Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಮಾಹಿತಿ ಹಕ್ಕು ಕಾಯ್ದೆ: ಇನ್ನೂ...

ಮಾಹಿತಿ ಹಕ್ಕು ಕಾಯ್ದೆ: ಇನ್ನೂ ಪಾವತಿಯಾಗದ 36.85 ಲಕ್ಷ ರೂ. ದಂಡ

ಜಿ.ಮಹಾಂತೇಶ್ಜಿ.ಮಹಾಂತೇಶ್3 May 2023 9:02 AM IST
share
ಮಾಹಿತಿ ಹಕ್ಕು ಕಾಯ್ದೆ: ಇನ್ನೂ ಪಾವತಿಯಾಗದ 36.85 ಲಕ್ಷ ರೂ. ದಂಡ

ಬೆಂಗಳೂರು: ಮಾಹಿತಿ ಹಕ್ಕು ಕಾಯ್ದೆಯಡಿ ಸಲ್ಲಿಸಲಾದ ಅರ್ಜಿಗಳಿಗೆ ಸಕಾಲದಲ್ಲಿ ಮಾಹಿತಿ ನೀಡದ ಅಧಿಕಾರಿಗಳಿಗೆ ವಿಧಿಸಿರುವ ದಂಡ ಮೊತ್ತದ ಪೈಕಿ ಇದುವರೆಗೂ 36.85 ಲಕ್ಷ ರೂ. ಪಾವತಿಯಾಗಿಲ್ಲ ಎಂಬುದು ಇದೀಗ ಬಹಿರಂಗವಾಗಿದೆ.

ಮಾಹಿತಿ ಹಕ್ಕು ಕಾಯ್ದೆಯಡಿ ವಿಧಿಸಿರುವ ದಂಡದ ಮೊತ್ತವನ್ನು ಸಾರ್ವಜನಿಕ ಮಾಹಿತಿ ಅಧಿಕಾರಿಗಳಿಂದ ವಸೂಲು ಮಾಡಿ ಮಾಹಿತಿ ಹಕ್ಕು ಆಯೋಗಕ್ಕೆ ಪಾವತಿಸಬೇಕಿತ್ತು. ಆದರೆ ಕಂದಾಯ ಇಲಾಖೆಯೊಂದರಿಂದಲೇ 402 ಪ್ರಕರಣಗಳಲ್ಲಿ ವಿಧಿಸಿದ್ದ ದಂಡದ ಮೊತ್ತ ಇದುವರೆಗೂ ಪಾವತಿಯಾಗಿಲ್ಲ.

ದಂಡದ ಮೊತ್ತವನ್ನು ಪಾವತಿಸದ ಕಾರಣ ಪ್ರಕರಣಗಳು ಮುಕ್ತಾಯಗೊಂಡಿಲ್ಲ. ಅಲ್ಲದೆ ಅನವಶ್ಯಕವಾಗಿ ಮುಂದೂಡಲಾಗುತ್ತಿದೆ. ಈ ಸಂಬಂಧ ಸಾರ್ವಜನಿಕ ಮಾಹಿತಿ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದು ಕರ್ನಾಟಕ ಮಾಹಿತಿ ಆಯೋಗದ ಆಯುಕ್ತ ಎಚ್.ಪಿ. ಸುಧಾಮ್ ದಾಸ್ ಬರೆದಿದ್ದ ಪತ್ರಕ್ಕೂ ಕಂದಾಯ ಇಲಾಖೆ ಯಾವುದೇ ಕಿಮ್ಮತ್ತು ನೀಡಿಲ್ಲ. ಈ ಸಂಬಂಧ ‘ಣhe-ಜಿiಟe.iಟಿ’ಗೆ ದಾಖಲೆಗಳು ಲಭ್ಯವಾಗಿವೆ.

ಕರ್ನಾಟಕ ಮಾಹಿತಿ ಆಯೋಗದಿಂದ ಸಾರ್ವಜನಿಕ ಮಾಹಿತಿ ಅಧಿಕಾರಿಗಳಿಗೆ ಮಾಹಿತಿ ಹಕ್ಕು ಕಾಯ್ದೆ ಕಲಂ 20(1)ರಡಿ ವಿಧಿಸಿರುವ ದಂಡದ ಮೊತ್ತವನ್ನು ವಸೂಲು ಮಾಡಬೇಕು ಎಂದು ಎಚ್.ಪಿ. ಸುಧಾಮ್ ದಾಸ್ 2023ರ ಜನವರಿ 19ರಂದೇ ಕಂದಾಯ ಇಲಾಖೆಯ ಕಾರ್ಯದರ್ಶಿಗೆ ಪತ್ರ ಬರೆದಿದ್ದರು. ಈ ಪತ್ರ ಬರೆದ ನಾಲ್ಕು ತಿಂಗಳ ನಂತರ ಕಾರ್ಯದರ್ಶಿಗಳು ಇದೀಗ ಬೆಂಗಳೂರು, ಮೈಸೂರು, ಬೆಳಗಾವಿ, ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರು ಮತ್ತು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಪತ್ರವನ್ನು ಬರೆದಿದ್ದಾರೆ. ಈ ಪತ್ರದ ಪ್ರತಿಯೂ ‘ದಿ ಫೈಲ್’ಗೆ ಲಭ್ಯವಾಗಿದೆ.

