Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಈಡಿ ಮುಖ್ಯಸ್ಥರ ಸೇವಾವಧಿ ವಿಸ್ತರಣೆ:...

ಈಡಿ ಮುಖ್ಯಸ್ಥರ ಸೇವಾವಧಿ ವಿಸ್ತರಣೆ: ಬೇರೆ ಯಾರೂ ಅರ್ಹ ವ್ಯಕ್ತಿಗಳಿಲ್ಲವೇ ಎಂದು ಪ್ರಶ್ನಿಸಿದ ಸುಪ್ರೀಂ ಕೋರ್ಟ್‌

4 May 2023 2:53 PM IST
share
ಈಡಿ ಮುಖ್ಯಸ್ಥರ ಸೇವಾವಧಿ ವಿಸ್ತರಣೆ: ಬೇರೆ ಯಾರೂ ಅರ್ಹ ವ್ಯಕ್ತಿಗಳಿಲ್ಲವೇ ಎಂದು ಪ್ರಶ್ನಿಸಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಜಾರಿ ನಿರ್ದೇಶನಾಲಯದ ಮುಖ್ಯಸ್ಥ ಸಂಜಯ್‌ ಕುಮಾರ್‌ ಮಿಶ್ರಾ ಅವರ ಸೇವಾವಧಿಯನ್ನು ವಿಸ್ತರಿಸಿರುವ ಕುರಿತಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಕೆಲವೊಂದು ತೀಕ್ಷ್ಣ ಪ್ರಶ್ನೆಗಳನ್ನು ಕೇಳಿದೆ. ಆದರೆ ಪ್ರಮುಖ ಪರಿಶೀಲನಾ ಸಭೆಯಲ್ಲಿ ಜಾರಿ ನಿರ್ದೇಶನಾಲಯದ ಕೆಲವೊಂದು ಮಹತ್ವದ ಕಾರ್ಯಗಳ ಮುಂದುವರಿಕೆಗೆ ಇದು ಅಗತ್ಯವೆಂದು ಹೀಗೆ ಮಾಡಲಾಗಿದೆ ಎಂದು ಸರ್ಕಾರ ಹೇಳಿದೆ.

ಈಡಿ ಮುಖ್ಯಸ್ಥರ ಸೇವಾವಧಿ ವಿಸ್ತರಣೆಗೆ ಆಕ್ಷೇಪ ವ್ಯಕ್ತಪಡಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆ ನಡೆಸುವ ವೇಳೆ “ಇಡೀ ಏಜನ್ಸಿಯಲ್ಲಿ ಬೇರೆ ಯಾರೂ ಅರ್ಹ ವ್ಯಕ್ತಿಗಳಿಲ್ಲವೇ?” ಎಂದು ನ್ಯಾಯಮೂರ್ತಿಗಳಾದ  ಬಿ ಆರ್‌ ಗವಾಯಿ, ವಿಕ್ರಮ್‌ ನಾಥ್‌ ಮತ್ತು ಸಂಜಯ್‌ ಕರೋಲ್‌ ಅವರ ಪೀಠ ಹೇಳಿದೆ.

ಮಿಶ್ರಾ ಅವರನ್ನು ನವೆಂಬರ್‌ 19, 2018ರಲ್ಲಿ ಎರಡು ವರ್ಷಗಳ ಅವಧಿಗೆ ಇಡಿ ನಿರ್ದೇಶಕರನ್ನಾಗಿ ಮೊದಲು ನೇಮಿಸಲಾಗಿತ್ತು. ನವೆಂಬರ್‌ 2020 ರಲ್ಲಿ ಅವರ ಸೇವಾವಧಿ ಮುಕ್ತಾಯಗೊಳ್ಳಬೇಕಿತ್ತು. ಅದೇ ವರ್ಷದ ಮೇ ತಿಂಗಳಲ್ಲಿ ಅವರು ನಿವೃತ್ತಿ ವಯಸ್ಸಾದ 60 ತಲುಪಿದ್ದರು.

ನವೆಂಬರ್‌ 13, 2020ರ ಆದೇಶದನ್ವಯ ಪೂರ್ವಾನ್ವಯವಾಗುವಂತೆ ಮಿಶ್ರಾ ಅವರ ಸೇವಾವಧಿಯನ್ನು ಎರಡು ವರ್ಷಗಳಿಂದ ಮೂರು ವರ್ಷಗಳಿಗೆ ವಿಸ್ತರಿಸಲಾಗಿತ್ತು.

ಜಸ್ಟಿಸ್‌ ಎಲ್‌ ನಾಗೇಶ್ವರ ರಾವ್‌ ಅವರ ನೇತೃತ್ವದ ಸುಪ್ರೀಂ ಕೋರ್ಟ್‌ ಪೀಠ ಸೆಪ್ಟೆಂಬರ್‌ 2022ರಲ್ಲಿ ಈ ಕ್ರಮವನ್ನು ಎತ್ತಿಹಿಡಿದಿತ್ತಲ್ಲದೆ, ಈ ರೀತಿ ಪೂರ್ವಾನ್ವಯವಾಗುವಂತಹ ಕ್ರಮ ಅತ್ಯಂತ ವಿರಳ ಪ್ರಕರಣಗಳಲ್ಲಿ ಮಾಡಲಾಗುತ್ತದೆ ಮತ್ತು ಮಿಶ್ರಾ ಅವರಿಗೆ ಇನ್ನು ವಿಸ್ತರಣೆ ನೀಡುವ ಹಾಗಿಲ್ಲ ಎಂದು ಹೇಳಿತ್ತು.

ಸರ್ಕಾರದ 2020 ಆದೇಶವನ್ನು ಪ್ರಶ್ನಿಸಿ ಹಲವು ಅರ್ಜಿಗಳನ್ನು ಸಲ್ಲಿಸಲಾಗಿತ್ತು.  ಕಳೆದ ವರ್ಷ ಮಿಶ್ರಾ ಅವರಿಗೆ ಇನ್ನೊಂದು ವಿಸ್ತರಣೆ ನೀಡಲಾಗಿತ್ತು.

ಬುಧವಾರದ ವಿಚಾರಣೆ ವೇಳೆ ಮಿಶ್ರಾ ಅವರ ಸೇವಾವಧಿ ವಿಸತರಣೆಯನ್ನು ಸಮರ್ಥಿಸಿದ ಕೇಂದ್ರ ಸರ್ಕಾರದ ಪರ ವಕೀಲರಾದ ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ, ಫೈನಾನ್ಶಿಯಲ್‌ ಆಕ್ಷನ್‌ ಟಾಸ್ಕ್‌ ಫೋರ್ಸ್‌ ಪರಿಶೀಲನಾ ಸಭೆ ದಶಕಕ್ಕೊಂದು ಬಾರಿ ನಡೆಯುವುದರಿಂದ ಈಗಿನ ನಾಯಕತ್ವ ಮುಂದುವರಿಕೆ ಅಗತ್ಯ ಎಂದು ಹೇಳಿದರು.

share
Next Story
X