Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪ್ರಚಾರದ ವೇಳೆ ಪರಮೇಶ್ವರ್ ಗೆ ಕಲ್ಲೇಟು...

ಪ್ರಚಾರದ ವೇಳೆ ಪರಮೇಶ್ವರ್ ಗೆ ಕಲ್ಲೇಟು ಪ್ರಕರಣ: ಕಳಂಕಿತ ಅಧಿಕಾರಿಗಳ ವರ್ಗಾವಣೆಗೆ ಕಾಂಗ್ರೆಸ್ ಆಗ್ರಹ

28 April 2023 8:57 PM IST
share
ಪ್ರಚಾರದ ವೇಳೆ ಪರಮೇಶ್ವರ್ ಗೆ ಕಲ್ಲೇಟು ಪ್ರಕರಣ: ಕಳಂಕಿತ ಅಧಿಕಾರಿಗಳ ವರ್ಗಾವಣೆಗೆ ಕಾಂಗ್ರೆಸ್ ಆಗ್ರಹ

ಬೆಂಗಳೂರು, ಎ.28: ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಮೇಲೆ ಕಲ್ಲು ತೂರಿ ಗಾಯ ಮಾಡಿರುವುದು ಹತಾಷೆ ಷಡ್ಯಂತ್ರ ಎಂದು ಕೆಪಿಸಿಸಿ ಸಂವಹನ ವಿಭಾಗದ ಉಪಾಧ್ಯಕ್ಷ ರಮೇಶ್ ಬಾಬು ಆರೊಪಸಿದ್ದಾರೆ. 

ಈ ಕುರಿತು ಟ್ವೀಟ್ ಮಾಡಿರುವ ಅವರು, 'ನಾಮಪತ್ರ ಸಲ್ಲಿಕೆ ವೇಳೆ ಕಲ್ಲು ತೂರಿದ್ದು ಮಹಿಳಾ ಪೇದೆ ಗಾಯಗೊಂಡರು. ಇಂದು ಪರಮೇಶ್ ಅವರೆ ಹಲ್ಲೆಗೆ ಒಳಗಾಗಿದ್ದಾರೆ. ಜಿಲ್ಲಾ ಆಡಳಿತದ ವೈಫಲ್ಯ ಷಡ್ಯಂತ್ರಕ್ಕೆ ಅವಕಾಶ ನೀಡಿದೆ. ಚುನಾವಣಾ ಆಯೋಗ ರಕ್ಷಣೆ ನೀಡಲಿ, ಕಳಂಕಿತ ಅಧಿಕಾರಿಗಳನ್ನು ವರ್ಗಾಯಿಸಲಿ' ಎಂದು ಒತ್ತಾಯಿಸಿದ್ದಾರೆ. 

ತನಿಖೆಗೆ ಒತ್ತಾಯ: ವಿರೋಧ ಪಕ್ಷಗಳ ಕುಮ್ಮಕ್ಕಿನಿಂದಲೇ ಡಾ.ಜಿ.ಪರಮೇ ಶ್ವರ್ ಮೇಲೆ ಕಲ್ಲೆಸೆಯಲಾಗಿದೆ ಎಂದು ತುಮಕೂರು ನಗರಸಭೆ ಮಾಜಿ ಉಪಾಧ್ಯಕ್ಷ ವಾಲೆ ಚಂದ್ರಯ್ಯ ಆರೋಪಿಸಿದ್ದಾರೆ.

ಕೊರಟಗೆರೆಯ ಬೈರೇನಹಳ್ಳಿ ಬಳಿ ಪ್ರಚಾರದಲ್ಲಿ ಭಾಗವಹಿಸಿದ್ದ ಸಂದರ್ಭದಲ್ಲಿ ಹೂವನ್ನು ಜೆಸಿಬಿ ಮೇಲಿಂದ ಎಸೆಯುವ ಸಂದರ್ಭ ದಲ್ಲಿಯೇ ಕಲ್ಲೇಟು ಬಿದ್ದಿರುವುದು ಅನುಮಾನಗಳಿಗೆ ಕಾರಣ ವಾಗಿದ್ದು ಈ ಬಗ್ಗೆ ಸೂಕ್ತ ತನಿಖೆ ನಡೆಸಬೇಕೆಂದು ಒತ್ತಾಯಿಸಿದರು.

ಡಾ.ಜಿ.ಪರಮೇಶ್ವರ್ ಮೇಲೆ ಷಡ್ಯಂತ್ರ ನಡೆಸಿ ಕಲ್ಲೆಸೆಯಲಾಗಿದೆ, ಈ ಹಿಂದೆಯೂ ಈ ರೀತಿ ಆಗಿತ್ತು, ವಿರೋಧಿಗಳ ಕುಮ್ಮಕ್ಕಿನ ಬಗ್ಗೆ ತನಿಖೆ ಯಾಗಬೇಕಿದೆ, ಕಲ್ಲೇಟು ಬಿದ್ದಿದ್ದರಿಂದ ಪರಮೇಶ್ವರ್ ಅವರಿಗೆ ಬಲವಾದ ಏಟು ಬಿದ್ದಿದೆ ಎಂದರು.

ಡಾ.ಜಿ.ಪರಮೇಶ್ವರ್ ಅವರ ಜನಪ್ರಿಯತೆಯನ್ನು ಸಹಿಸಲಾಗದೇ ಈ ರೀತಿ ಷಡ್ಯಂತ್ರ ಮಾಡಲಾಗಿದೆ, ಇದು ಎರಡನೇ ಬಾರಿಗೆ ಈ ರೀತಿಯ ಕೃತ್ಯ ನಡೆದಿದ್ದು, ಇಂತಹ ಕೃತ್ಯವನ್ನು ಕಾಂಗ್ರೆಸ್ ಖಂಡಿಸಲಿದೆ ಎಂದರು.

ಮೊದಲ ಬಾರಿ ಕಲ್ಲೇಸೆತ ಮಾಡಿದ್ದ ಬೇರೆ ಪಕ್ಷದ ಕಾರ್ಯಕರ್ತನೆ ಹೊರತು ನಮ್ಮವರಲ್ಲ, ಹೀಗಲೂ ಹಾಗೆಯೇ ಆಗಿದೆ, ಘಟನೆಯ ಬಗ್ಗೆ ಕೂಲಂಕಷವಾಗಿ ವಿಚಾರಣೆ ಮಾಡಬೇಕು ಎಂದರು.

ಡಾ.ಜಿ.ಪರಮೇಶ್ವರ್ ಗೆ ಎಸೆದ ಕಲ್ಲು ನನಗೆ ಸಿಕ್ಕಿದ್ದು ಅದನ್ನು ಪೊಲೀಸರಿಗೂ ತೋರಿಸಿದ್ದೇನೆ, ಟಾರು ರಸ್ತೆಯಲ್ಲಿ ಇದ್ದಿದ್ದು ಒಂದೇ ಕಲ್ಲು, ಬೇಕಂತಲೇ ಇಂತಹ ಕೃತ್ಯವನ್ನು ವಿರೋಧಿಗಳು ಮಾಡಿದ್ದಾರೆ ಎಂದು ದೂರಿದರು.

share
Next Story
X