ಕಂದಾಯ ಇಲಾಖೆಯ ಸಾರ್ವಜನಿಕ ಮಾಹಿತಿ ಅಧಿಕಾರಿಗಳಿಗೆ ಈವರೆಗೆ ಒಟ್ಟು 405 ಪ್ರಕರಣಗಳಲ್ಲಿ ವಿಧಿಸಲಾದ ದಂಡದ ಮೊತ್ತ 36,85,500 ರೂ. ಪಾವತಿಯಾಗಿರುವುದಿಲ್ಲ. ಇಂತಹ ಪ್ರಕರಣಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕ ಮಾಹಿತಿ ಅಧಿಕಾರಿಯ ವೇತನದಿಂದ ಕಟಾವಣೆ ಮಾಡಲು ಪ್ರಥಮ ಮೇಲ್ಮನವಿ ಪ್ರಾಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದು ಹಲವು ಬಾರಿ ಪತ್ರಗಳ ಮೂಲಕ ಕೋರಲಾಗಿತ್ತು. ಆದರೆ ಇಲ್ಲಿಯವರೆಗೂ ಪೂರ್ಣ ಮೊತ್ತದ ದಂಡ ಪಾವತಿಯಾಗಿಲ್ಲ ಎಂದು ಮಾಹಿತಿ ಆಯೋಗದ ಆಯುಕ್ತ ಎಚ್.ಪಿ.ಸುಧಾಮ್ ದಾಸ್   2023ರ ಜನವರಿ 19ರಂದು ಪತ್ರದಲ್ಲಿ ವಿವರಿಸಿದ್ದರು.

ಈ ಪತ್ರವನ್ನಾಧರಿಸಿ ಕಂದಾಯ ಇಲಾಖೆಯ ಸರಕಾರದ ಕಾರ್ಯದರ್ಶಿ ಜಯರಾಮ್   2023ರ ಎಪ್ರಿಲ್ 29ರಂದು ಎಲ್ಲ ಜಿಲ್ಲಾಧಿಕಾರಿಗಳು, ಪ್ರಾದೇಶಿಕ ಆಯುಕ್ತರಿಗೆ ಪತ್ರವೊಂದನ್ನು ಬರೆದಿದ್ದಾರೆ. 36.85 ಲಕ್ಷ ರೂ. ದಂಡದ ಮೊತ್ತವನ್ನು ಸಂಬಂಧಿಸಿದ ಸಾರ್ವಜನಿಕ ಮಾಹಿತಿ ಅಧಿಕಾರಿಯ ವೇತನದಲ್ಲಿ ಕಟಾಯಿಸಿ ದಾಖಲೆ ಸಹಿತ ಮಾಹಿತಿ ಆಯೋಗಕ್ಕೆ ತಿಳಿಸಬೇಕು ಎಂದು ಕಂದಾಯ ಇಲಾಖೆಯ ಸರಕಾರದ ಕಾರ್ಯದರ್ಶಿಯು ನಿರ್ದೇಶನ ನೀಡಿರುವುದು ಪತ್ರದಿಂದ ಗೊತ್ತಾಗಿದೆ.

