Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅನುಸೂಚಿಯಲ್ಲಿ ಲಡಾಖ್ ಸೇರ್ಪಡೆಗಾಗಿ...

ಅನುಸೂಚಿಯಲ್ಲಿ ಲಡಾಖ್ ಸೇರ್ಪಡೆಗಾಗಿ ಉಪವಾಸ ಸತ್ಯಾಗ್ರಹ ಕೈಗೊಳ್ಳಲಿರುವ ಸೋನಮ್ ವಾಂಗ್ಚುಕ್

4 May 2023 7:36 PM IST
share
ಅನುಸೂಚಿಯಲ್ಲಿ ಲಡಾಖ್ ಸೇರ್ಪಡೆಗಾಗಿ ಉಪವಾಸ ಸತ್ಯಾಗ್ರಹ ಕೈಗೊಳ್ಳಲಿರುವ ಸೋನಮ್ ವಾಂಗ್ಚುಕ್

ಹೊಸದಿಲ್ಲಿ: ಹೊಸತನದ ಹರಿಕಾರ ಹಾಗೂ ಮ್ಯಾಗ್ಸೆಸೆ ಪ್ರಶಸ್ತಿ ಪುರಸ್ಕೃತ ಸೋನಮ್ ವಾಂಗ್ಚುಕ್ ಅವರು ಲಡಾಖ್ಗೆ ವಿವಿಧ ಸುರಕ್ಷತೆಗಳಿಗಾಗಿ ಆಗ್ರಹಿಸಿ 10 ದಿನಗಳ ಉಪವಾಸ ಸತ್ಯಾಗ್ರಹವನ್ನು ಕೈಗೊಳ್ಳಲು ನಿರ್ಧರಿಸಿದ್ದಾರೆ. ಈ ಹಿಂದೆ ಜನವರಿಯಲ್ಲಿ ಅವರು ಐದು ದಿನಗಳ ಉಪವಾಸ ಸತ್ಯಾಗ್ರಹವನ್ನು ನಡೆಸಿದ್ದರು.

‘ಸಂವಿಧಾನದ ಆರನೇ ಅನುಸೂಚಿಯನ್ನು ಲಡಾಖ್ಗೆ ವಿಸ್ತರಿಸಬೇಕೆಂಬ ಬೇಡಿಕೆಯನ್ನು ಕೇಂದ್ರ ಸರಕಾರವು ನಿರ್ಲಕ್ಷಿಸಿರುವುದು ತಾನು ಮತ್ತೆ ಉಪವಾಸ ಸತ್ಯಾಗ್ರಹ ನಡೆಸಲು ಕಾರಣವಾಗಿದೆ. ಅದು ಲಡಾಖ್ಗಾಗಿ ಬಿಜೆಪಿಯ ಚುನಾವಣಾ ಪ್ರಣಾಳಿಕೆಯಲ್ಲಿನ ಮೊದಲ ಭರವಸೆಯಾಗಿತ್ತು ಮತ್ತು ಅದನ್ನು ನಂಬಿ ಲಡಾಖ್ ನ ಜನರು ಬಿಜೆಪಿಗೆ ಮತ ನೀಡಿದ್ದರು. ಪ್ರಣಾಳಿಕೆಯನ್ನು ನೀವು ಏನನ್ನಾದರೂ ನಂ.1 ಅಜೆಂಡಾ ಆಗಿಟ್ಟುಕೊಂಡರೆ ಮತ್ತು ಚುನಾವಣೆಯಲ್ಲಿ ಗೆದ್ದ ನಂತರ ಅದನ್ನು ಸಂಪೂರ್ಣವಾಗಿ ಕಡೆಗಣಿಸಿದರೆ ಜನರು ಪ್ರಜಾಪ್ರಭುತ್ವದಲ್ಲಿ ನಂಬಿಕೆಯನ್ನು ಕಳೆದುಕೊಳ್ಳುತ್ತಾರೆ ’ ಎಂದು ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ವಾಂಗ್ಚುಕ್ ಹೇಳಿದರು.

