಚಿವಾಲಯವು ವರದಿಯಲ್ಲಿ ಹೇಳಿದೆ.

share
Next Story
X