Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮೇ 5ರಂದು ಅರೆನೆರಳಿನ ಚಂದ್ರಗ್ರಹಣ;...

ಮೇ 5ರಂದು ಅರೆನೆರಳಿನ ಚಂದ್ರಗ್ರಹಣ; ಭಾರತದಾದ್ಯಂತ ಗೋಚರ

4 May 2023 7:30 PM IST
share
ಮೇ 5ರಂದು ಅರೆನೆರಳಿನ ಚಂದ್ರಗ್ರಹಣ; ಭಾರತದಾದ್ಯಂತ ಗೋಚರ

ಉಡುಪಿ, ಮೇ 4: ನಾಳೆಯ ಹುಣ್ಣಿಮೆಯ ಚಂದ್ರನು ಭೂಮಿಯ ಅರೆನೆರಳಲ್ಲಿ ಹಾದು ಹೋಗಲಿದ್ದಾನೆ. ಇದರಿಂದ ಮೇ 5 ರಂದು ಅರೆನೆರಳಿನ ಚಂದ್ರಗ್ರಹಣ (ಪಾರ್ಶ್ವ ಚಂದ್ರಗ್ರಹಣ) ಗೋಚರಿಸಲಿದೆ. 

ಈ ಗ್ರಹಣವು ಭಾರತದ ಎಲ್ಲ ಪ್ರದೇಶಗಳಲ್ಲಿ ರಾತ್ರಿ 8.44ರಿಂದ ಮರುದಿನ (ಮಧ್ಯರಾತ್ರಿ) 1:01 ಗಂಟೆಯವರೆಗೆ ಕಂಡುಬರಲಿದೆ. ಆದರೆ ಗರಿಷ್ಠ ಪ್ರಮಾಣದ ಗ್ರಹಣವು ರಾತ್ರಿ 10:52ಕ್ಕೆ ಗೋಚರಿಸುತ್ತದೆ.

ಈ ಗ್ರಹಣವು ಭೂಮಿಯ ಅರೆನೆರಳಿನಲ್ಲಿ ಚಂದ್ರನು ಬಂದಾಗ ಸಂಭವಿಸುತ್ತದೆ. ಯಾವುದೇ ವಸ್ತುವಿನ ನೆರಳಿನಲ್ಲಿ ಗರಿಷ್ಠ ಕತ್ತಲೆಯ ಭಾಗವನ್ನು ನೆರಳು ಹಾಗೂ ಆ ನೆರಳಿನ ಹೊರತುದಿಯಲ್ಲಿರುವ ಮಸುಕಾದ ನೆರಳನ್ನು ಅರೆನೆರಳು ಎಂದು ಗುರುತಿಸುತ್ತಾರೆ. ಚಂದ್ರನು ಭೂಮಿಯ ಅರೆನೆರಳಲ್ಲಿ ಹಾದು ಹೋಗುವಾಗ ಅರೆನೆರಳಿನ ಚಂದ್ರಗ್ರಹಣ ಎನ್ನುತ್ತಾರೆ. ಇದೇ ರೀತಿ ಚಂದ್ರನು ಭೂಮಿಯ ನೆರಳಿನಿಂದ ಹಾದುಹೋಗುವಾಗ ಅದು ಪಾರ್ಶ್ವ ಗ್ರಹಣ ಅಥಲಾ ಖಗ್ರಾಸ ಚಂದ್ರಗ್ರಹಣವಾಗಿರುತ್ತದೆ.

ಅರೆನೆರಳಿನ ಚಂದ್ರಗ್ರಹಣವನ್ನು ವೀಕ್ಷಿಸುವುದು ಕಷ್ಟ. ಭೂಮಿಯ ಅರೆನೆರಳು ಮಸುಕಾಗಿರುವುದರಿಂದ ಚಂದ್ರನ ಮೇಲೆ ಈನೆರಳನ್ನು ಗಮನಿಸುವುದು ಸುಲಭವಲ್ಲ. ಬರಿಗಣ್ಣಿನಲ್ಲಿ ನೋಡುವಾಗ ಗರಿಷ್ಠ ಗ್ರಹಣದ ಸಮಯ ಚಂದ್ರ, ಸಾಮಾನ್ಯ ಹುಣ್ಣಿಮೆ ಚಂದ್ರನಿಗಿಂತ ಸ್ವಲ್ಪ ಕಡಿಮೆ ಪ್ರಕಾಶಮಾನದಿಂದ ಗೋಚರಿಸುತ್ತದೆ.

ಭಾರತದ ಎಲ್ಲ ಪ್ರದೇಶಗಳಿಂದ ಈ ಗ್ರಹಣವನ್ನು ನೋಡಬಹುದು. ಭಾರತದೊಂದಿಗೆ, ದಕ್ಷಿಣ ಏಷಿಯಾದ ಎಲ್ಲ ದೇಶಗಳಲ್ಲಿ, ರಷ್ಯಾ, ಹಾಗೂ ಆಸ್ಟ್ರೇಲಿಯಾದಲ್ಲಿ ಈ ಗ್ರಹಣವು ಗೋಚರಿಸುತ್ತದೆ. ಈ ಗ್ರಹಣವನ್ನು ಬರಿಗಣ್ಣಿನಿಂದ ಸುರಕ್ಷಿತವಾಗಿ ವೀಕ್ಷಿಸಬಹುದು ಎಂದು ಉಡುಪಿಯ ಪೂರ್ಣಪ್ರಜ್ಞ ಹವ್ಯಾಸಿ ಖಗೋಳ ವೀಕ್ಷಕರ ಸಂಘದ ಸಂಚಾಲಕ ಅತುಲ್ ಭಟ್ ತಿಳಿಸಿದ್ದಾರೆ.

share
Next Story
X