ಬೆಂಗಳೂರು | ಕಾಲೇಜಿನಲ್ಲಿ ವಿದ್ಯಾರ್ಥಿ ಹತ್ಯೆ ಪ್ರಕರಣ: ಮತ್ತೆ ಇಬ್ಬರ ಬಂಧನ

ಬೆಂಗಳೂರು, ಮೇ.2: ಖಾಸಗಿ ಕಾಲೇಜಿನಲ್ಲಿ ನಡೆದಿದ್ದ ವಿದ್ಯಾರ್ಥಿ ಹತ್ಯೆ ಪ್ರಕರಣದ ಇಬ್ಬರು ಆರೋಪಿಗಳನ್ನು ಮೂಡಿಗೆರೆ ಅರಣ್ಯ ಪ್ರದೇಶದಲ್ಲಿ ಬಾಗಲೂರು ಠಾಣಾ ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಅನಿಲ್ ಹಾಗೂ ಶೃಂಗ ಎಂಬಾತನನ್ನು ಬಾಗಲೂರು ಠಾಣಾ ಪೊಲೀಸರು ಬಂಧಿಸಿದ್ದಾರೆ.
ಎ.28ರ ರಾತ್ರಿ ಕಾಲೇಜು ಫೆಸ್ಟಿವಲ್ ಸಂದರ್ಭದಲ್ಲಿ ಅದೇ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದ ಭರತೇಶ್ ಸ್ನೇಹಿತನ ಅತ್ತೆ ಮಗಳ ಮೇಲೆ ಶರತ್ ಎಂಬಾತ ಕ್ರಿಕೆಟ್ ಬಾಲ್ ಎಸೆದಿದ್ದ. ಇದೇ ವಿಚಾರವಾಗಿ ಶರತ್ ಹಾಗೂ ಆತನ ಸ್ನೇಹಿತ ಭಾಸ್ಕರ್ ಜೆಟ್ಟಿ ಜೊತೆ ಭರತೇಶ್ ಗುಂಪು ಗಲಾಟೆ ನಡೆದಿತ್ತು.ಈ ವೇಳೆ, ಏಕಾಏಕಿ ಮಧ್ಯ ಪ್ರವೇಶಿಸಿದ್ದ ಆರೋಪಿ ಅನಿಲ್, ತನಗೆ ಸಂಬಂಧವೇ ಇರದಿದ್ದರೂ ಏಕಾಏಕಿ ಭಾಸ್ಕರ್ ಜೆಟ್ಟಿಯ ಎದೆಗೆ ಚಾಕು ಇರಿದಿದ್ದ. ಪರಿಣಾಮ ತೀವ್ರ ರಕ್ತಸ್ರಾವದಿಂದ ಭಾಸ್ಕರ್ ಜೆಟ್ಟಿ ಸ್ಥಳದಲ್ಲೇ ಸಾವನ್ನಪ್ಪಿದ್ದ.
ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಭರತೇಶ್ನನ್ನಬಂಧಿಸಿದ್ದರು. ಕೃತ್ಯದ ಬಳಿಕ ಕಾರಿನಲ್ಲಿ ಮೂಡಿಗೆರೆಗೆ ಪರಾರಿಯಾಗಿದ್ದ ಅನಿಲ್ ಹಾಗೂ ಆತನ ಜೊತೆಗಿದ್ದ ಶೃಂಗನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ.





