ಕಾರ್ಕಳ : ಬೈಕ್ ಗಳ ನಡುವೆ ಅಪಘಾತ; ಓರ್ವ ಮೃತ್ಯು, ಮೂವರಿಗೆ ಗಂಭೀರ ಗಾಯ

ಕಾರ್ಕಳ : ಕಾರ್ಕಳ - ಉಡುಪಿ ಮುಖ್ಯ ರಸ್ತೆಯ ಬೈಲೂರು ಕೆಳ ಪೇಟೆಯಲ್ಲಿ ಎರಡು ಬೈಕ್ ಗಳ ನಡುವೆ ನಡೆದ ಭೀಕರ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದು ಮೂರು ಮಂದಿ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಯರ್ಲಪ್ಪಡಿ ಕಾಂತರಗೋಳಿ ನಿವಾಸಿ ರಮೇಶ ಆಚಾರ್ಯ ಮೃತರು. ರಮೇಶ ಆಚಾರ್ಯ, ಪತ್ನಿ ಶಕುಂತಲಾ ಆಚಾರ್ಯ ಹಾಗೂ ಜಾರ್ಕಳ ನಿವಾಸಿ ಸುಧೀರ್ ಹಾಗೂ ಡೇವಿಡ್ ಗಂಭೀರ ಗಾಯಗೊಂಡು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ರಮೇಶ ಆಚಾರ್ಯ ದಂಪತಿಗಳು ಬೈಕ್ನಲ್ಲಿ ರಸ್ತೆ ದಾಟುತ್ತಿದ್ದಾಗ ಉಡುಪಿಯಿಂದ ಜಾರ್ಕಳಕ್ಕೆ ಬರುತ್ತಿದ್ದ ಬೈಕು ಡಿಕ್ಕಿಯಾಗಿ ನಾಲ್ಕು ಮಂದಿ ರಸ್ತೆಗೆ ಎಸೆಯಲ್ಪಟ್ಟು ತಲೆಗೆ ಗಂಭೀರ ಸ್ವರೂಪದ ಗಾಯಗಳಾದ ರಮೇಶ ಆಚಾರ್ಯ ಆಸ್ಪತ್ರೆಗೆ ಸಾಗಿಸಿದ್ದ ವೇಳೆ ಮೃತಪಟ್ಟರು ಎಂದು ತಿಳಿದುಬಂದಿದೆ.
Next Story