Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಎ. 29ರಂದು ಮೂಡುಬಿದಿರೆಯಲ್ಲಿ ಯೂತ್...

ಎ. 29ರಂದು ಮೂಡುಬಿದಿರೆಯಲ್ಲಿ ಯೂತ್ -20 ಸಂವಾದ ಕಾರ್ಯಕ್ರಮ

28 April 2023 6:56 PM IST
share
ಎ. 29ರಂದು  ಮೂಡುಬಿದಿರೆಯಲ್ಲಿ  ಯೂತ್ -20 ಸಂವಾದ ಕಾರ್ಯಕ್ರಮ

ಮಂಗಳೂರು: ಸಿಐಐ ಯಂಗ್ ಇಂಡಿಯನ್ಸ್ ಮಂಗಳೂರು, ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯದ ಆಶ್ರಯದಲ್ಲಿ ಎ. 29ರಂದು ಮೂಡುಬಿದಿರೆಯ ಆಳ್ವಾಸ್ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆ್ಯಂಡ್  ಟೆಕ್ನಾಲಜಿಯ ಕ್ಯಾಂಪಸ್‌ನಲ್ಲಿ ಯೂತ್ -20 ಸಂವಾದ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಮಂಗಳೂರು ಯಂಗ್ ಇಂಡಿಯನ್ಸ್ (ವೈಐ) ಘಟಕದ ಅಧ್ಯಕ್ಷೆ ಸಮೀಕ್ಷಾ ಶೆಟ್ಟಿ ತಿಳಿಸಿದ್ದಾರೆ.

ಮಂಗಳೂರು ಪ್ರೆಸ್ ಕ್ಲಬ್‌ನಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ವೈ.ಐ. ಮಂಗಳೂರು ಘಟಕ ಸೇರ್ಪಡೆಗೊಂಡಿರುವ ವಿದ್ಯಾರ್ಥಿಗಳು ಮತ್ತು ಮೂಡಬಿದಿರೆಯ ಆಳ್ವಾಸ್ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆ್ಯಂಡ್  ಟೆಕ್ನಾಲಜಿ ಸಂಸ್ಥೆಯ ವಿದ್ಯಾರ್ಥಿಗಳು ಇದರಲ್ಲಿ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ವಿದ್ಯಾರ್ಥಿಗಳು ಯುವ ಉದ್ಯಮಿಗಳೊಂದಿಗೆ ಸಂವಹನ ನಡೆಸಲಿದ್ದು, ಇದು ವರ್ತಮಾನದ ಸಮಸ್ಯೆಗಳಿಗೆ ಪರಿಹಾರವನ್ನು ಹುಡುಕಲು ಡಿಜಿಟಲೀಕರಣ ಮತ್ತು ಸುಸ್ಥಿರತೆಯ ಮಹತ್ವವನ್ನು ಅರಿಯಲು ಸಹಾಯಕವಾಗಲಿದೆ ಎಂದು ವಿವರಿಸಿದರು.

ಮೊದಲ ಅಧಿವೇಶನ:  ಭವಿಷ್ಯಕ್ಕಾಗಿ ವ್ಯವಹಾರವನ್ನು ಮರುಕಲ್ಪಿಸಿಕೊಳ್ಳುವ ನಿಟ್ಟಿನಲ್ಲಿ ಭಾರತೀಯ ಯುವ ಸಾಧಕರ ನಡುವೆ ಸಂವಾದ ನಡೆಯಲಿದೆ. ಸುಸ್ಥಿರತೆಯನ್ನು ಕಾಪಾಡಿಕೊಳ್ಳುವ ಬಗ್ಗೆ ಪ್ಯಾನಲ್ ಚರ್ಚೆಯು ನಡೆಯಲಿದ್ದು ಇದರ ನೇತೃತ್ವವನ್ನು ಯುಎನ್ ಮಹಿಳಾ ಪ್ರಶಸ್ತಿ ಪುರಸ್ಕೃತ ಉದ್ಯಮಿ ದಿವ್ಯಾ ಹೆಗ್ಡೆ, ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್  ಆಫ್ ಸೈನ್ಸ್ ವೈಜ್ಞಾನಿಕ ಅಧಿಕಾರಿ ಡಾ.ಟಿ.ವಿ.ರಾಮಚಂದ್ರ ಮತ್ತು ಲೇಕ್ ಮ್ಯಾನ್ ಆಫ್ ಇಂಡಿಯಾ ಹಾಗೂ  ಎ ಲೈಫ್ ವಿದ್ ಲೇಕ್ಸ್ ಲೇಖಕ ಆನಂದ್ ಮಲ್ಲಿಗವಾಡ್ ವಹಿಸಲಿದ್ದಾರೆ.

