Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಿಷ್ಕ್ರಿಯ ಕಾರನ್ನು ಕತ್ತೆ ಮೂಲಕ...

ನಿಷ್ಕ್ರಿಯ ಕಾರನ್ನು ಕತ್ತೆ ಮೂಲಕ ಎಳೆಯಿಸಿದ ಉದಯಪುರ ವ್ಯಕ್ತಿ: ಸಾಮಾಜಿಕ ತಾಣದಲ್ಲಿ ಆಕ್ರೋಶ

27 April 2023 12:49 PM IST
share
ನಿಷ್ಕ್ರಿಯ ಕಾರನ್ನು ಕತ್ತೆ ಮೂಲಕ ಎಳೆಯಿಸಿದ ಉದಯಪುರ ವ್ಯಕ್ತಿ: ಸಾಮಾಜಿಕ ತಾಣದಲ್ಲಿ ಆಕ್ರೋಶ

ಉದಯ್‌ಪುರ: ಕಾರು ಖರೀದಿಸಿದ ಕೆಲವೇ ತಿಂಗಳಲ್ಲಿ ಪದೇ ಪದೇ ರಿಪೇರಿಗೆ ಬರುತ್ತಿದ್ದ ಕಾರನ್ನು ಶೋರೂಮ್‌ ಸಿಬ್ಬಂದಿಗೆ ಕೊಂಡೊಯ್ದು ತೋರಿಸಿದರೂ ಅವರಿಂದ ಹೆಚ್ಚಿನ ಪ್ರಯೋಜನವೇನೂ ಆಗದಿದ್ದರಿಂದ ಬೇಸತ್ತ ಉದಯ್‌ಪುರ ಕಾರು ಮಾಲೀಕನೊಬ್ಬ ತನ್ನ ಕಾರನ್ನು ಕತ್ತೆಗೆ ಬಿಗಿದು ವಿಪರೀತ ಬಿಸಿಲು ಹಾಗೂ ಸಂಚಾರ ದಟ್ಟಣೆಯ ನಡುವೆ ಶೋರೂಮ್‌ ಬಳಿಗೆ ಕೊಂಡೊಯ್ದಿದ್ದಾನೆ. ಈ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ ಆತನ ಅಸೂಕ್ಷ್ಮ ನಡವಳಿಕೆಯನ್ನು ನೆಟಿಜನ್‌ಗಳು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ ಎಂದು freepressjournal.in ವರದಿ ಮಾಡಿದೆ.

ಮಂಗಳವಾರ ಡ್ರಮ್ ಬಾರಿಸುತ್ತಾ, ತನ್ನ ಕಾರನ್ನು ಕತ್ತೆಗೆ ಬಿಗಿದು ಎಳೆಸಿದ ವ್ಯಕ್ತಿಯನ್ನು ಉದಯ್‌ಪುರ ನಿವಾಸಿಯಾದ ರಾಜ್‌ಕುಮಾರ್ ಗಾಯತ್ರಿ ಎಂದು ಗುರುತಿಸಲಾಗಿದೆ.

ಪ್ರಾಣಿಗಳ ಬಗ್ಗೆ ಇಂತಹ ಅಸೂಕ್ಷ್ಮ ನಡವಳಿಕೆ ತೋರಿರುವ ರಾಜ್‌ಕುಮಾರ್ ಗಾಯತ್ರಿಯನ್ನು ಸಾಮಾಜಿಕ ಮಾಧ್ಯಮ ಬಳಕೆದಾರರು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದು, ಈ ಪೈಕಿ ಕೆಲವರು ಈ ಕೃತ್ಯವನ್ನು ಪ್ರಾಣಿ ಹಿಂಸೆ ಎಂದು ಟೀಕಿಸಿದ್ದು, ಮತ್ತೆ ಕೆಲವರು ಕಾರು ಸಾಗಿಸಲು ಕ್ರೇನ್ ಬಳಸದ ಕಾರು ಮಾಲಕನನ್ನೇ ಕತ್ತೆ ಎಂದು ಜರಿದಿದ್ದಾರೆ.

ರಾಜ್‌ಕುಮಾರ್ ಚಿಕ್ಕಪ್ಪ ಶಂಕರ್‌ಲಾಲ್ ಅವರು ಮಾದ್ರಿ ಕೈಗಾರಿಕಾ ಪ್ರದೇಶದಿಂದ ರೂ. 17 ಲಕ್ಷ ಮೌಲ್ಯದ ಕಾರು ಖರೀದಿಸಿ ತಂದಿದ್ದರು. ಆದರೆ, ಆ ಕಾರು ಪದೇ ಪದೇ ರಿಪೇರಿಗೊಳಗಾಗುತ್ತಿತ್ತು ಮತ್ತು ಅದನ್ನು ಚಾಲೂ ಮಾಡಲು ಅನೇಕ ಬಾರಿ ನೂಕಬೇಕಾಗುತ್ತಿತ್ತು ಎಂದು Times of India ವರದಿ ಮಾಡಿದೆ. ಕಾರು ಮಾರಾಟ ಸಂಸ್ಥೆಯ ಪ್ರತಿನಿಧಿಯೊಬ್ಬರ ಸಲಹೆಯಂತೆ ಬ್ಯಾಟರಿಯನ್ನು ಚಾರ್ಜ್ ಮಾಡಲು ಸ್ವಲ್ಪ ದೂರ ಓಡಿಸಿದರೂ ಆ ಪ್ರಯತ್ನವೂ ವಿಫಲಗೊಂಡಿದೆ. ಕೊನೆಗೆ ಕಾರು ಬದಲಾಯಿಸಿಕೊಡುವಂತೆ ಒತ್ತಾಯಿಸಿರುವ ಆ ವ್ಯಕ್ತಿಯು ಕಾರನ್ನು ಶೋರೂಮ್‌ಗೆ ಕೊಂಡೊಯ್ದಿದ್ದಾನೆ ಎಂದು ಅದು ವರದಿ ಮಾಡಿದೆ.

Never mess with #indians#Udaipur: 18 lakh car broke down, the owner dragged it with donkeys and sent it back to the showroom,

Angry car owner called the showroom but they didn't help. So, he used donkeys to pull his car. Watch why he did that.#hyundai #donkeypullcar #creta pic.twitter.com/OZMsMoFXyd

— Siraj Noorani (@sirajnoorani) April 26, 2023
share
Next Story
X