Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಶಾಸಕ, ಸಚಿವನಾದರೂ ಬಂಗಲೆ ಕಟ್ಟಿಲ್ಲ:...

ಶಾಸಕ, ಸಚಿವನಾದರೂ ಬಂಗಲೆ ಕಟ್ಟಿಲ್ಲ: ರಮಾನಾಥ ರೈ

1 May 2023 6:02 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಶಾಸಕ, ಸಚಿವನಾದರೂ ಬಂಗಲೆ ಕಟ್ಟಿಲ್ಲ: ರಮಾನಾಥ ರೈ

ಬಂಟ್ವಾಳ: ರಾಜ ವ್ಯಾಪಾರಿಯಾದರೆ ಪ್ರಜೆಗಳು ಭಿಕಾರಿಗಳಾಗುತ್ತಾರೆ ಎಂಬ ಮಾತಿದೆ. ಅದೇರೀತಿ ಇವತ್ತು ಉದ್ಯಮಿಗಳು ಜನಪ್ರತಿನಿಧಿ ಗಳಾಗುತ್ತಿರುವುದರಿಂದ ಅವರು ಎಲ್ಲವನ್ನೂ ಲಾಭದ ದೃಷ್ಟಿಯಿಂದ ನೋಡುತ್ತಿದ್ದಾರೆ. ಜನಸೇವೆಗಿಂತ ಭ್ರಷ್ಟಾಚಾರ ಎಸಗುವುದಕ್ಕೆ ಅವರು ಹೆಚ್ಚು ಆದ್ಯತೆ ನೀಡುತ್ತಿದ್ದಾರೆ. ಇದು ಜನತೆಯನ್ನು ತೀರಾ ಸಂಕಷ್ಟಕ್ಕೀಡು ಮಾಡಿದೆ. ಆದರೆ ನಾನು ಜನಸೇವೆಗಾಗಿಯೇ ಬದುಕಿದವನು. ಶಾಸಕ, ಸಚಿವನಾದರೂ ನಗರಗಳಲ್ಲಿ ದೊಡ್ಡ ಬಂಗಲೆ ಕಟ್ಟಿಲ್ಲ. ನನ್ನ ಹಿರಿಯರು ಕೊಟ್ಟ ಮನೆಯಲ್ಲೇ ವಾಸಿಸುತ್ತಿದ್ದೇನೆ ಮತ್ತು ಅಲ್ಲಿಂದಲೇ ಜನಸೇವೆ ಮಾಡುತ್ತಿದ್ದೇನೆ ಎಂದು ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.

ನಾವೂರ ಗ್ರಾಮದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಆಡಳಿತದಲ್ಲಿ ಪ್ರತಿಯೊಂದು ವಿಚಾರಕ್ಕೂ ಭ್ರಷ್ಟಾಚಾರ ನಡೆದಿರುವ ಬಗ್ಗೆ ಆ ಪಕ್ಷದ ಮುಖಂಡರುಗಳೇ ಆಪಾದಿಸಿದ್ದಾರೆ. ಇಂತಹ ಭ್ರಷ್ಟ ಸರಕಾರ ಕಿತ್ತೆಸೆಯದೆ ಜನರಿಗೆ ನೆಮ್ಮದಿಯ ಜೀವನ ಮರಳಲು ಸಾಧ್ಯವಿಲ್ಲ ಎಂದು ಅವರು ಅಭಿಪ್ರಾಯಪಟ್ಟರು.

