Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಕಲಿ ಕಾಲ್ ಸೆಂಟರ್ ಜಾಲವನ್ನು ಭೇದಿಸಲು...

ನಕಲಿ ಕಾಲ್ ಸೆಂಟರ್ ಜಾಲವನ್ನು ಭೇದಿಸಲು ಮುಂಬೈ ಪೊಲೀಸರಿಗೆ ಸಹಾಯ ಮಾಡಿದ ಬೆಳಗ್ಗಿನ ಉಪಹಾರ !

1 May 2023 7:23 PM IST
share
ನಕಲಿ ಕಾಲ್ ಸೆಂಟರ್ ಜಾಲವನ್ನು ಭೇದಿಸಲು ಮುಂಬೈ ಪೊಲೀಸರಿಗೆ ಸಹಾಯ ಮಾಡಿದ ಬೆಳಗ್ಗಿನ ಉಪಹಾರ !

ಮುಂಬೈ: ಉದ್ಯೋಗಿಗಳು ಬೆಳಗಿನ ಉಪಾಹಾರಕ್ಕಾಗಿ ಆರ್ಡರ್‌ ಮಾಡುತ್ತಿರುವುದರ ಜಾಡು ಹಿಡಿದು ನಕಲಿ ಕಾಲ್ ಸೆಂಟರ್ ಅನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದೇವೆ ಎಂದು ಸೋಮವಾರ ಮುಂಬೈ ಪೊಲೀಸರು ಮಾಹಿತಿ ನೀಡಿದ್ದಾರೆ ಎಂದು ndtv.com ವರದಿ ಮಾಡಿದೆ.

ರಜೋಡಿ ಕಿನಾರೆ ಬಳಿಯ ಮನೆಯೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕೇಂದ್ರದಲ್ಲಿ ಹತ್ತಾರು ಉದ್ಯೋಗಿಗಳನ್ನಿಟ್ಟುಕೊಂಡು, ಅವರು ಹೊರಗಿನ ಜನರೊಂದಿಗೆ ಮಾತುಕತೆ ನಡೆಸದಂತೆ ತಡೆಯಲು ಕಟ್ಟಡದಿಂದ ಹೊರ ಹೋಗಲು ಅವಕಾಶ ನೀಡಲಾಗುತ್ತಿರಲಿಲ್ಲ ಎಂದು ಹೇಳಲಾಗಿದೆ.

ಆದರೆ, ಮುಂಜಾನೆ 4 ಗಂಟೆ ವೇಳೆಗೆ ಸಮೀಪದ ಉಪಾಹಾರ ಗೃಹಕ್ಕೆ ಹತ್ತಾರು ಉಪಾಹಾರದ ಪೊಟ್ಟಣಗಳಿಗೆ  ಪದೇ ಪದೇ ಆರ್ಡರ್‌ ನೀಡುತ್ತಿರುವ ಕುರಿತು ಸುಳಿವು ಪೊಲೀಸರಿಗೆ ದೊರೆತಿದೆ.

ಈ ಕುರಿತು AFP ಸುದ್ದಿ ಸಂಸ್ಥೆಗೆ ಪ್ರತಿಕ್ರಿಯಿಸಿರುವ ಪೊಲೀಸ್ ಅಧಿಕಾರಿ ಸುಹಾಸ್ ಬಾವ್ಚೆ, "ಕಿನಾರೆ ಬಳಿಯ ರೆಸಾರ್ಟ್‌ ವಾರಾಂತ್ಯದಲ್ಲಿ ಪ್ರವಾಸಿಗರಿಂದ ತುಂಬಿ ತುಳುಕಿರುತ್ತಿದ್ದರೆ ಉಳಿದ ದಿನ ಖಾಲಿ ಇರುತ್ತಿತ್ತು. ಹೀಗಾಗಿ ಹಲವಾರು ದಿನಗಳ ಕಾಲ ಮುಂಜಾನೆಯೇ ಅಷ್ಟೊಂದು ಚಹಾ ಹಾಗೂ ಉಪಹಾರಗಳಿಗೆ ಆರ್ಡರ್ ನೀಡುವುದು ನಮ್ಮಲ್ಲಿ ಸಂಶಯ ಹುಟ್ಟಿಸಿತು ಹಾಗೂ ನಾವು ರಹಸ್ಯವಾಗಿ ಆ ಸ್ಥಳದ ಮೇಲೆ ನಿಗಾ ವಹಿಸಲು ಶುರು ಮಾಡಿದೆವು" ಎಂದು ತಿಳಿಸಿದ್ದಾರೆ.

