Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಶಾಸಕ ಭರತ್ ಶೆಟ್ಟಿ ಕಳೆದ ಚುನಾವಣೆಯಲ್ಲಿ...

ಶಾಸಕ ಭರತ್ ಶೆಟ್ಟಿ ಕಳೆದ ಚುನಾವಣೆಯಲ್ಲಿ ನೀಡಿದ್ದ ಪ್ರಣಾಳಿಕೆಯನ್ನು ಕಾರ್ಯರೂಪಕ್ಕೆ ತಂದಿಲ್ಲ: ಕವಿತಾ ಸುನಿಲ್ ಆರೋಪ

4 May 2023 10:59 PM IST
share
ಶಾಸಕ ಭರತ್ ಶೆಟ್ಟಿ ಕಳೆದ ಚುನಾವಣೆಯಲ್ಲಿ ನೀಡಿದ್ದ ಪ್ರಣಾಳಿಕೆಯನ್ನು ಕಾರ್ಯರೂಪಕ್ಕೆ ತಂದಿಲ್ಲ: ಕವಿತಾ ಸುನಿಲ್ ಆರೋಪ

ಸುರತ್ಕಲ್, ಮೇ 4: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ, ಶಾಸಕ ಭರತ್ ಶೆಟ್ಟಿ, ಕಳೆದ ಚುನಾವಣೆಯಲ್ಲಿ ನೀಡಿದ್ದ ಪ್ರಣಾಳಿಕೆಯನ್ನು ಕಾರ್ಯರೂಪಕ್ಕೆ ತರದೇ ಈ ಬಾರಿಯ ಚುನಾವಣೆಗೂ ಅದೇ ಭರವಸೆಗಳ ಪ್ರಣಾಳಿಕೆ ಮುದ್ರಿಸಿ ಮನೆಮನೆಗೂ ಹಂಚುತ್ತಿರುವುದು ವಿಪರ್ಯಾಸ ಎಂದು ಮಾಜಿ ಮೇಯರ್ ಹಾಗೂ ಕಾಂಗ್ರೆಸ್ ನಾಯಕಿ ಕವಿತಾ ಸುನಿಲ್ ಕುಟುಕಿದ್ದಾರೆ.

ಗುರುವಾರ ಹೊಸಬೆಟ್ಟುವಿನಲ್ಲಿರುವ ಕಾಂಗ್ರೆಸ್ ಚುನಾವಣಾ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಳೆದ ವಿಧಾನಸಭೆ ಚುನಾವಣೆಯಲ್ಲಿ ನೀಡಲಾಗಿದ್ದ ಭರವಸೆಗಳನ್ನು ಪೂರೈಸಲಾಗದ ಶಾಸಕ ಭರತ್ ಶೆಟ್ಟಿ ಈ ಬಾರಿಯ ಚುನಾವಣೆಯಲ್ಲೂ ಅದೇ ಭರವಸೆಗಳ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ಅವರ ಈ ಬಾರಿಯ ಚುನಾವಣಾ ಪ್ರಣಾಳಿಕೆಯೇ ಅವರು ಮಾಡಿರುವ ಅಭಿವೃದ್ಧಿ ಕಾರ್ಯಗಳನ್ನು ಸ್ಪಷ್ಟವಾಗಿ ತಿಳಿಸುತ್ತಿದೆ ಎಂದು ಕಿಡಿ‌ಕಾರಿದರು.

ವಿಪರ್ಯಾಸವೆಂದರೆ ಅವರು ಕಳೆದ ಬಾರಿ ಚುನಾವಣಾ ಪ್ರಣಾಳಿಕೆಯಲ್ಲಿ ಸರಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸುವ ಭರವಸೆ ನೀಡಿದ್ದರು, ಆದರೆ ಐದು ವರ್ಷಗಳಿಂದ ಒಂದು ಸರಕಾರಿ ಶಾಲೆಗೆ ಸುಣ್ಣ ಬಣ್ಣ ಬಳಿಯಲಾಗಿಲ್ಲ. ಮತ್ತೆ ಅದನ್ನೇ ಪ್ರಣಾಳಿಕೆಯಲ್ಲಿ ಹೇಳಿದ್ದಾರೆ ಎಂದು ಶಾಸಕ ಭರತ್ ಶೆಟ್ಟಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಅವರ ಆಲೋಚನೆಯ ಐಟಿ ಪಾರ್ಕ್ ಕಳೆದ ಬಾರಿ ಕಾರ್ಯರೂಪಕ್ಕೆ ತರಲು ಮುಂದಾಗಿದ್ದರು ಅದನ್ನು ಸರಕಾರ ನಿರ್ಭಂಧಿಸಿತ್ತು. ಅವರ ಪಾರ್ಕ್ನ ಮಾದರಿ ಹೇಗೆ ತಿಂದರೆ ಕೇಳ ಅಂತಸ್ತಿನಲ್ಲಿ ಫೈವ್ ಸ್ಟಾರ್ ಹೋಟೆಲ್ ಅದರ ಮೇಲೆ ನಿರ್ಮಾಣದ ಯೋಜನೆ ಹಾಕಿದ್ದರು ಜನರ ಉದ್ಧಾರಕ್ಕಿಂತಲೂ ಮಾರ್ವಾಡಿಗಳಿಗೆ ಲಾಭ ಮಾಡಿಕೊಡುವ ಉದ್ದೇಶದಿಂದ ಈ ಯೋಜನೆ ರೂಪಿಸಲಾಗಿತ್ತು ಎಂದು ಅವರು ಆರೋಪಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ನ ಅಧ್ಯಕ್ಷ ಉಮೇಶ್ ದಂಡಕೇರಿ, ಕಾರ್ಪೊರೇಟರ್ ಅನಿಲ್ ಕುಮಾರ್, ದೀಪಕ್ ಪೂಜಾರಿ ಸೇರಿದಂತೆ ಕಾಂಗ್ರೆಸ್ ನ  ಬಿಲ್ಲವ ನಾಯಕರು ಉಪಸ್ಥಿತರಿದ್ದರು.

"ರೋಡು ತೋಡು ನಿರ್ಮಾಣ ಮಾಡಿರುವುದು ಮಾತ್ರ ನಮ್ಮ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಭರತ್ ಶೆಟ್ಟಿ ಅವರ ಅಭಿವೃದ್ಧಿ ಈ ಅಭಿವೃದ್ಧಿ ಮಾಡಲು ಶಾಸಕರೇ ಬೇಕಾಗಿಲ್ಲ ಕಾರ್ಪೊರೇಟರ್ ಗಳು ಸಾಕು. ಅವರ ಕಳೆದ ಬಾರಿ ಚುನಾವಣೆಯ ಸಂದರ್ಭ ನೀಡಿದ್ದ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳನ್ನು ಎಷ್ಟು ಈಡೇರಿಸ ಲಾಗಿದೆ ಎಂಬ ಕುರಿತು ಭರತ್ ಶೆಟ್ಟಿ ಅವರು ಚರ್ಚೆಗೆ ಬರಲಿ" ಎಂದು ಕವಿತಾ ಸನಿಲ್ ಸವಾಲು ಹಾಕಿದರು.

share
Next Story
X