ಕೆ.ಆರ್.ಪುರದಲ್ಲಿ ಸಿಪಿಎಂಗೆ ಬೆಂಬಲ: ಕಣದಿಂದ ಹಿಂದಕ್ಕೆ ಸರಿದ ಜೆಡಿಎಸ್ ಅಭ್ಯರ್ಥಿ

ಬೆಂಗಳೂರು, ಎ.28: ಕೆ.ಆರ್.ಪುರ ವಿಧಾನಸಭಾ ಕ್ಷೇತ್ರದಲ್ಲಿ ಸಿಪಿಎಂ ಪಕ್ಷದ ಅಭ್ಯರ್ಥಿ ನಂಜೇಗೌಡರಿಗೆ ಜೆಡಿಎಸ್ ಪಕ್ಷ ಬೆಂಬಲ ನೀಡಲು ತೀರ್ಮಾನಿಸಿದೆ.
ಈ ಹಿನ್ನೆಲೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ವೆಂಕಟಾಚಲಪತಿ, ಸಿಪಿಎಂ ಅಭ್ಯರ್ಥಿಗೆ ಬೆಂಬಲ ವ್ಯಕ್ತಪಡಿಸಿ, ಚುನಾವಣಾ ಕಣದಿಂದ ಹಿಂದಕ್ಕೆ ಸರಿದಿದ್ದಾರೆ ಎಂದು ಬೆಂಗಳೂರು ಮಹಾನಗರ ಜೆಡಿಎಸ್ ಅಧ್ಯಕ್ಷ ಎಚ್.ಎಂ.ರಮೇಶ್ಗೌಡ ತಿಳಿಸಿದ್ದಾರೆ.
ಈ ಬಗ್ಗೆ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂಗೆ ಪತ್ರ ಬರೆದಿರುವ ವೆಂಕಟಾಚಲಪತಿ, ಪಕ್ಷ ಕೈಗೊಂಡ ನಿರ್ಧಾರದಂತೆ ಕಣದಿಂದ ನಿವೃತ್ತನಾಗುತ್ತಿದ್ದೇನೆ ಎಂದು ತಿಳಿಸಿದ್ದಾರೆ.

Next Story





