Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕರಾವಳಿಯಲ್ಲಿ ಬಿಜೆಪಿ ಸೋಲಿಸಲು ಬರಹಗಾರರ,...

ಕರಾವಳಿಯಲ್ಲಿ ಬಿಜೆಪಿ ಸೋಲಿಸಲು ಬರಹಗಾರರ, ಚಿಂತಕರ ಸಭೆ

5 May 2023 6:42 PM IST
share
ಕರಾವಳಿಯಲ್ಲಿ ಬಿಜೆಪಿ ಸೋಲಿಸಲು ಬರಹಗಾರರ, ಚಿಂತಕರ ಸಭೆ

ಮಂಗಳೂರು: ಸದಾ ಕೋಮುಹಿಂಸೆಯಿಂದ ನಲುಗುವ ಕರಾವಳಿ ಜಿಲ್ಲೆಗಳಲ್ಲಿ ನಿರುದ್ಯೋಗ, ಶಿಕ್ಷಣ, ಆರೋಗ್ಯದ ವ್ಯಾಪಾರೀಕರಣದಿಂದ ಜನಸಾಮಾನ್ಯರು ತತ್ತರಿಸಿದ್ದಾರೆ. ಬಿಜೆಪಿ ಪರಿವಾರದ ಮತೀಯ ರಾಜಕಾರಣದಿಂದ ಮಂಗಳೂರು ಸಹಿತ ಕರಾವಳಿ ಪ್ರದೇಶಗಳು ಅಭಿವೃದ್ದಿಯಲ್ಲಿ ಹಿಂದೆ ಬಿದ್ದಿವೆ. ಕಲೆ, ಸಂಸ್ಕೃತಿ, ಜನಪರ ಹೋರಾಟಗಳಿಂದ ಸಮೃದ್ದವಾಗಿದ್ದ ಮಂಗಳೂರು ಈಗ ಹಿಂದೂ, ಮುಸ್ಲಿಂ ವಿಭಜನೆಯ ರಾಜಕಾರಣದ ಮಸಿ ಮೆತ್ತಿಸಿಕೊಂಡಿದೆ. ಕರಾವಳಿಯ ಬ್ಯಾಂಕ್‌ಗಳು ವಿಲೀನದ ಹೆಸರಿನಲ್ಲಿ ಕೈ ತಪ್ಪಿದೆ. ಹಾಗಾಗಿ ಈ ಚುನಾವಣೆಯಲ್ಲಿ ಕರಾವಳಿ ಜಿಲ್ಲೆಯ ಜನತೆ ಕೋಮುವಾದದ ರಾಜಕಾರಣವನ್ನೇ ಬಂಡವಾಳ ಮಾಡಿಕೊಂಡಿರುವ ಬಿಜೆಪಿಯನ್ನು ಸೋಲಿಸಲು ಮುಂದಾಗಬೇಕು ಎಂದು ನಗರದ ಖಾಸಗಿ ಸಭಾಂಗಣದಲ್ಲಿ ಸಭೆ ಸೇರಿದ ಬರಹಗಾರರ, ಚಿಂತಕರ, ಸಾಮಾಜಿಕ ಕಾರ್ಯಕರ್ತರು ಕರೆ ನೀಡಿದ್ದಾರೆ.

ವಿಮಾನ ನಿಲ್ದಾಣ, ಬಂದರುಗಳನ್ನು ಖಾಸಗಿ ಕಂಪೆನಿಗಳಿಗೆ ಹಸ್ತಾಂತರ ಮಾಡಲಾಗಿವೆ. ಸ್ಥಳೀಯ ವಿದ್ಯಾವಂತ ಯುವಜನರು ಉದ್ಯೋಗ ಅರಸಿ ಗುಳೇ ಹೋಗುತ್ತಿದ್ದಾರೆ. ಮತ್ತೊಂದೆಡೆ ನರೇಂದ್ರ ಮೋದಿ ನಾಯಕತ್ವದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ದೇಶದ ಮೇಲೆ ಹೇರಲಾಗಿದೆ. ಪ್ರಶ್ನಿಸುವ ಹಕ್ಕನ್ನು ನಿರಾಕರಿಸಲಾಗುತ್ತಿದೆ. ಜಾತ್ಯತೀತತೆ, ಪ್ರಜಾಪ್ರಭುತ್ವ ಅಪಾಯಕ್ಕೆ ಗುರಿಯಾಗಿದೆ. ಇಂತಹ ಸಂದರ್ಭದಲ್ಲಿ ನಡೆಯುತ್ತಿರುವ ವಿಧಾನ ಸಭೆ ಚುನಾವಣೆಯು ನಾಡಿನ ಭವಿಷ್ಯದ ನಿಟ್ಟಿನಲ್ಲಿ ನಿರ್ಣಾಯಕವಾಗಿದೆ ಎಂದು ಸಭೆ ಅಭಿಪ್ರಾಯಪಟ್ಟಿವೆ.

ನಿವೃತ್ತ ಪ್ರಾಂಶುಪಾಲ ಡಾ. ಇಸ್ಮಾಯಿಲ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಪ್ರೊ. ನರೇಂದ್ರ ನಾಯಕ್, ನ್ಯಾಯ ವಾದಿ ದಿನೇಶ್ ಹೆಗ್ಡೆ ಉಳೆಪಾಡಿ, ಎರಿಕ್ ಲೋಬೋ, ನಿವೃತ್ತ ಪೊಲೀಸ್ ಅಧಿಕಾರಿ ಟಿಸಿಎಂ ಶರೀಫ್, ಪಟ್ಟಾಭಿ ರಾಮ ಸೋಮಯಾಜಿ, ವಾಸುದೇವ ಉಚ್ಚಿಲ, ಮುನೀರ್ ಕಾಟಿಪಳ್ಳ, ಸುನಿಲ್ ಕುಮಾರ್ ಬಜಾಲ್, ಯಾದವ ಶೆಟ್ಟಿ, ನಿವೃತ್ತ ಬ್ಯಾಂಕ್ ಅಧಿಕಾರಿ ಟಿಆರ್ ಭಟ್, ರಿಯಾಝ್ ಬಂಟ್ವಾಳ, ಸಾಮಾಜಿಕ ಚಿಂತಕರಾದ ಆಸುಂತಾ ಡಿಸೋಜ, ಫ್ಲೇವಿ ಕ್ರಾಸ್ತಾ, ಕ್ವೀನೀ ಪರ್ಸಿ ಆನಂದ್, ಪ್ರಭಾಕರ್ ಕಾಪಿಕಾಡ್, ರಘುರಾಜ್, ಡಾ.ವಸಂತ ಕುಮಾರ್, ಶಿವಾನಂದ್ ಕೋಡಿ, ಆಶಾ ಬೋಳೂರು, ಲಕ್ಷ್ಮಣ್ ವಾಮಂಜೂರು, ವಿನೀತ್ ದೇವಾಡಿಗ, ಜೆ ಇಬ್ರಾಹಿಂ, ಮುರಳೀಧರ್, ಬೆನೆಟ್ ಅಮ್ಮನ್ನ, ಸದಾಶಿವ ಬಂಗೇರಾ, ರಮೇಶ್ ಉಳ್ಳಾಲ್, ಪ್ರವೀಣ್ ಬಂಟ್ವಾಳ್ ಪಾಲ್ಗೊಂಡಿದ್ದರು.

share
Next Story
X