ಉಡುಪಿ: ಪಂಚನಬೆಟ್ಟು ವಿದ್ಯಾವರ್ಧಕ ಪ್ರೌಢಶಾಲೆಯ ಮಾನ್ಯತೆ ರದ್ದು

ಉಡುಪಿ, ಎ.29: ಮಕ್ಕಳ ಸಂಖ್ಯೆಯ ಕೊರತೆಯ ಕಾರಣದಿಂದ ಉಡುಪಿ ವಲಯದ ಪಂಚನಬೆಟ್ಟು ವಿದ್ಯಾವರ್ಧಕ ಅನುದಾನಿತ ಪ್ರೌಢಶಾಲೆಯನ್ನು ಕಾರ್ಯಸಾಧುವಲ್ಲದ ಶಾಲೆಯೆಂದು ಸರಕಾರ ಘೋಷಿಸಿದ್ದು, ಪ್ರಸಕ್ತ ಸಾಲಿನಿಂದ ಶಾಲೆಯ ಮಾನ್ಯತೆಯನ್ನು ಹಿಂಪಡೆದು, ಶಾಲೆ ಮುಚ್ಚಲು ಆದೇಶಿಸಲಾಗಿದೆ.
ಆದ್ದರಿಂದ ಪ್ರಸಕ್ತ ಸಾಲಿನಿಂದ ಈ ಶಾಲೆಗೆ ಮಕ್ಕಳನ್ನು ದಾಖಲಾತಿ ಮಾಡಿದ್ದಲ್ಲಿ ಸಂಬಂಧಪಟ್ಟ ಪೋಷಕರೇ ಜವಾಬ್ದಾರರಾಗಿರುತ್ತಾರೆ ಎಂದು ಉಡುಪಿ ವಲಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story