ನನ್ನ ಅವಧಿಯಲ್ಲಿ ಆದ ಅಭಿವೃದ್ಧಿ ಕಾರ್ಯಗಳು ಹಾಗೂ ಕಳೆದ ಐದು ವರ್ಷದಲ್ಲಿ ಬಿಜೆಪಿಗರ ಕೆಲಸಗಳನ್ನು ತುಲನೆ ಮಾಡಿ ಈ ಬಾರಿ ಮತ ನೀಡಿ ಎಂದು ವಿನಂತಿಸಿದ ರೈ, ಬಂಟ್ವಾಳದಲ್ಲಿ ಆಗಿರುವ ಬಹುತೇಕ ಸರಕಾರಿ ಕಟ್ಟಡಗಳು, ಕ್ಷೇತ್ರದ ಮೂಲೆ ಮೂಲೆಯಲ್ಲಿ ರಸ್ತೆಗಳು ನನ್ನ ಅವಧಿಯಲ್ಲಿಯೇ ಆಗಿರುವಂಥದ್ದು. ಆದರೆ ಈಗ ರಸ್ತೆಯ ಒಂದು ತುದಿಗೆ ಸ್ವಲ್ಪ ಕಾಂಕ್ರಿಟ್ ಹಾಕಿ ದೊಡ್ಡ ದೊಡ್ಡ ಫ್ಲೆಕ್ಸ್ ಗಳನ್ನು ಹಾಕಿ ಪ್ರಚಾರ ಗಿಟ್ಟಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದುದರಿಂದ ಜನರು ನಿಜಾಂಶ ಅರಿತುಕೊಂಡು ಮತ ಚಲಾಯಿಸಬೇಕು ಎಂದು ಮನವಿ ಮಾಡಿದರು.

ಬಂಟ್ವಾಳದ ಅಭಿವೃದ್ಧಿಯಲ್ಲಿ ಅವಿರತ ಶ್ರಮಿಸಿದ ರೈಗಳನ್ನು ನಾವು ಈ ಬಾರಿ ಅತ್ಯಂತ ಶ್ರಮಪಟ್ಟು ಗೆಲ್ಲಿಸಬೇಕು. ಅವರು ಗೆದ್ದರೆ ಬಡವರು, ಅಸಹಾಯಕರಿಗೆ ಬಲ ಬಂದಂತೆ. ಬಂಟ್ವಾಳದ ಅಭಿವೃದ್ಧಿಗೆ ಅವರು ಕಂಡ ಕನಸುಗಳು ಪೂರ್ಣಗೊಳ್ಳುವುದಕ್ಕೆ ಅವಕಾಶ ಮಾಡಿಕೊಡಬೇಕು ಎಂದು   ನ್ಯಾಯವಾದಿ ಸುರೇಶ್ ನಾವೂರು ಮನವಿ ಮಾಡಿದರು.

ಇದೇ ವೇಳೆ ನಾವೂರು ಗ್ರಾಮದ ದೇವಪ್ಪ ಕುಲಾಲ್, ಸೀತಾರಾಮ್ ಕುಲಾಲ್, ಪ್ರವೀಣ್ ಕುಲಾಲ್ ಹಾಗೂ ದೇವಸ್ಯ ಪಡೂರು ಗ್ರಾಮದ ಸಂತೋಷ ಕರ್ಕೇರ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು.

ಕೆಪಿಸಿಸಿ ಮುಖಂಡರುಗಳಾದ ಅಶ್ವನಿ ಕುಮಾರ್ ರೈ, ಪಿಯೂಸ್ ಎಲ್. ರೊಡ್ರಿಗಸ್, ಚಂದ್ರಪ್ರಕಾಶ್ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಪ್ರಮುಖರಾದ ಪದ್ಮಶೇಖರ್ ಜೈನ್, ಮಾಯಿಲಪ್ಪ ಸಾಲ್ಯಾನ್, ಅಬ್ಬಾಸ್ ಅಲಿ, ಇಬ್ರಾಹೀಂ ಕೈಲಾರ, ಉಮೇಶ್ ಕುಲಾಲ್, ಲವೀನಾ ವಿಲ್ಮಾ ಮೊರಾಸ್, ಲವೀನಾ ಶಾಂತಿ ಡಿಸೋಜ, ಎಂ. ಮುಹಮ್ಮದ್, ಫಾರೂಕ್, ಯೋಗೀಶ್, ಸುವರ್ಣ ಕುಮಾರ್ ಜೈನ್, ತ್ರಿಶಾಲಾ ಸುವರ್ಣ ಮತ್ತಿತರರು ಉಪಸ್ಥಿತರಿದ್ದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X