Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಪಾನಿಪೂರಿ ಮಾರುತ್ತಿದ್ದಾತ ಈಗ ಐಪಿಎಲ್...

ಪಾನಿಪೂರಿ ಮಾರುತ್ತಿದ್ದಾತ ಈಗ ಐಪಿಎಲ್ ಶತಕವೀರ: ಇದು ಯಶಸ್ವಿ ಜೈಸ್ವಾಲ್ ಯಶೋಗಾಥೆ

1 May 2023 2:45 PM IST
share
ಪಾನಿಪೂರಿ ಮಾರುತ್ತಿದ್ದಾತ ಈಗ ಐಪಿಎಲ್ ಶತಕವೀರ: ಇದು ಯಶಸ್ವಿ ಜೈಸ್ವಾಲ್ ಯಶೋಗಾಥೆ

ಮುಂಬೈ: ಹಿಂದೊಮ್ಮೆ ಮುಂಬೈನ ಆಝಾದ್ ಮೈದಾನದ  ಟೆಂಟ್‌ಗಳಲ್ಲಿ ವಾಸ ಮಾಡುತ್ತಾ,  ತನ್ನ ಕ್ರಿಕೆಟ್ ಕನಸನ್ನು ಮುಂದುವರಿಸಲು ಪಾನಿಪೂರಿ ಮಾರಾಟ ಮಾಡಿದ್ದ ಯಶಸ್ವಿ ಜೈಸ್ವಾಲ್  ಇದೀಗ, ತನ್ನ ಅದ್ಭುತ ಪ್ರತಿಭೆ ಮೂಲಕ  ಇಂಡಿಯನ್ ಪ್ರೀಮಿಯರ್ ಲೀಗ್‌ನ  ಶತಕವೀರನಾಗಿ ಹೊರಹೊಮ್ಮಿದ್ದಾರೆ.

ಉತ್ತರ ಪ್ರದೇಶದ ಬಡ ಕುಟುಂಬದಿಂದ ಬಂದಿರುವ ಜೈಸ್ವಾಲ್ ತನ್ನ ಬಾಲ್ಯವನ್ನು ಕಳೆದಿರುವ ಮಹಾನಗರಿ  ಮುಂಬೈನಲ್ಲಿ ರವಿವಾರ ನಡೆದ ಐಪಿಎಲ್ ಪಂದ್ಯದಲ್ಲಿ ಭಾರೀ  ಪ್ರೇಕ್ಷಕರ ಸಮ್ಮುಖದಲ್ಲಿ ರಾಜಸ್ಥಾನ  ರಾಯಲ್ಸ್ ಪರ 62 ಎಸೆತಗಳಲ್ಲಿ 124 ರನ್ ಗಳಿಸಿದರು.

 "ಎಂತಹ  ಕಥೆ, ಎಂತಹ ವಿಶೇಷ ಪ್ರತಿಭೆ. ಯಶಸ್ವಿ ಜೈಸ್ವಾಲ್  ಸೂಪರ್‌ಸ್ಟಾರ್ ಆಗಿದ್ದಾರೆ" ಎಂದು ಆಸ್ಟ್ರೇಲಿಯಾದ ಮಾಜಿ ಬ್ಯಾಟ್ಸ್‌ಮನ್ ಹಾಗೂ  ಮಾಜಿ ಐಪಿಎಲ್ ಕೋಚ್ ಟಾಮ್ ಮೂಡಿ ಟ್ವೀಟ್ ಮಾಡಿದ್ದಾರೆ.

"ಅವರು ನಿಜವಾದ ಪ್ರತಿಭೆಯನ್ನು ಹೊಂದಿದ್ದಾರೆ. ದೇಶೀಯ ಋತುವಿನಲ್ಲಿ ತೋರಿದ್ದ ಶ್ರೇಷ್ಟ ಪ್ರದರ್ಶನವನ್ನು  ಅವರು ಐಪಿಎಲ್‌ ನಲ್ಲೂ ಮುಂದುವರಿಸಿದ್ದಾರೆ. ಇದರಿಂದ ಅವರಿಗೆ, ಭಾರತೀಯ ಕ್ರಿಕೆಟ್‌ಗೆ ಹಾಗೂ  ರಾಜಸ್ಥಾನ ರಾಯಲ್ಸ್ ಗೂ ಒಳ್ಳೆಯದ್ದಾಗಿದೆ" ಎಂದು ಭಾರತದ ನಾಯಕ ರೋಹಿತ್ ಶರ್ಮಾ ಹೇಳಿದ್ದಾರೆ.

ಎಡಗೈ ಆಟಗಾರ ಜೈಸ್ವಾಲ್ ಅವರ  ಚೊಚ್ಚಲ ಐಪಿಎಲ್ ಶತಕವು ಪ್ರಸಕ್ತ ಐಪಿಎಲ್ ಋತುವಿನ ಅತ್ಯಧಿಕ ಸ್ಕೋರ್  ಆಗಿದೆ.   ಲೀಗ್‌ನ 2023 ರ ಬ್ಯಾಟಿಂಗ್ ಶ್ರೇಯಾಂಕದಲ್ಲಿ ಜೈಸ್ವಾಲ್  ಅಗ್ರಸ್ಥಾನಕ್ಕೆ ಏರಿದ್ದಾರೆ.

