Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉಗ್ರರೊಂದಿಗಿನ ಕಾಳಗದಲ್ಲಿ ಐವರು ಯೋಧರು...

ಉಗ್ರರೊಂದಿಗಿನ ಕಾಳಗದಲ್ಲಿ ಐವರು ಯೋಧರು ಮೃತ: ಸಂತಾಪ ಸೂಚಿಸದ ಮೋದಿ, ಅಮಿತ್‌ ಶಾ

'ಪಕ್ಷದ ಪ್ರಚಾರದಲ್ಲಿ ನಿರತರಾಗಿ ದೇಶದ ಆಡಳಿತ ಮರೆತಿದ್ದಾರೆ': ಪ್ರಧಾನಿ, ಗೃಹಸಚಿವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

6 May 2023 1:52 PM IST
share
ಉಗ್ರರೊಂದಿಗಿನ ಕಾಳಗದಲ್ಲಿ ಐವರು ಯೋಧರು ಮೃತ: ಸಂತಾಪ ಸೂಚಿಸದ ಮೋದಿ, ಅಮಿತ್‌ ಶಾ
'ಪಕ್ಷದ ಪ್ರಚಾರದಲ್ಲಿ ನಿರತರಾಗಿ ದೇಶದ ಆಡಳಿತ ಮರೆತಿದ್ದಾರೆ': ಪ್ರಧಾನಿ, ಗೃಹಸಚಿವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

ಹೊಸದಿಲ್ಲಿ: ಜಮ್ಮು ಕಾಶ್ಮೀರದ ರಾಜೌರಿ ಜಿಲ್ಲೆಯ ಕಾಂಡಿ ಕೊಟ್ರಂಕಾ ಪ್ರದೇಶದಲ್ಲಿ ಅಡಗಿರುವ ಭಯೋತ್ಪಾದರಕರೊಂದಿಗೆ ನಡೆದ ಗುಂಡಿನ ಚಕಮಕಿಯ ವೇಳೆ ಭಯೋತ್ಪಾದಕರು ನಡೆಸಿದ ಸ್ಫೋಟದಲ್ಲಿ ಐವರು ಸೇನಾ ಸಿಬ್ಬಂದಿಗಳು ಸಾವನ್ನಪ್ಪಿದ್ದ ಘಟನೆ ಶುಕ್ರವಾರ ನಡೆದಿದೆ. ಆದರೆ, ಈವರೆಗೂ ಸೇನಾ ಸಿಬ್ಬಂದಿಗಳ ಸಾವಿಗೆ  ಪ್ರಧಾನಿ ನರೇಂದ್ರ ಮೋದಿ, ಅಮಿತ್‌ ಶಾ ಸೇರಿದಂತೆ ಸರ್ಕಾರದ ಉನ್ನತ ನಾಯಕರು ಯಾವುದೇ ಸಂತಾಪ ಟ್ವೀಟ್‌ ಹಾಕಿಲ್ಲ ಎಂಬ ಆರೋಪ ಕೇಳಿ ಬಂದಿದೆ. 

ರಾಜೌರಿ ಸೆಕ್ಟರ್‌ನಲ್ಲಿ ನಡೆದ ಕಾರ್ಯಾಚರಣೆಯಲ್ಲಿ ವಿಶೇಷ ಪಡೆಗಳ ಐವರು ಯೋಧರು ಹುತಾತ್ಮರಾಗಿದ್ದಾರೆ. ಆದರೆ, ಪ್ರಧಾನಿ ನರೇಂದ್ರ ಮೋದಿ, ರಾಜನಾಥ್‌ ಸಿಂಗ್‌, ಅಮಿತ್‌ ಶಾ, ಸ್ಮೃತಿ ಇರಾನಿ, ಜೆಪಿ ನಡ್ಡಾ ಯಾವುದೇ ಟ್ವೀಟ್‌ ಹಾಕಿಲ್ಲ ಎಂದು Alt News ಸಹ ಸಂಸ್ಥಾಪಕ ಮಹಮ್ಮದ್‌ ಝುಬೈರ್‌ ಟ್ವೀಟ್‌ ಮಾಡಿ ಟೀಕಿಸಿದ್ದಾರೆ. 

