Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮಂಡ್ಯ ಲೋಕಸಭೆ ಚುನಾವಣೆಯಲ್ಲಿ 'ಮ್ಯಾಚ್...

ಮಂಡ್ಯ ಲೋಕಸಭೆ ಚುನಾವಣೆಯಲ್ಲಿ 'ಮ್ಯಾಚ್ ಫಿಕ್ಸಿಂಗ್', ಸಿದ್ದರಾಮಯ್ಯ ಸತ್ಯ ಒಪ್ಪಿಕೊಂಡಿದ್ದಾರೆ ಎಂದ ಕುಮಾರಸ್ವಾಮಿ

5 May 2023 4:40 PM IST
share
ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಮ್ಯಾಚ್ ಫಿಕ್ಸಿಂಗ್, ಸಿದ್ದರಾಮಯ್ಯ ಸತ್ಯ ಒಪ್ಪಿಕೊಂಡಿದ್ದಾರೆ ಎಂದ ಕುಮಾರಸ್ವಾಮಿ

ಬೆಂಗಳೂರು: ಕಳೆದ ಲೋಕಸಭೆ ಚುನಾವಣೆಯಲ್ಲಿ ಯಾವ ರೀತಿ ಮ್ಯಾಚ್ ಫಿಕ್ಸಿಂಗ್ ಆಗಿತ್ತು ಎನ್ನುವುದನ್ನು ಸ್ವತಃ ಸಿದ್ದರಾಮಯ್ಯ ಅವರೇ ಒಪ್ಪಿಕೊಂಡಿದ್ದಾರೆ. ಕೊನೆಪಕ್ಷ ಈಗಲಾದರೂ ಸತ್ಯ ಹೊರಬಂತಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ. 

ಸಂಸದೆ ಸುಮಲತಾ ಅವರನ್ನು ಗೆಲ್ಲಿಸಿ ತಪ್ಪು ಮಾಡಿದ್ದೇವೆ ಎಂದು ನಾಗಮಂಗಲದಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ನೀಡಿದ್ದ ಹೇಳಿಕೆ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಮೇಲಿನಂತೆ ಮಾಜಿ ಮುಖ್ಯಮಂತ್ರಿಗಳು ಉತ್ತರಿಸಿದರು.

'ಈಗ ಸತ್ಯ ಹೊರಗೆ ಬಂತಲ್ಲ, ಸತ್ಯವನ್ನು ಮುಚ್ಚಿಡಲು ಸಾಧ್ಯವಿಲ್ಲ. ಮಂಡ್ಯದಲ್ಲಿ, ತುಮಕೂರಿನಲ್ಲಿ ಏನೀನು ಮಾಡಿದರು ಅನ್ನುವುದು ಈಗ ಅವರ ಬಾಯಿಂದಲೇ ಸತ್ಯ ಹೊರಗೆ ಬಂದಿದೆ. ಈಗ ಅದೆಲ್ಲ ಮುಗಿದು ಹೋದ ಅಧ್ಯಾಯ. ನನ್ನ ಸರಕಾರ ತೆಗೆದವರರೇ ಅವರು' ಎಂದು ಅವರು ಹೇಳಿದರು.

'ಶಾಸಕರನ್ನೇ ನೋಡಿಲ್ಲ, ಭೇಟಿ ಮಾಡಿಲ್ಲ ಅಂತ ಹೇಳುತ್ತಾರೆ ಇವರು. 19,000 ಕೋಟಿ ಅನುದಾನವನ್ನು ಕಾಂಗ್ರೆಸ್ ಪಕ್ಷದ 78 ಜನ ಶಾಸಕರಿಗೆ ನೀಡಿದ್ದೇನೆ. ಶಾಸಕರನ್ನು ಭೇಟಿ ಮಾಡದೇ ಇಷ್ಟು ಅನುದಾನ ನೀಡಲು ಸಾಧ್ಯವೇ?' ಎಂದು ಅವರು ಪ್ರಶ್ನಿಸಿದರು.

'ಕೃಷ್ಣ ಕಚೇರಿಯಲ್ಲಿ ದಿನಕ್ಕೆ 5 ಸಾವಿರ ಜನ ಸೇರಿರುತ್ತಿದ್ದರು. ಸಾವಿರಾರು ಜನರನ್ನು ಭೇಟಿಯಾದ ಮೇಲೆ ಶಾಸಕರನ್ನು ಕೂಡ ಭೇಟಿಯಾಗಿ 10-15 ಅಭಿವೃದ್ಧಿ ಸಭೆಗಳನ್ನು ನಡೆಸುತ್ತಿದ್ದೆ. ನಾನೇನು ನಿದ್ದೆ ಮಾಡುತ್ತಿದೀನಾ? ತಪ್ಪು ಮಾಡಿದವರು ಅವರು, ಈಗ ನನ್ನ ಮೇಲೆ ಅಪಾದನೆ ಮಾಡ್ತಾರೆ' ಎಂದು ದೂರಿದರು. 

