ವಿದ್ಯಾರ್ಥಿ ಜೀವನದಲ್ಲಿ ಜನರಿಗೆ ಭೂಮಿಯ ಹಕ್ಕನ್ನು ಕೊಟ್ಟವರು ಸೊರಕೆ: ಐವನ್ ಡಿಸೋಜ

ಕಾಪು, ಮೇ 1: ವಿದ್ಯಾರ್ಥಿ ಜೀವನದಲ್ಲೇ ಭೂ ನ್ಯಾಯ ಮಂಡಳಿ ಸದಸ್ಯರಾಗಿ ಜನರಿಗೆ ಭೂಮಿಯ ಹಕ್ಕನ್ನು ಕೊಟ್ಟ ಏಕೈಕ ರಾಜಕಾರಣಿ ಇದ್ರೆ ಅದು ವಿನಯ ಕುಮಾರ್ ಸೊರಕೆ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಹೇಳಿದ್ದಾರೆ.
ಪಡುಬಿದ್ರೆಯ ಕಂಚಿನಡ್ಕದಲ್ಲಿ ಸೋಮವಾರ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.
ಸಮಾಜ ಸೇವಕರಂದರೆ ಸಮಾಜದ ಜೊತೆ ಇರಬೇಕು. ತನ್ನ ಸಮಾಜ ಸೇವೆಯ ಕಾರ್ಯದಲ್ಲಿ ವಿನಯತೆಯಿಂದ ವಿನಯವಂತರಾಗಿ ಕಳೆದ ಚುನಾವಣೆಯಲ್ಲಿ 5 ವರ್ಷಗಳ ಕಾಲ ಸೋಲಿಸಿ ರಜೆ ಕೊಟ್ಟರೂ ನಿಮ್ಮ ಜೊತೆ ಇದ್ದು ನಿಮ್ಮ ಸಮಸ್ಯ ಗೆ ಹೋರಾಟಕ್ಕೆ ಧ್ವನಿಯಾದವರು ವಿನಯ ಕುಮಾರ್ ಸೊರಕೆ. ಈ ಬಾರಿ ಸೊರಕೆಯವರಿಗೆ ಮತ ನೀಡಿ 25 ಸಾವಿರ ಮತಗಳ ಅಂತರದಲ್ಲಿ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.
ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮರೋಳಿ ಮಾತನಾಡಿ, ಬಿಜೆಪಿಗೆ ವಿನಯ ಕುಮಾರ್ ಸೊರಕೆಯವರನ್ನು ದೂಷಿಸಲು ಯಾವುದೇ ಕಾರಣಗಳು ಸಿಗ್ತಾ ಇಲ್ಲ. ಧರಿಸುವ ಬಟ್ಟೆಯಷ್ಟು ಶುಭ್ರವಾಗಿದೆ ಅವರ ವ್ಯಕ್ತಿತ್ವ. ಪ್ರಾಂಜಲ ಮನಸ್ಸಿನಿಂದ ಪ್ರೀತಿಯಿಂದ ಮಮತೆಯಿಂದ ಸೊರಕೆಯವರ ಪರ ಕಾರ್ಯಕರ್ತರಯ ಕೆಲಸ ಮಾಡಬೇಕಿದೆ. ಸೊರಕೆಯವರ ವಿರೋಚಿತ ಗೆಲುವಿಗಾಗಿ ಕಟಿಬದ್ಧರಾಗಿ ಎಲ್ಲಾ ಸೇರಿ ಹಗಲಿರುಳು ದುಡಿಯಬೇಕು. ಸೋತ ಮೇಲೂ ಅತಿ ಹೆಚ್ಚು ಜನ ಸಂಪರ್ಕವನ್ನು ಇಟ್ಟುಕೊಂಡ ಸೊರಕೆಯವರನ್ನು ಕಾಪುವಿನ ಜನ ಕಾಪಾಡಿಕೊಳ್ತಾರೆ ಅನ್ನೋ ನಂಬಿಕೆ ಇದೆ ಎಂದರು.
ಕಾಪು ಕಾಂಗ್ರೆಸ್ ಆಭ್ಯರ್ಥಿ ವಿನಯ ಕುಮಾರ್ ಸೊರಕೆ ಮಾತನಾಡಿ, ಕಾಪುವಿನ ಪ್ರಣಾಳಿಕೆಯಲ್ಲಿ ಕಾರ್ಮಿಕರಿಗೂ ಹೆಚ್ಚಿನ ಮಹತ್ವ ಕೊಟ್ಟಿದ್ದೀವಿ. ಮತದಾರರ ಮನವೊಲಿಸಿ ಕಾಂಗ್ರೆಸ್ ಕಾರ್ಯಕ್ರಮದ ಬಗ್ಗೆ ತಿಳಿಸಿ ಪ್ರತಿಯೊಬ್ಬರೂ ಅಭ್ಯರ್ಥಿಯಾಗಿ ಕೆಲಸ ಮಾಡಬೇಕು ಎಂದು ಮನವಿ ಮಾಡಿದರು.
ಕಾಂಗ್ರೆಸ್ ಮುಖಂಡರಾದ ರಾಜಶೇಖರ ಕೋಟ್ಯಾನ್, ನವೀನಚಂದ್ರ ಶೆಟ್ಟಿ, ನವೀನಚಂದ್ರ ಸುವರ್ಣ, ದಿನೇಶ್ ಕೋಟ್ಯಾನ್, ರಮೀಜ್, ವಿಶ್ವಾಸ್ ಅಮೀನ್, ಜಿತೇಂದ್ರ ಫುಟಾರ್ಡೊ, ಶೇಖರ ಹೆಜ್ಮಾಡಿ, ಕರುಣಾಕರ ಪೂಜಾರಿ, ಸುಧೀರ್ ಕರ್ಕೇರ, ಯಶವಂತ್, ಅಖಿಲೇಶ್ ಕೋಟ್ಯಾನ್, ದೇವಿಪ್ರಸಾದ್ ಶೆಟ್ಟಿ, ಶರ್ಪುದ್ದೀನ್ ಶೇಖ್, ದೀಪಕ್ ಕುಮಾರ್ ಎರ್ಮಾಳ್, ವೈ. ಸುಕುಮಾರ್, ಅಬ್ದುಲ್ ಅಝೀಝ್ ಹೆಜಮಾಡಿ, ರಮೀಝ್ ಹುಸೈನ್ ಉಪಸ್ಥಿತರಿದ್ದರು.