Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಣ್ಣಾಮಲೈ ಕುಮ್ಮಕ್ಕಿನಿಂದ...

ಅಣ್ಣಾಮಲೈ ಕುಮ್ಮಕ್ಕಿನಿಂದ ಶಿವಮೊಗ್ಗದಲ್ಲಿ ತಮಿಳು ನಾಡಗೀತೆ: ಕರವೇ

28 April 2023 10:58 PM IST
share
ಅಣ್ಣಾಮಲೈ ಕುಮ್ಮಕ್ಕಿನಿಂದ ಶಿವಮೊಗ್ಗದಲ್ಲಿ ತಮಿಳು ನಾಡಗೀತೆ: ಕರವೇ

ಬೆಂಗಳೂರು, ಎ.28: ಶಿವಮೊಗ್ಗದಲ್ಲಿ ಬಿಜೆಪಿ ಚುನಾವಣಾ ಉಸ್ತುವಾರಿ ಅಣ್ಣಾಮಲೈ ನೇತೃತ್ವದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ತಮಿಳರನ್ನು ಓಲೈಸುವ ದೃಷ್ಟಿಯಿಂದ ತಮಿಳು ನಾಡಗೀತೆ ಹಾಡಿಸಿರುವುದು ಅಕ್ಷಮ್ಯವಾಗಿದ್ದು, ಅಣ್ಣಾಮಲೈ ಕುಮ್ಮಕ್ಕಿನಿಂದಲೇ ಈ ಘಟನೆ ನಡೆದಿರುವುದು ಸ್ಪಷ್ಟ’ ಎಂದು ಕರ್ನಾಟಕ ರಕ್ಷಣಾ ವೇದಿಕೆ ಖಂಡನೆ ವ್ಯಕ್ತಪಡಿಸಿದೆ.

ಶುಕ್ರವಾರ ಈ ಸಂಬಂಧ ಪ್ರಕಟನೆ ನೀಡಿರುವ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ, ‘ಸಮಾಧಾನದ ವಿಷಯವೆಂದರೆ ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ಸಕಾಲಿಕವಾಗಿ ಮಧ್ಯಪ್ರವೇಶ ಮಾಡಿ ತಮಿಳು ನಾಡಗೀತೆ ನಿಲ್ಲಿಸಿದ್ದಾರೆ. ಈ ವೇಳೆ ಕರ್ನಾಟಕದ ನಾಡಗೀತೆ ಹಾಡಲು ಕರೆದರೆ ಯಾರೂ ಮುಂದೆ ಬಂದಿಲ್ಲ. ಇದರಿಂದ ಬಿಜೆಪಿಯವರು ನಾಡಗೀತೆಗೆ ಎಷ್ಟು ಗೌರವ ಕೊಡುತ್ತಾರೆ ಎಂಬುದು ಅರ್ಥವಾಗುತ್ತದೆ ಎಂದು ಟೀಕಿಸಿದ್ದಾರೆ.

ಈ ಚುನಾವಣೆಯಲ್ಲಿ ಕನ್ನಡೇತರನ್ನು ಓಲೈಸಲು ಬಿಜೆಪಿಯ ಬಿ.ಎಲ್.ಸಂತೋಷ್ ಪಕ್ಷದ ಮುಖಂಡರಿಗೆ ಕರೆ ನೀಡಿರುವುದು ಮಾಧ್ಯಮಗಳಲ್ಲಿ ಪ್ರಕಟವಾಗಿತ್ತು. ಇದಕ್ಕೆ ಪೂರಕವಾಗಿಯೇ ಶಿವಮೊಗ್ಗದಲ್ಲಿ ತಮಿಳರ ಸಮಾವೇಶ ನಡೆಸಲಾಗಿದೆ ಎಂದು ಟಿ.ಎ.ನಾರಾಯಣಗೌಡ ಆಪಾದಿಸಿದ್ದಾರೆ.

ಕನ್ನಡಿಗರಿಗೆ ತಮಿಳರ ಬಗ್ಗೆಯಾಗಲಿ, ತಮಿಳು ನಾಡಗೀತೆ ಬಗ್ಗೆಯಾಗಲಿ ಅಗೌರವವಿಲ್ಲ. ಆದರೆ ಕರ್ನಾಟಕದಲ್ಲಿ ತಮಿಳು ನಾಡಗೀತೆ ಹಾಡಿಸುವ ಔಚಿತ್ಯವಾದರೂ ಏನು. ತಮಿಳರನ್ನು ಓಲೈಸಲು ಬಿಜೆಪಿ ಇಷ್ಟು ಕೆಳಮಟ್ಟಕ್ಕೆ ಇಳಿಯಬೇಕಾಗಿರಲಿಲ್ಲ. ತಾಕತ್ತಿದ್ದರೆ ಅಣ್ಣಾಮಲೈ ತಮಿಳುನಾಡಿನಲ್ಲಿ ಕನ್ನಡಿಗರ ಸಮಾವೇಶ ನಡೆಸಿ ಕರ್ನಾಟಕದ ನಾಡಗೀತೆ ಹಾಡಿಸಲಿ ಎಂದು ಟಿ.ಎ.ನಾರಾಯಣಗೌಡ ಸವಾಲು ಹಾಕಿದ್ದಾರೆ

ಚುನಾವಣೆ ಸಂದರ್ಭದಲ್ಲಿ ಹಲವು ರಾಜಕೀಯ ಪಕ್ಷಗಳು ಬೇರೆ ರಾಜ್ಯಗಳ ರಾಜಕಾರಣಿಗಳು, ಚಿತ್ರನಟರನ್ನು ಕರೆಯಿಸಿ ಬೇರೆ ಬೇರೆ ಭಾಷೆಗಳಲ್ಲಿ ಭಾಷಣ ಮಾಡಿಸಿ ಕನ್ನಡಿಗರನ್ನು ಅಪಮಾನಿಸುತ್ತಿದ್ದಾರೆ. ಇದು ನಾಡದ್ರೋಹದ ಕೆಲಸ. ಇಂಥವರಿಗೆ ಮತದಾನ ಸಂದರ್ಭದಲ್ಲಿ ಸರಿಯಾದ ಉತ್ತರವನ್ನು ಕನ್ನಡಿಗರು ನೀಡಬೇಕು ಎಂದು ಟಿ.ಎ.ನಾರಾಯಣಗೌಡ ತಿಳಿಸಿದರು.

share
Next Story
X