Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. "ನಮ್ಮನ್ನು ಕೊಂದು ಬಿಡಿ" ಎಂದು...

"ನಮ್ಮನ್ನು ಕೊಂದು ಬಿಡಿ" ಎಂದು ಮೊರೆಯಿಟ್ಟ ವಿನೇಶ್‌ ಫೋಗಟ್: ಬಿಜೆಪಿ ಗೂಂಡಾಗಿರಿ ನಡೆಸುತ್ತಿದೆ ಎಂದ ಕೇಜ್ರಿವಾಲ್

4 May 2023 9:49 PM IST
share
ನಮ್ಮನ್ನು ಕೊಂದು ಬಿಡಿ ಎಂದು ಮೊರೆಯಿಟ್ಟ ವಿನೇಶ್‌ ಫೋಗಟ್: ಬಿಜೆಪಿ ಗೂಂಡಾಗಿರಿ ನಡೆಸುತ್ತಿದೆ ಎಂದ ಕೇಜ್ರಿವಾಲ್

ಹೊಸ ದಿಲ್ಲಿ: ದಿಲ್ಲಿ ಪೊಲೀಸರು ನಮ್ಮನ್ನು ನಿಂದಿಸಿದ್ದಾರೆ ಮತ್ತು ತಮ್ಮೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಕುಸ್ತಿ ಪಟುಗಳು ಆರೋಪಿಸಿರುವ ಬೆನ್ನಿಗೇ, ಆಡಳಿತಾರೂಢ ಬಿಜೆಪಿ ಕೇಂದ್ರ ಸರ್ಕಾರದ ವಿರುದ್ಧ ಗುರುವಾರ ವಾಗ್ದಾಳಿ ನಡೆಸಿರುವ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ದುರಹಂಕಾರಿ ಬಿಜೆಪಿಯು ಇಡೀ ವ್ಯವಸ್ಥೆಯನ್ನು ಗೂಂಡಾಗಿರಿಯಿಂದ ನಡೆಸಲು ಬಯಸುತ್ತಿದೆ ಎಂದು ಹೇಳಿದ್ದಾರೆ. ಬಿಜೆಪಿಯನ್ನು ಅಧಿಕಾರದಿಂದ ಕಿತ್ತೆಸೆದರೆ ಸಾಲದು, ಅವರನ್ನು ಅಧಿಕಾರದಿಂದಲೇ ಹೊರದೂಡಬೇಕು ಎಂದು ಆಪ್ ಮುಖ್ಯಸ್ಥರೂ ಆದ ಅರವಿಂದ್ ಕೇಜ್ರಿವಾಲ್ ಜನತೆಗೆ ಕರೆ ನೀಡಿದ್ದಾರೆ ಎಂದು hindustantimes.com ವರದಿ ಮಾಡಿದೆ.

ಬುಧವಾರ ಸಂಜೆ ಪ್ರತಿಭಟನಾನಿರತ ಕುಸ್ತಿ ಪಟುಗಳ ವಿರುದ್ಧ ದಿಲ್ಲಿ ಪೊಲೀಸರು ತೋರಿರುವ ಅಮಾನವೀಯ ವರ್ತನೆಯಿಂದ ಆಘಾತ ಹಾಗೂ ನಿಸ್ತೇಜಗೊಂಡಿರುವ, ಹತಾಶೆಯಿಂದ ಭಾವುಕರಾಗಿದ್ದ ಕುಸ್ತಿ ಪಟು ವಿನೇಶ್ ಫೋಗಟ್, ನಾವು ಅಪರಾಧಿಗಳಲ್ಲ ಮತ್ತು ಇಂತಹ ಅಗೌರವ ಪಡೆಯಲು ಯೋಗ್ಯರಲ್ಲ ಎಂದು ಕಿಡಿ ಕಾರಿದ್ದಾರೆ.

ತಡ ರಾತ್ರಿ ಮಾಧ್ಯಮದವರೊಂದಿಗೆ ಸಂವಾದ ನಡೆಸಿದ ವಿನೇಶ್ ಫೋಗಟ್, "ನಿಮಗೆ ನಮ್ಮನ್ನು ಕೊಲ್ಲಬೇಕಿದ್ದರೆ ಕೊಲ್ಲಿ" ಎಂದು ಅಳುತ್ತಾ ಹತಾಶೆ ವ್ಯಕ್ತಪಡಿಸಿದ್ದಾರೆ.

ವಿನೇಶ್ ಫೋಗಟ್ ಅವರ ಮಾಧ್ಯಮ ಸಂವಾದದ ವೀಡಿಯೊಗೆ ಪ್ರತಿಕ್ರಿಯಿಸಿ ಟ್ವೀಟ್ ಮಾಡಿರುವ ಅರವಿಂದ್ ಕೇಜ್ರಿವಾಲ್, "ದೇಶದ ಚಾಂಪಿಯನ್ ಕ್ರೀಡಾಪಟುಗಳೊಂದಿಗೆ ಇಂತಹ ಅನುಚಿತ ವರ್ತನೆಯೆ? ಇದು ತುಂಬಾ ನೋವಿನ ಹಾಗೂ ಅಪಮಾನಕಾರಿ ಸಂಗತಿ... ಈ ಜನರಿಗೆ (ಬಿಜೆಪಿ) ಇಡೀ ವ್ಯವಸ್ಥೆಯನ್ನು ಗೂಂಡಾಗಿರಿಯಿಂದ ನಡೆಸುವುದು ಬೇಕಿದೆ. ಅವರು ಇಡೀ ವ್ಯವಸ್ಥೆಯ ಅಪಹಾಸ್ಯ ಮಾಡುತ್ತಿದ್ದಾರೆ" ಎಂದು ಕಿಡಿ ಕಾರಿದ್ದಾರೆ.

"ನಾನು ದೇಶದ ಎಲ್ಲ ಜನರಲ್ಲೂ ಮನವಿ ಮಾಡುತ್ತೇನೆ.. ಬಿಜೆಪಿಯ ಗೂಂಡಾಗಿರಿಯನ್ನು ಇನ್ನೆಂದೂ ಸಹಿಸಬೇಡಿ.. ಬಿಜೆಪಿಯನ್ನು ಅಧಿಕಾರದಿಂದ ಕಿತ್ತೊಗೆದು ಅವರನ್ನು ಹೊರದೂಡುವ ಸಮಯ ಬಂದಿದೆ" ಎಂದೂ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.‌

share
Next Story
X