Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಮರ್ತ್ಯ ಸೇನ್ ಮನೆ ನೆಲಸಮ ಮಾಡಿದರೆ...

ಅಮರ್ತ್ಯ ಸೇನ್ ಮನೆ ನೆಲಸಮ ಮಾಡಿದರೆ ಧರಣಿ: ದೀದಿ ಎಚ್ಚರಿಕೆ

27 April 2023 8:35 AM IST
share
ಅಮರ್ತ್ಯ ಸೇನ್ ಮನೆ ನೆಲಸಮ ಮಾಡಿದರೆ ಧರಣಿ: ದೀದಿ ಎಚ್ಚರಿಕೆ

ಕೊಲ್ಕತ್ತಾ: ವಿಶ್ವಭಾರತಿ ವಿಶ್ವವಿದ್ಯಾನಿಲಯದ ಅಧಿಕಾರಿಗಳು ನೊಬೆಲ್ ಪ್ರಶಸ್ತಿ ಪುರಸ್ಕೃತ ಅಮರ್ತ್ಯ ಸೇನ್ ಅವರ ಮನೆ ’ಪ್ರತೀಚಿ’ಯನ್ನು ನೆಲಸಮ ಮಾಡಲು ಮುಂದಾದರೆ ಬೋಲ್‌ಪುರದಲ್ಲಿ ಧರಣಿ ನಡೆಸುವುದಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಎಚ್ಚರಿಕೆ ನೀಡಿದ್ದಾರೆ. ಸೇನ್ ಅವರ ಪಿತ್ರಾರ್ಜಿತ ಆಸ್ತಿ ವಿಶ್ವಭಾರತಿ ಕ್ಯಾಂಪಸ್‌ನಲ್ಲಿದ್ದು, ಅವರಿಗೆ ಲೀಸ್ ಆಧಾರದಲ್ಲಿ ನೀಡಲಾದ ಭೂಮಿಗಿಂತ ಹೆಚ್ಚು ಭೂಮಿಯನ್ನು ಅವರು ಅಕ್ರಮವಾಗಿ ವಶಪಡಿಸಿಕೊಂಡಿದ್ದಾರೆ ಎಂಬ ಆರೋಪವಿದೆ.

ವಿಶ್ವವಿದ್ಯಾನಿಲಯ ಈ ಜಮೀನನ್ನು ಮೇ 6ರ ಒಳಗಾಗಿ ಅಥವಾ ಕೊನೆಯ ಆದೇಶ ಪ್ರಕಟಿಸಿದ 15 ದಿನಗಳ ಒಳಗಾಗಿ ತೆರವುಗೊಳಿಸುವಂತೆ ಅಮರ್ತ್ಯಸೇನ್ ಅವರಿಗೆ ಸೂಚಿಸಿದೆ. ವಿಶ್ವವಿದ್ಯಾನಿಲಯದಿಂದ ಲೀಸ್ ಆಧಾರದಲ್ಲಿ ನೀಡಲಾದ 1.38 ಎಕರೆ ಪೈಕಿ ನೊಬೆಲ್ ಪುರಸ್ಕೃತರಾದ ಸೇನ್ ಅಕ್ರಮವಾಗಿ ಸ್ವಾಧೀನಪಡಿಸಿಕೊಂಡಿದ್ದಾರೆ ಎನ್ನಲಾದ 0.13 ಎಕರೆ (5500 ಚದರ ಅಡಿ) ಜಾಗವನ್ನು ತೆರವುಗೊಳಿಸುವಂತೆ ವಿವಿ ಆದೇಶ ನೀಡಿತ್ತು.

ಈ ಬಗ್ಗೆ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಮಮತಾ ಬ್ಯಾನರ್ಜಿ, "ಅಮರ್ತ್ಯ ಸೇನ್ ಮೇಲೆ ಪ್ರತಿದಿನ ದಾಳಿ ಮಾಡಲಾಗುತ್ತಿದೆ. ಅವರ ದರ್ಪವನ್ನು ನಾನು ನೋಡಿದ್ದೇನೆ. ಸೇನ್ ಅವರ ಮನೆಯನ್ನು ನೆಲಸಮ ಮಾಡಲು ವಿವಿ ಮುಂದಾದರೆ ಬೋಲ್‌ಪುರಕ್ಕೆ ತೆರಳಿ ಆ ಸ್ಥಳದಲ್ಲಿ ಧರಣಿ ನಡೆಸುವ ಮೊದಲ ವ್ಯಕ್ತಿ ನಾನು" ಎಂದು ಸ್ಪಷ್ಟಪಡಿಸಿದರು. ಬುಲ್ಡೋಜರ್ ಅಥವಾ ಮಾನವೀಯತೆ ಎರಡರಲ್ಲಿ ಯಾವುದು ಹೆಚ್ಚು ಶಕ್ತಿಶಾಲಿ ಎಂದು ನೋಡಲು ಬಯಸುತ್ತೇನೆ ಎಂದು ಹೇಳಿದರು.

2006ರಲ್ಲಿ ನೀಡಲಾದ ಮ್ಯುಟೇಶನ್ ಅನ್ವಯ ಇಡೀ 1.38 ಎಕರೆ ಭೂಮಿ ಅಮರ್ತ್ಯಸೇನ್ ಅವರಿಗೆ ಸೇರಿದ್ದು ಎಂದು ಕಂದಾಯ ಇಲಾಖೆ ಹೇಳಿದ್ದು, ಇದಕ್ಕೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ಜನವರಿ 30ರಂದು ಮಮತಾ ಬ್ಯಾನರ್ಜಿ, ಅಮರ್ತ್ಯಸೇನ್ ಅವರಿಗೆ ಹಸ್ತಾಂತರಿಸಿದ್ದರು. ಈ ದಾಖಲೆಗಳನ್ನು ವಿವಿ ಅಧಿಕಾರಿಗಳು ಪ್ರಶ್ನಿಸಿದ್ದಾರೆ. ಅಮರ್ತ್ಯ ಸೇನ್ ಅವರಿಗೆ ಕಾನೂನುಬದ್ಧವಾಗಿ ಇರುವುದು ಕೇವಲ 1.25 ಎಕರೆ ಮಾತ್ರ ಎನ್ನುವುದು ವಿವಿ ಅಧಿಕಾರಿಗಳ ವಾದ.

share
Next Story
X