Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತಮಿಳುನಾಡು: ಸೆಪ್ಟಿಕ್ ಟ್ಯಾಂಕ್...

ತಮಿಳುನಾಡು: ಸೆಪ್ಟಿಕ್ ಟ್ಯಾಂಕ್ ಸ್ವಚ್ಛಗೊಳಿಸುತ್ತಿದ್ದ ಇಬ್ಬರು ದಲಿತರು ಮೃತ್ಯು

ಹೊಣೆಗಾರಿಕೆಯಿಂದ ನುಣುಚಿಕೊಂಡ ಪಂಚಾಯತ್

3 May 2023 5:46 PM IST
share
ತಮಿಳುನಾಡು: ಸೆಪ್ಟಿಕ್ ಟ್ಯಾಂಕ್ ಸ್ವಚ್ಛಗೊಳಿಸುತ್ತಿದ್ದ ಇಬ್ಬರು ದಲಿತರು ಮೃತ್ಯು
ಹೊಣೆಗಾರಿಕೆಯಿಂದ ನುಣುಚಿಕೊಂಡ ಪಂಚಾಯತ್

ಚೆನ್ನೈ: ತಮಿಳುನಾಡಿನ ತಿರುವಳ್ಳೂರು ಜಿಲ್ಲೆಯ ಮಿಂಜೂರ್ ಪಟ್ಟಣ ಪಂಚಾಯತ್ನಲ್ಲಿ ನೈರ್ಮಲ್ಯ ಕಾರ್ಮಿಕರಿಬ್ಬರು ಸೆಪ್ಟಿಕ್ ಟ್ಯಾಂಕ್ ಅನ್ನು ಸ್ವಚ್ಛಗೊಳಿಸುತ್ತಿದ್ದ ಸಂದರ್ಭ ವಿಷಾನಿಲ ಸೇವನೆಯಿಂದ ಮೃತಪಟ್ಟಿದ್ದು, ಕಾರ್ಮಿಕರ ದಿನವಾದ ಮೇ 1ರಂದೇ ಈ ಘಟನೆ ಸಂಭವಿಸಿದೆ.

ಮೃತರ ಪೈಕಿ ಗೋವಿಂದನ್ (45) ಪಟ್ಟಣ ಪಂಚಾಯತ್ನಲ್ಲಿ ಕಾಯಂ ಉದ್ಯೋಗಿಯಾಗಿದ್ದರೆ,ಸುಭರಾಯಲು (58) ತಾತ್ಕಾಲಿಕ ಸ್ವೀಪರ್ ಆಗಿದ್ದರು. ಮೇ 1ರಂದು ರಜಾದಿನವಾಗಿದ್ದರಿಂದ ಹೆಚ್ಚುವರಿ ಆದಾಯಕ್ಕಾಗಿ ಖಾಸಗಿ ಗುತ್ತಿಗೆದಾರನ ಬಳಿ ಕೆಲಸಕ್ಕೆ ಹೋಗಿದ್ದರು ಎಂದು ಪಂಚಾಯತ್ ಅಧಿಕಾರಿಗಳು ಹೇಳಿದ್ದಾರೆ ಎಂದು thenewsminute.com ವರದಿ ಮಾಡಿದೆ.

ಸೋಮವಾರ ಅಪರಾಹ್ನ ಮಿಂಜೂರಿನ ಇಮ್ಯಾನುಯೆಲ್ ಹೈಯರ್ ಸೆಕೆಂಡರಿ ಸ್ಕೂಲ್ ನ ಸೆಪ್ಟಿಕ್ ಟ್ಯಾಂಕ್ ಪ್ರವೇಶಿಸಿದ ಬಳಿಕ ಗೋವಿಂದನ್ ಮತ್ತು ಸುಭರಾಯಲು ಮೃತರಾಗಿದ್ದಾರೆ ಎಂದು ತಿಳಿಸಿದ ಪೊಲೀಸರು, ಸೆಪ್ಟಿಕ್ ಟ್ಯಾಂಕ್ಗೆ ಇಳಿಯುವ ಮುನ್ನ ಶಾಲೆಯು ಯಾವುದೇ ಸುರಕ್ಷತಾ ಸಾಧನಗಳನ್ನು ಒದಗಿಸಿರಲಿಲ್ಲ ಎಂದು ದೃಢಪಡಿಸಿದರು.

ಮೃತ ಕಾರ್ಮಿಕರನ್ನು ಮ್ಯಾನ್ಯುವಲ್ ಸ್ಕ್ಯಾವೆಂಜಿಂಗ್ ಗೆ ತೊಡಗಿಸಿದ್ದಕ್ಕಾಗಿ ಶಾಲೆಯ ಅಧಿಕಾರಿ ಸೈಮನ್ ಸಿ.ವಿಕ್ಟರ್ ವಿರುದ್ಧ ಪ್ರಕರಣ ದಾಖಲಾಗಿದ್ದು,ಅವರನ್ನು ಕೆಲಸಕ್ಕೆ ನಿಯೋಜಿಸಿದ್ದ ಖಾಸಗಿ ಗುತ್ತಿಗೆದಾರನಿಗಾಗಿ  ಪೊಲೀಸರು ಹುಡುಕಾಡುತ್ತಿದ್ದಾರೆ.