ಮಾಹಿತಿ ಹಕ್ಕು ಅಧಿನಿಯಮ 2005 ಕಲಂ 19ರಡಿ ಸಲ್ಲಿಕೆಯಾಗುವ ದ್ವಿತೀಯ ಮೇಲ್ಮನವಿ ಪ್ರಕರಣಗಳ ವಿಚಾರಣೆ ನಡೆಸಿ ನಿಗದಿಪಡಿಸಿದ್ದ ಕಾಲಮಿತಿ ನಂತರವೂ ಅಧಿಕಾರಿಗಳು ಮಾಹಿತಿ ನೀಡದೇ ವಿಳಂಬ ಧೋರಣೆ ಪ್ರದರ್ಶಿಸಿದ್ದರು. ಮಾಹಿತಿಯನ್ನು ವಿಳಂಬವಾಗಿ ಒದಗಿಸಿದ ಪ್ರಕರಣಗಳಿಗೆ ಮತ್ತು ಮಾಹಿತಿ ನೀಡದೇ ಇರುವ ಪ್ರಕರಣಗಳಿಗೆ ಸಂಬಂಧಿಸಿ ಆಯೋಗವು ಆಯಾ ಸಾರ್ವಜನಿಕ ಮಾಹಿತಿ ಅಧಿಕಾರಿಗಳಿಗೆ ಕಾರಣ ಕೇಳುವ ನೋಟಿಸ್ ನೀಡಲಾಗಿತ್ತು.

ಈ ನೋಟಿಸ್‌ಗಳಿಗೆ ಸಂಬಂಧಿಸಿದ ಸಾರ್ವಜನಿಕ ಮಾಹಿತಿ ಅಧಿಕಾರಿಗಳು ನೀಡಿದ್ದ ಕಾರಣಗಳನ್ನು ಪರಿಶೀಲಿಸಿದ ನಂತರ ಮಾಹಿತಿ ಹಕ್ಕು ಅಧಿನಿಯಮದ ಕಲಂ 20(1)ರಂತೆ ದಂಡವನ್ನು ವಿಧಿಸಿತ್ತು. ಅಲ್ಲದೆ ಹಲವು ಪ್ರಕರಣಗಳಲ್ಲಿ ವಿಧಿಸಲಾದ ದಂಡದ ಮೊತ್ತವನ್ನು ಸಂಬಂಧಿಸಿದ ಬಟವಾಡೆ ಅಧಿಕಾರಿ/ ಮೇಲಧಿಕಾರಿಗಳು, ಸಾರ್ವಜನಿಕ ಮಾಹಿತಿ ಅಧಿಕಾರಿಯ ವೇತನದಿಂದ ಕಟಾಯಿಸಿ ಆಯೋಗಕ್ಕೆ ವರದಿ ಸಲ್ಲಿಸಬೇಕಿತ್ತು. ಆದರೆ ಆಯೋಗದ ನಿರ್ದೇಶನವನ್ನು ಕಂದಾಯ ಇಲಾಖೆಯ ಸಾರ್ವಜನಿಕ ಮಾಹಿತಿ ಅಧಿಕಾರಿಗಳು ಪಾಲಿಸದೆ ಉಲ್ಲಂಘಿಸಿದ್ದರು ಎಂಬ ಸಂಗತಿಯು ಮಾಹಿತಿ ಆಯೋಗದ ಆಯುಕ್ತರು ಮತ್ತು ಕಂದಾಯ ಇಲಾಖೆಯ ಸರಕಾರದ ಕಾರ್ಯದರ್ಶಿಯ ಪತ್ರದಿಂದ ತಿಳಿದು ಬಂದಿದೆ.

ಹಲವು ಪ್ರಕರಣಗಳಲ್ಲಿ ವಿಧಿಸಲಾದ ದಂಡದ ಮೊತ್ತವನ್ನು ಸಂಬಂಧಿಸಿದ ಬಟವಾಡೆ ಅಧಿಕಾರಿ/ಮೇಲಧಿಕಾರಿಗಳು, ಸಾರ್ವಜನಿಕ ಮಾಹಿತಿ ಅಧಿಕಾರಿಯ ವೇತನದಿಂದ ಕಟಾಯಿಸಿ ಆಯೋಗಕ್ಕೆ ವರದಿಯನ್ನು ಕಳುಹಿಸದೆ ಇರುವುದರಿಂದ ಇಂತಹ ಪ್ರಕರಣಗಳನ್ನು ಮುಕ್ತಾಯಗೊಳಿಸಲು ಸಾಧ್ಯವಾಗುತ್ತಿಲ್ಲ. ಇದರಿಂದ ಪದೇಪದೇ ಪ್ರಕರಣಗಳನ್ನು ಅನವಶ್ಯಕವಾಗಿ ಮುಂದೂಡುವ ಸಂದರ್ಭ ಉದ್ಬವವಾಗುತ್ತಿದೆ ಎಂದು ಮಾಹಿತಿ ಆಯೋಗದ ಆಯುಕ್ತರು ಪತ್ರದಲ್ಲಿ ವಿವರಿಸಿದ್ದರು.

share
ಜಿ.ಮಹಾಂತೇಶ್
ಜಿ.ಮಹಾಂತೇಶ್
Next Story
X