Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ದುಡಿಯುವ ಜನರ ಶತ್ರು, ಜನ ವಿರೋಧಿ ಬಿಜೆಪಿ...

ದುಡಿಯುವ ಜನರ ಶತ್ರು, ಜನ ವಿರೋಧಿ ಬಿಜೆಪಿ ಸೋಲಿಸುವುದು ಕಾರ್ಮಿಕ ವರ್ಗದ ಆದ್ಯತೆ: ಮುನೀರ್ ಕಾಟಿಪಳ್ಳ

4 May 2023 10:34 PM IST
share
ದುಡಿಯುವ ಜನರ ಶತ್ರು, ಜನ ವಿರೋಧಿ ಬಿಜೆಪಿ ಸೋಲಿಸುವುದು ಕಾರ್ಮಿಕ ವರ್ಗದ ಆದ್ಯತೆ: ಮುನೀರ್ ಕಾಟಿಪಳ್ಳ

ಬಂಟ್ವಾಳ: ಭ್ರಷ್ಟ, ಕೋಮುವಾದಿ ಬಿಜೆಪಿ ಆಡಳಿತದಲ್ಲಿ ಜನತೆ ತತ್ತರಿಸಿ ಹೋಗಿದ್ದಾರೆ. ಬೆಲೆಯೇರಿಕೆ, ಕಾರ್ಮಿಕ ವಿರೋಧಿ ನೀತಿಗಳಿಂದ ದುಡಿಯುವ ಜನರ ಬದುಕಿನ ಮೇಲೆ ಗದಾ ಪ್ರಹಾರವಾಗಿದೆ. ಮುಂಬರುವ ಚುನಾವಣೆ ಯಲ್ಲಿ ಬಿಜೆಪಿಯನ್ನು ಸೋಲಿಸುವುದೇ ಕಾರ್ಮಿಕ ವರ್ಗದ ಆದ್ಯತೆ.  ರೈತ, ಕಾರ್ಮಿಕರ ಚಳವಳಿಗಳ ಕೇಂದ್ರ ವಾಗಿದ್ದ ಬಂಟ್ವಾಳವನ್ನು ಬಿಜೆಪಿ ಇಂದು ದ್ವೇಷ ರಾಜಕಾರಣದ ಪ್ರಯೋಗ ಶಾಲೆಯಾಗಿ ಪರಿವರ್ತಿಸಿದೆ. ಬದುಕಿನ ಪ್ರಶ್ನೆಗಳ‌ನ್ನು ಕಡೆಗಣಿಸಿ, ಮತಾಂಧತೆಗೆ ಒತ್ತು ನೀಡುತ್ತಿರುವ ಬಿಜೆಪಿಯನ್ನು ಸೋಲಿಸಲು ಬಂಟ್ವಾಳದಲ್ಲಿ ಸಿಪಿಐಎಂ ಶ್ರಮಿಸಲಿದೆ ಎಂದು ಸಿಪಿಐಎಂ ಕರ್ನಾಟಕ ರಾಜ್ಯ ಸಮಿತಿ ಸದಸ್ಯ ಮುನೀರ್ ಕಾಟಿಪಳ್ಳ ಹೇಳಿದರು.

ಅವರು ಬಿ.ಸಿ.ರೋಡಿನ ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದರು.