ಅಂತಿಮವಾಗಿ ಎಪ್ರಿಲ್ 11ರ ರಾತ್ರಿ 60 ಉದ್ಯೋಗಿಗಳಿಗೆ ಸ್ಥಳಾವಕಾಶ ಹೊಂದಿದ್ದ ಆ ಮನೆಯ ಮೇಲೆ ದಾಳಿ ನಡೆಸಿರುವ ಪೊಲೀಸರು, ಆ ಮನೆಯ ಮಾಲಕ ಹಾಗೂ 47 ಉದ್ಯೋಗಿಗಳನ್ನು ಬಂಧಿಸಿದ್ದಾರೆ.

ಬಂಧಿತರ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಸೋಗು, ವಂಚನೆ ಹಾಗೂ ಅಕ್ರಮದ ಆರೋಪಗಳನ್ನು ದಾಖಲಿಸಿಕೊಳ್ಳಲಾಗಿದೆ. ಪೊಲೀಸರು ನಕಲಿ ಕಾಲ್ ಸೆಂಟರ್‌ನಲ್ಲಿ ಬಳಕೆ ಮಾಡಲಾಗುತ್ತಿದ್ದ ಕಂಪ್ಯೂಟರ್‌ಗಳ ವಿಧಿವಿಜ್ಞಾನ ಪರೀಕ್ಷೆಗಳನ್ನೂ ಪ್ರಾರಂಭಿಸಿದ್ದಾರೆ.

ಈವರೆಗಿನ ತನಿಖೆಯಲ್ಲಿ ಆಸ್ಟ್ರೇಲಿಯಾ ಬ್ಯಾಂಕ್ ಗ್ರಾಹಕರಿಂದ ಕರೆ ಸ್ವೀಕರಿಸುವ ತರಬೇತಿಯನ್ನು ಯುವ ಉದ್ಯೋಗಿಗಳಿಗೆ ನೀಡಲಾಗಿತ್ತು ಎಂಬ ಸಂಗತಿ ಬೆಳಕಿಗೆ ಬಂದಿದೆ ಎಂದು ಬಾವ್ಚೆ ತಿಳಿಸಿದ್ದಾರೆ.

ಅವರು ಬ್ಯಾಂಕ್ ಗ್ರಾಹಕರಿಂದ ಒಟಿಪಿ ಸೇರಿದಂತೆ ಸೂಕ್ಷ್ಮ ವೈಯಕ್ತಿಕ ವಿವರಗಳು ಹಾಗೂ ಭದ್ರತಾ ಮಾಹಿತಿಯನ್ನು ಸಂಗ್ರಹಿಸಿ, ಆ ಮಾಹಿತಿಗಳನ್ನು ಈಮೇಲ್ ಮೂಲಕ ವ್ಯವಸ್ಥಾಪಕರಿಗೆ ರವಾನಿಸುತ್ತಿದ್ದರು ಎಂದು ಬಾವ್ಚೆ ತಿಳಿಸಿದ್ದಾರೆ.

"ಇದು ಕೇವಲ ಸಾಗರದ ಒಂದು ಹನಿ ಮಾತ್ರ ಆಗಿರುವ ಸಾಧ್ಯತೆ ಇದೆ. ನಾವು ಈ ಜಾಲದೊಂದಿಗೆ ಅಂತಾರಾಷ್ಟ್ರೀಯ ಸಂಪರ್ಕವಿದೆಯೆ ಎಂಬ ಕುರಿತೂ ತನಿಖೆ ನಡೆಸುತ್ತಿದ್ದೇವೆ. ಒಂದೇ ಬಾರಿಗೆ ಒಂದೇ ಸ್ಥಳದಿಂದ ಹಲವಾರು ತಿಂಗಳಿನಿಂದ ಕಾರ್ಯಾಚರಿಸುತ್ತಿರುವ ಇಂತಹ ನಕಲಿ ಕಾಲ್ ಸೆಂಟರ್‌ಗಳನ್ನು ನಿಯಮಿತವಾಗಿ ದೇಶಾದ್ಯಂತ ಭೇದಿಸಲಾಗಿದೆ" ಎಂದು ಬಾವ್ಚೆ ಮಾಹಿತಿ ನೀಡಿದ್ದಾರೆ.

share
Next Story
X