‘ಖಾಸಗಿ ಗುತ್ತಿಗೆದಾರ ಮತ್ತು ಪಂಚಾಯತ್ ನೌಕರರು ಪರಸ್ಪರ ಸಂಪರ್ಕಕ್ಕೆ ಬಂದಿದ್ದು ಹೇಗೆ ಎನ್ನುವುದು ನನಗೆ ಗೊತ್ತಿಲ್ಲ. ಪ್ರತಿ ವಾರ ಹಾಜರಾತಿ ಹಾಕುವಾಗ ಮ್ಯಾನ್ಯುವಲ್ ಸ್ಕ್ಯಾವೆಂಜಿಂಗ್ನಲ್ಲಿ ತೊಡಗಬೇಡಿ,ಅದು ಅಪಾಯಕಾರಿ ಎಂದು ನಾವು ಅವರಿಗೆ ಹೇಳುತ್ತಲೇ ಇರುತ್ತೇವೆ. ಮೇ 1ರಂದು ರಜಾದಿನವಾಗಿದ್ದರಿಂದ ನಾಲ್ಕು ಕಾಸು ಹೆಚ್ಚು ಸಂಪಾದಿಸಲು ಅವರು ಸೆಪ್ಟಿಕ್ ಟ್ಯಾಂಕ್ ಸ್ವಚ್ಛಗೊಳಿಸಲು ಗುತ್ತಿಗೆದಾರನ ಜೊತೆಗೆ ತೆರಳಿದ್ದಿರಬೇಕು’ ಎಂದು ಮಿಂಜೂರ್ ಪಂಚಾಯತ್ನ ಕಾರ್ಯ ನಿರ್ವಾಹಕ ಅಧಿಕಾರಿ ವೆಟ್ರಿ ಅರಸನ್ ಸುದ್ದಿಸಂಸ್ಥೆಗೆ ತಿಳಿಸಿದರು.

ಮೃತರು ಹಣಕ್ಕಾಗಿ ಹೆಚ್ಚುವರಿ ಕೆಲಸದಲ್ಲಿ ತೊಡಗಿಕೊಂಡಿದ್ದರು ಎನ್ನುವುದು ಬೇರೆ ಮಾತು,ಆದರೆ ಈಗಲೂ ಮ್ಯಾನ್ಯುವಲ್ ಸ್ಕ್ಯಾವೆಂಜಿಂಗ್ನಲ್ಲಿ ತೊಡಗಿಕೊಳ್ಳುವವರು ಇದ್ದಾರೆ ಎನ್ನುವುದು ಇಂತಹ ಸಾವುಗಳಿಗೆ ಮೂಲಕಾರಣವಾಗಿದೆ ಎಂದು ಹೇಳಿದ ತಮಿಳುನಾಡು ಅಸ್ಪೃಶ್ಯತೆ ನಿವಾರಣಾ ರಂಗದ ಪ್ರಧಾನ ಕಾರ್ಯದರ್ಶಿ ಕೆ.ಸಾಮ್ಯುವೆಲ್ ರಾಜ್, ತಾವು ತಮ್ಮ ಕಾರ್ಮಿಕರಿಗೆ ಇಂತಹ ಕೆಲಸಗಳಲ್ಲಿ ತೊಡಗದಂತೆ ಅರಿವು ಮೂಡಿಸುತ್ತಿದ್ದೇವೆ ಎಂದು ಹೇಳುವ ಮೂಲಕ ಪಂಚಾಯತ್ ಅಧಿಕಾರಿಗಳು ತಾವು ಸುರಕ್ಷಿತರಾಗಿರಲು ಪ್ರಯತ್ನಿಸುತ್ತಿದ್ದಾರೆ, ಆದರೆ ಅವರ ಹೊಣೆಗಾರಿಕೆ ಅಲ್ಲಿಗೇ ಮುಗಿಯುವುದಿಲ್ಲ. ಮ್ಯಾನ್ಯುವಲ್ ಸ್ಕ್ಯಾವೆಂಜಿಂಗ್ ಇನ್ನೂ ನಿರ್ಮೂಲನಗೊಂಡಿಲ್ಲ ಮತ್ತು ಅದರ ಹೊಣೆಗಾರಿಕೆಯನ್ನು ಸರಕಾರವು ಹೊರಬೇಕು. ಸರಕಾರವು ಇಂತಹ ಸಾವುಗಳನ್ನು ತಡೆಯಲು ನೈಮಲ್ಯ ಕಾರ್ಮಿಕರಿಗೆ ಸೆಪ್ಟಿಕ್ ಟ್ಯಾಂಕ್ ಕ್ಲೀನಿಂಗ್ ರೋಬಾಟ್ ನಂತಹ ಯಂತ್ರಗಳನ್ನು ಲಭ್ಯವಾಗಿಸಬೇಕು ಎಂದರು.

ಓರ್ವ ಕಾರ್ಮಿಕ ಮೊದಲು ಸೆಪ್ಟಿಕ್ ಟ್ಯಾಂಕ್ನಲ್ಲಿ ಇಳಿದ ಬಳಿಕ ವಿಷಾನಿಲ ಸೇವನೆಯಿಂದ ಪ್ರಜ್ಞೆಯನ್ನು ಕಳೆದುಕೊಂಡಿರಬೇಕು ಮತ್ತು ಆತನನ್ನು ರಕ್ಷಿಸಲು ಇನ್ನೋರ್ವನೂ ಟ್ಯಾಂಕ್ನಲ್ಲಿ ಇಳಿದಿರಬೇಕು ಎಂದು ಪೊಲೀಸರು ಶಂಕಿಸಿದ್ದಾರೆ.

share
Next Story
X