ಜೈಸ್ವಾಲ್ ಅವರು 159.70 ಸ್ಟ್ರೈಕ್ ರೇಟ್‌ನೊಂದಿಗೆ  ಇದೀಗ 428 ರನ್‌ಗಳನ್ನು ಗಳಿಸಿದ್ದಾರೆ.  ದಕ್ಷಿಣ ಆಫ್ರಿಕಾದ ಬ್ಯಾಟರ್  ಎಫ್ ಡು ಪ್ಲೆಸಿಸ್ (422 - ರಾಯಲ್ ಚಾಲೆಂಜರ್ಸ್ ಬೆಂಗಳೂರು) ಹಾಗೂ  ನ್ಯೂಝಿಲ್ಯಾಂಡ್ ಆರಂಭಿಕ ಆಟಗಾರ ಡೆವೊನ್ ಕಾನ್ವೇ (414 - ಚೆನ್ನೈ ಸೂಪರ್ ಕಿಂಗ್ಸ್) ಅವರನ್ನು ಹಿಂದಿಕ್ಕಿದ್ದಾರೆ.

ಪಾನಿ ಪುರಿಯಿಂದ ಪ್ರೀಮಿಯರ್ ಲೀಗ್ ತನಕ…

ಜೈಸ್ವಾಲ್ ಅವರು ಕೇವಲ 11 ವರ್ಷದವರಾಗಿದ್ದಾಗ ತನ್ನ ಹೆತ್ತವರಿಲ್ಲದೆ ಮುಂಬೈಗೆ ತೆರಳಿದ್ದರು.

"ನಾನು ಡೈರಿಯಲ್ಲಿ ಮಲಗುತ್ತಿದ್ದೆ. ನಂತರ ನನ್ನ ಚಿಕ್ಕಪ್ಪನ ಮನೆಯಲ್ಲಿಯೇ ಇದ್ದೆ.  ಆದರೆ ಅದು ಸಾಕಷ್ಟು ದೊಡ್ಡದಾಗಿರಲಿಲ್ಲ. ಹೀಗಾಗಿ ಬೇರೆ ಸ್ಥಳವನ್ನು ಹುಡುಕಿಕೊ ಎಂದು ಚಿಕ್ಕಪ್ಪ, ನನಗೆ ಹೇಳಿದರು. ನಾನು ನಂತರ ಆಝಾದ್ ಮೈದಾನ (ಮುಂಬೈ ಕ್ರೀಡಾ ಮೈದಾನ) ಬಳಿಯ ಟೆಂಟ್‌ನಲ್ಲಿ ಉಳಿಯಲು ಆರಂಭಿಸಿದೆ. ಹಗಲಿನಲ್ಲಿ ಅಲ್ಲಿ ಕ್ರಿಕೆಟ್ ಆಡುತ್ತಿದ್ದೆ. ಆಹಾರಕ್ಕಾಗಿ   ಸ್ವಲ್ಪ ಹಣವನ್ನು ಗಳಿಸಲು ನಾನು ರಾತ್ರಿ ವೇಳೆ ಪಾನಿ ಪುರಿ ಮಾರಾಟ ಮಾಡಿದ್ದೇನೆ" ಎಂದು ಜೈಸ್ವಾಲ್ 2020 ರಲ್ಲಿ AFP ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

ಜೈಸ್ವಾಲ್ 2019 ರಲ್ಲಿ ಮುಂಬೈ ರಾಜ್ಯ ತಂಡದಲ್ಲಿ ಸ್ಥಾನ ಪಡೆದರು.   17 ವರ್ಷ ಮತ್ತು 292 ದಿನಗಳಲ್ಲಿ ದೇಶೀಯ ಏಕದಿನ ಕ್ರಿಕೆಟ್ ನಲ್ಲಿ  ದ್ವಿಶತಕ ಗಳಿಸಿದ ಅತ್ಯಂತ ಕಿರಿಯ ಬ್ಯಾಟ್ಸ್‌ಮನ್ ಎನಿಸಿಕೊಂಡರು.

ವಿಶ್ವದ ಶ್ರೀಮಂತ ಟಿ-20 ಟೂರ್ನಮೆಂಟ್‌ನ 2019 ರ ಹರಾಜಿನಲ್ಲಿ ಯುವ ಆಟಗಾರನನ್ನು ರಾಜಸ್ಥಾನವು ತನ್ನ ತೆಕ್ಕೆಗೆ ಸೇರಿಸಿಕೊಂಡಿತು.

2020 ರಲ್ಲಿ ಜೈಸ್ವಾಲ್ ಭಾರತದ ಅಂಡರ್-19 ತಂಡದ ಪರ  ಪ್ರಮುಖ ಸ್ಕೋರರ್ ಆಗಿದ್ದರು ಮತ್ತು 2020 ರ ಅಂಡರ್-19 ವಿಶ್ವಕಪ್‌ನಲ್ಲಿ ಪಂದ್ಯಾವಳಿಯ ಆಟಗಾರರಾಗಿದ್ದರು.

ಜೈಸ್ವಾಲ್ ಅವರ ಮೊದಲ ಮೂರು ಐಪಿಎಲ್ ಋತುಗಳು ಸಾಮಾನ್ಯವಾಗಿದ್ದವು, ಆದರೆ ಈ ವರ್ಷ ಅವರು ಇಂಗ್ಲೆಂಡ್ ವೈಟ್-ಬಾಲ್ ನಾಯಕ ಜೋಸ್ ಬಟ್ಲರ್ ಅವರೊಂದಿಗೆ ಉತ್ತಮ ಆರಂಭ ನೀಡಲು ಆರಂಭಿಸಿದ್ದಾರೆ.

share
Next Story
X