ಎರಡನೇ ಅಧಿವೇಶನ: ಭವಿಷ್ಯಕ್ಕಾಗಿ ವ್ಯಾಪಾರೋದ್ಯಮವನ್ನು ಮರುರೂಪಿಸುವ ಕುರಿತು ಭಾರತದ ಯುವ  ಸಾಧಕರ ನಡುವೆ ಸಂವಾದ - ವೇಗವರ್ಧಿತ ಡಿಜಿಟಲೀಕರಣದ ಬಗ್ಗೆ ಪ್ಯಾನಲ್ ಚರ್ಚೆ ನಡೆಯಲಿದ್ದು, ಇದರ ನೇತೃತ್ವವನ್ನು ವೈ.ಐ.ಮಂಗಳೂರು ಘಟಕದ ನಿಕಟಪೂರ್ವ ಅಧ್ಯಕ್ಷ ದೀಕ್ಷಿತ್ ರೈ ವಹಿಸಲಿದ್ದಾರೆ. ಇ-ಸಮುದಾಯ್ ಸ್ಥಾಪಕ ಮತ್ತು ಸಿಇಒ ಅನೂಪ್ ಪೈ ಹೆಲ್ತ್ ಫಿಕ್ಸ್ ಟೆಕ್ನಾಲಜೀಸ್ ಮತ್ತು ಝಿನೋ ಟೆಕ್ನಾಲಜೀಸ್ ಸ್ಥಾಪಕ ರಘುರಾಜ್ ಸುಂದರ್ ರಾಜ್ ಭಾಗವಹಿಸಲಿದ್ದಾರೆ.

ಈ ವರ್ಷದ ಜುಲೈಯಲ್ಲಿ ಹೊಸದಿಲ್ಲಿಯಲ್ಲಿ ನಡೆಯಲಿರುವ 2023ರ ಜಿ 20 ಶೃಂಗಸಭೆಗೆ ಆತಿಥ್ಯ ವಹಿಸುವ ಹೆಮ್ಮೆ ಭಾರತದ್ದಾಗಿದೆ.

ಭಾರತೀಯ ಕೈಗಾರಿಕೋದ್ಯಮದ ಒಕ್ಕೂಟ (ಸಿಐಐ) ಇದರ ಅಂಗವಾಗಿರುವ ಯಂಗ್ ಇಂಡಿಯನ್ಸ್ (ವೈಐ) 2023 ರ ಜುಲೈ 13ರಿಂದ 15 ರವರೆಗೆ ದಿಲ್ಲಿಯಲ್ಲಿ ಜಿ 20 ವೈಇಎ ಇಂಡಿಯಾ ಶೃಂಗಸಭೆಯನ್ನು ಆಯೋಜಿಸಲು ಸಕಲ ಸಿದ್ಧತೆಗಳನ್ನು ಮಾಡಿದೆ ಎಂದು ಸಮೀಕ್ಷಾ ಶೆಟ್ಟಿ ತಿಳಿಸಿದರು.

ವೈ.ಐ.ಯ ಮಂಗಳೂರು ಘಟಕದ ಸಹ ಅಧ್ಯಕ್ಷೆ  ಸಲೋಮ್ ಲೋಬೊ ಪಿರೇರಾ ,ಸಂಘಟಕರಾದ  ಅಶ್ರಿಕಾ ಅಮಿನ್ , ಮಧುಕರ ಕುಡ್ವ, ಶರಣ್ ಶೆಟ್ಟಿ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

share
Next Story
X