ರಸ್ತೆ ಅಪಘಾತದಲ್ಲಿ ಸಬ್ ಇನ್ಸ್ಪೆಕ್ಟರ್ ಮೃತ್ಯು

ಹುಬ್ಬಳ್ಳಿ, ಮೇ.1: ಹೆಸ್ಕಾಂ ವಿಚಕ್ಷಣ ದಳದ ಸಬ್ ಇನ್ಸ್ಪೆಕ್ಟರ್ ಮಲ್ಲಿಕಾರ್ಜುನ ಕುಲಕರ್ಣಿ (40) ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ತಾಲೂಕಿನ ಕಿರೇಸೂರ ಗ್ರಾಮದ ಹುಬ್ಬಳ್ಳಿ- ವಿಜಯಪುರ ಹೆದ್ದಾರಿಯಲ್ಲಿ ನಿನ್ನೆ(ರವಿವಾರ) ಸ್ವಗ್ರಾಮಕ್ಕೆ ತಮ್ಮ ಕಾರಿನಲ್ಲಿ ಹೋಗುತ್ತಿದ್ದರು. ಈ ವೇಳೆ ಕಾರಿನ ನಿಯಂತ್ರಣ ಕಳೆದುಕೊಂಡಿದ್ದರಿಂದ, ಪಕ್ಕದ ತಡೆಗೋಡೆಗೆ ಕಾರು ಢಿಕ್ಕಿಯಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆ ಕುರಿತು ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಲ್ಲಿಕಾರ್ಜುನ ಅವರು 2010ನೇ ಬ್ಯಾಚ್ನ ಪೊಲೀಸ್ ಅಧಿಕಾರಿಯಾಗಿದ್ದಾರೆ. ಅವರಿಗೆ ಪತ್ನಿ ಮತ್ತು ಒಬ್ಬ ಪುತ್ರ ಇದ್ದಾನೆ.
Next Story