ಬಂಟ್ವಾಳ ಸಹಿತ ದಕ್ಷಿಣ ಕನ್ನಡ ಜಿಲ್ಲೆ  ಬಿಜೆಪಿ ಆಡಳಿತದಲ್ಲಿ ಎಲ್ಲಾ ರಂಗಗಳಲ್ಲಿಯೂ ಹಿನ್ನಡೆ ಅನುಭವಿಸಿದೆ. ಸಾರ್ವಜನಿಕ ಶಿಕ್ಷಣ, ಆರೋಗ್ಯ ಕ್ಷೇತ್ರವನ್ನು ಪೂರ್ತಿಯಾಗಿ ಕಡೆಗಣಿಸಿ ವ್ಯಾಪಾರೀಕರಣಕ್ಕೆ ಪೂರ್ಣ ಅವಕಾಶ ಒದಗಿಸಲಾಗಿದೆ. ಹೊಸದಾಗಿ ಯಾವುದೇ ಸರಕಾರಿ ಶಿಕ್ಷಣ ಸಂಸ್ಥೆಗಳ‌ನ್ನು ತೆರೆಯದಿರುವುದು, ಹೊಸ ತಾಲೂಕುಗಳಿಗೆ ಆಸ್ಪತ್ರೆಗಳ‌ನ್ನು ಮಂಜೂರುಗೊಳಿಸದಿರುವುದು, ಸರಕಾರಿ ಆಸ್ಪತ್ರೆ, ಆರೋಗ್ಯ ಕೇಂದ್ರಗಳನ್ನು ಕಡೆಗಣಿಸಿರುವುದು ಬಿಜೆಪಿ ಶಾಸಕರುಗಳ ನೀತಿಗಳಿಗೆ ಸಾಕ್ಷಿ. ಉದ್ಯೋಗ ಸೃಷ್ಟಿಸುವ ಯೋಜನೆಗಳಾಗಲಿ, ಜಿಲ್ಲೆಯಲ್ಲಿ ತಲೆಯೆತ್ತಿರುವ ಬೃಹತ್ ಉದ್ಯಮಗಳಲ್ಲಿ ಜಿಲ್ಲೆಯ ಯುವಜನರಿಗೆ ಉದ್ಯೋಗ ಒದಗಿಸಲಾಗಲಿ ಬಿಜೆಪಿ ಶ್ರಮಿಸದಿರುವುದು ಜಿಲ್ಲೆಯಲ್ಲಿ ವ್ಯಾಪಕ ನಿರುದ್ಯೋಗಕ್ಕೆ ಕಾರಣವಾಗಿದೆ. ಯುವಜನರಲ್ಲಿ ಅತೃಪ್ತಿಯನ್ನು ಹುಟ್ಟು ಹಾಕಿದೆ. ಇಂತಹ ಯುವಜನರನ್ನು ಧರ್ಮದ ಆಧಾರದಲ್ಲಿ ವಿಭಜಿಸಿ ದಿಕ್ಕುತಪ್ಪಿಸುವ ಕೆಲಸವನ್ನು ಬಿಜೆಪಿ ಜನ ಪ್ರತಿನಿಧಿಗಳು, ಅದರ ಸಾಮೂಹಿಕ ಸಂಘಟನೆಗಳು ಮಾಡುವ ಮೂಲಕ ಯುವಕರ ಬದುಕಿನಲ್ಲಿ ಮತ್ತಷ್ಟು ಸಮಸ್ಯೆಗಳನ್ನು ಸೃಷ್ಟಿಸಿದೆ. ಬಂಟ್ವಾಳ ಕ್ಷೇತ್ರವೂ ಇಂದು ಉದ್ಯೋಗ, ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಯಾವುದೆ ಅಭಿವೃದ್ದಿ ಕಂಡಿಲ್ಲ. ವಿಭಜನೆಯ ರಾಜಕಾರಣದ ಪ್ರಯೋಗ ಶಾಲೆಯಾಗಿರುವ ಬಂಟ್ವಾಳದಲ್ಲಿ ಬಿಜೆಪಿಯನ್ನು ಸೋಲಿಸುವ, ಆ ಮೂಲಕ ಜಾತ್ಯತೀತ ಅಭ್ಯರ್ಥಿಯನ್ನು ಗೆಲ್ಲಿಸಲು ಸಿಪಿಐಎಂ ಪಕ್ಷದ ಕಾರ್ಯಕರ್ತರು ಶ್ರಮಿಸಲಿ ದ್ದಾರೆ. ಬಂಟ್ವಾಳದ ಜನತೆ ಕೋಮುವಾದಿ, ಜನವಿರೋಧಿ ಬಿಜೆಪಿ ಅಭ್ಯರ್ಥಿಯನ್ನು‌ ಸೋಲಿಸುವ ಮೂಲಕ ಜನಪರ ರಾಜಕಾರಣಕ್ಕೆ ಅವಕಾಶ ಒದಗಿಸಬೇಕು ಎಂದು ಸಿಪಿಐಎಂ ಬಂಟ್ವಾಳದ ಜನತೆಯಲ್ಲಿ ಮನವಿ ಮಾಡುತ್ತದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಸಿಪಿಐಎಂ ಬಂಟ್ವಾಳ ತಾಲೂಕು ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್, ಬಂಟ್ವಾಳ ತಾಲೂಕು ಸಮಿತಿ ಸದಸ್ಯ ಉದಯ ಕುಮಾರ್ ಉಪಸ್ಥಿತರಿದ್ದರು.

share
Next Story
X