ಆರನೇ ಅನುಸೂಚಿಯು ಬುಡಕಟ್ಟು ಪ್ರದೇಶಗಳಲ್ಲಿ ಸ್ವಾಯತ್ತ ಆಡಳಿತಾತ್ಮಕ ಜಿಲ್ಲಾ ಮಂಡಳಿಗಳ ರಚನೆಗೆ ಅವಕಾಶವನ್ನು ಒದಗಿಸುತ್ತದೆ. ಈ ಮಂಡಳಿಗಳು ಕೆಲವೊಂದು ಶಾಸಕಾಂಗ,ನ್ಯಾಯಾಂಗ ಮತ್ತು ಆಡಳಿತಾತ್ಮಕ ಸ್ವಾಯತ್ತತೆಯನ್ನು ಹೊಂದಿರುತ್ತವೆ. ಈ ಮಂಡಳಿಗಳು ಭೂಮಿ,ಅರಣ್ಯ,ನೀರು,ಕೃಷಿ,ಆರೋಗ್ಯ,ನೈರ್ಮಲ್ಯ,ಉತ್ತರಾಧಿಕಾರ, ಮದುವೆ ಮತ್ತು ವಿಚ್ಛೇದನ ಇತ್ಯಾದಿಗಳಿಗೆ ಸಂಬಂಧಿಸಿದಂತೆ ತಮ್ಮದೇ ಆದ ನಿಯಮಗಳು ಮತ್ತು ನಿಬಂಧನೆಗಳನ್ನು ತರಬಹುದಾಗಿದೆ.

2019,ಆ.5ರಂದು ಲಡಾಖ್ ಅನ್ನು ಜಮ್ಮು-ಕಾಶ್ಮೀರದಿಂದ ಪ್ರತ್ಯೇಕಿಸಿ ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಿದ ಬಳಿಕ ವಿವಿಧ ಸ್ಥಳೀಯ ಸಂಘಟನೆಗಳು ಇಂತಹುದೇ ಬೇಡಿಕೆಗಳನ್ನು ಮುಂದಿಟ್ಟಿವೆ. ಕೇಂದ್ರಾಡಳಿತ ಪ್ರದೇಶವನ್ನಾಗಿಸಿದ ಬಳಿಕ ಲಡಾಖ್ನ ಸಂಸ್ಕೃತಿ ಮತ್ತು ಹಕ್ಕುಗಳ ಸುರಕ್ಷತೆಗಾಗಿ ಸಾಕಷ್ಟು ಕ್ರಮಗಳನ್ನು ಕೈಗೊಳ್ಳದ್ದಕ್ಕಾಗಿ ಪ್ರದೇಶದಲ್ಲಿಯ ಪ್ರಮುಖ ನಾಗರಿಕ ಸಂಸ್ಥೆಗಳು ಬಿಜೆಪಿಯನ್ನು ಟೀಕಿಸಿವೆ.

ಮೇ ಅಂತ್ಯದಲ್ಲಿ ಅಥವಾ ಜೂನ್ ಆರಂಭದಲ್ಲಿ ತಾನು ಉಪವಾಸ ಸತ್ಯಾಗ್ರಹವನ್ನು ಕೈಗೊಳ್ಳುವುದಾಗಿ ತಿಳಿಸಿದ ವಾಂಗ್ಚುಕ್,ಎ.26ರಿಂದ ಉಪವಾಸವನ್ನು ಆರಂಭಿಸಲು ತಾನು ಯೋಜಿಸಿದ್ದೆ. ಆದರೆ ಎ.26ರಂದು ವೈ-20 ಪೂರ್ವ ಶೃಂಗಸಭೆಯು ಲಡಾಖ್ನಲ್ಲಿ ನಡೆದ ಕಾರಣ ದೇಶದ ಉತ್ತಮ ಹಿತಾಸಕ್ತಿಗಳಾಗಿ ತಾನು ಅದನ್ನು ಮುಂದೂಡಿದ್ದೆ ಎಂದು ಹೇಳಿದರು.

share
Next Story
X