ಎರಡೂ ರಾಷ್ಟ್ರೀಯ ಪಕ್ಷಗಳು ಜನರ ಸಮಸ್ಯೆ ಚರ್ಚೆ ಮಾಡುವ ಅಂಶಗಳನ್ನು ಇಟ್ಟುಕೊಂಡಿಲ್ಲ. ಕೇವಲ ಭಾವನಾತ್ಮಕ ವಿಷಯಗಳನ್ನು ಕೆದಕಿಕೊಂಡು ರಾಜಕೀಯ ಮಾಡುತ್ತಿದ್ದಾರೆ. ಇದು ಬಹಳ ದಿನ ನಡೆಯುವುದಿಲ್ಲ ಎಂದ ಅವರು; ಸ್ವಲ್ಪ ದಿನ ವಿಷಕನ್ಯೆ, ವಿಷಸರ್ಪ ಇತ್ತು, ಈಗ ಬಜರಂಗಿ ವಿಚಾರ ತಗೊಂಡು ಹೋಗ್ತಿದ್ದಾರೆ. ವೋಟಿಂಗ್ ದಿನ ಈ ವಿಷಯ ಮುಗಿಯುತ್ತದೆ. ಇವರು ಜನರನ್ನು ಯಾಮಾರಿಸುತ್ತಿದ್ದಾರೆ ಎಂದು  ಟೀಕಿಸಿದರು.

ನಾನು ವಿಷಯಧಾರಿತವಾಗಿ ಚುನಾವಣೆ ಎದುರಿಸುತ್ತೇನೆ. ನನಗೆ ಆರ್ಥಿಕ ಶಕ್ತಿ ಇದ್ದಿದ್ದರೆ 130 ರಿಂದ 140 ಸೀಟು ಗೆಲ್ಲುತ್ತಿದ್ದೆ. ಹಣ ಇಲ್ಲದೆ ಹಿನ್ನೆಡೆ ಆಗಿದೆ. ಜನ ದುಡ್ಡಿಗೆ ಮರಳಾಗುವುದಿಲ್ಲ ಎಂಬ ವಿಶ್ವಾಸವಿದೆ. ಮುಖ್ಯಮಂತ್ರಿ ತವರು ಕ್ಷೇತ್ರ ಶಿಗ್ಗಾವಿ ಕ್ಷೇತ್ರದಲ್ಲೇ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಜನತಾದಳಕ್ಕೆ ಉತ್ತಮ ಸ್ಪಂದನೆ ಸಿಗುವ ವಿಶ್ವಾಸವಿದೆ ಎಂದು ಅವರು ಹೇಳಿದರು.

ಕಾಂಗ್ರೆಸ್, ಬಿಜೆಪಿ ನಾಯಕರು ಜೆಡಿಎಸ್ ಅಭ್ಯರ್ಥಿಗಳನ್ನು ಸಂಪರ್ಕ ಮಾಡುತ್ತಿದ್ದಾರೆ ಎಂಬ ಮಾಹಿತಿ ಇದೆ ಎಂಬ ಪ್ರಶ್ನೆಗೆ ಉತ್ತರ ಕೊಟ್ಟ ಮಾಜಿ ಮುಖ್ಯಮಂತ್ರಿ, ಅದರಲ್ಲಿ ಸಂಶಯವೇ ಇಲ್ಲ. ಸಮೀಕ್ಷೆಗಳು ಏನೇ ಇದ್ದರೂ ಅದು ಕೃತಕವಾದುದು. ಸಮೀಕ್ಷೆಗಳಲ್ಲಿ ಯಾವುದೇ ಸತ್ಯಾಂಶಗಳಿಲ್ಲ. ಎರಡೂ  ಪಕ್ಷಗಳು ಯಾವುದೇ ಕಾರಣಕ್ಕೂ 100 ಸ್ಥಾನ ದಾಟೋಕೆ ಸಾಧ್ಯವಾಗಿಲ್ಲ ಎಂದು ಅವರು ಹೇಳಿದರು.

share
Next Story
X