ಅದೇ ವೇಳೆ, ಪ್ರಧಾನಿ ಮೋದಿ ಅವರು ಕರ್ನಾಟಕ ಚುನಾವಣೆ ಬಗ್ಗೆ 33(18+15) ಟ್ವೀಟ್ ಮಾಡಿದ್ದಾರೆ. ಅಮಿತ್ ಶಾ ಅವರು ಪ್ರಧಾನಿ ಮೋದಿ ಅವರ 5 ಟ್ವೀಟ್ ಗಳನ್ನು ಮರು ಟ್ವೀಟ್ ಮಾಡಿದ್ದಾರೆ ಎಂದು ಝುಬೈರ್ ತಿಳಿಸಿದ್ದಾರೆ. ಇನ್ನು, ಸ್ಮೃತಿ ಇರಾನಿ ಅವರು ಕರ್ನಾಟಕ ಚುನಾವಣೆ ಕುರಿತ 14 ಟ್ವೀಟ್ ಗಳನ್ನು ರಿಟ್ವೀಟ್ ಮಾಡಿದ್ದಾರೆ. ಜೆಪಿ ನಡ್ಡಾ ಅವರು 20 ಕ್ಕೂ ಹೆಚ್ಚು ಟ್ವೀಟ್, ರೀಟ್ವೀಟ್ ಗಳನ್ನು ಮಾಡಿದ್ದಾರೆ.

ಈ ಎಲ್ಲಾ ನಾಯಕರ ಟ್ವಿಟರ್‌ ಖಾತೆಗಳ ಸ್ಕ್ರೀನ್‌ ರೆಕಾರ್ಡ್‌ ವಿಡಿಯೋ ಕೂಡಾ ಹಂಚಿಕೊಂಡಿರುವ ಝುಬೈರ್‌, ಯಾವುದೇ ಸಂತಾಪದ ಟ್ವೀಟ್‌ ಹಾಕಿಲ್ಲ ಎನ್ನುವ ತಮ್ಮ ಟೀಕೆಗೆ ಪುರಾವೆಯನ್ನು ನೀಡಿದ್ದಾರೆ. 

ಅದೇ ವೇಳೆ, ರಾಜೌರಿ ಸೆಕ್ಟರ್‌ನಲ್ಲಿ ಹುತಾತ್ಮರಾದ ಸೈನಿಕರ ಕುರಿತು ವಿರೋಧ ಪಕ್ಷದ ನಾಯಕರ ಕೆಲವು ಸಂತಾಪ ಟ್ವೀಟ್‌ಗಳು ಎಂದು ಪ್ರಿಯಾಂಕಾ ಗಾಂಧಿ, ಅರವಿಂದ ಕೇಜ್ರಿವಾಲ್‌, ರಾಹುಲ್‌ ಗಾಂಧಿ, ಹಿಮಾಚಲ ಸಿಎಂ (ಸುಖ್ವಿಂದರ್ ಸಿಂಗ್ ಸುಖು) ಮೊದಲಾದವರು ಹಾಕಿರುವ ಸಂತಾಪದ ಟ್ವೀಟ್‌ ಗಳ ಸ್ಕ್ರೀನ್‌ ಶಾಟ್‌ ಅನ್ನು ಝುಬೈರ್‌ ಹಂಚಿಕೊಂಡಿದ್ದಾರೆ. 

ಈ ಟ್ವೀಟ್‌ ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್‌ ರಾಷ್ಟ್ರೀಯ ಮಾಧ್ಯಮ ವಕ್ತಾರ ಪ್ರಶಾಂತ್‌ ಪ್ರತಾಪ್‌ ಸಿಂಗ್‌, “ಇದು ಮೊದಲ ಬಾರಿ ಅಲ್ಲ” ಎಂದು ಹೇಳಿದ್ದಾರೆ. 

“ಇದು ಮೊದಲ ಬಾರಿ ಅಲ್ಲ. 2023 ರ ಏಪ್ರಿಲ್ 20 ರಂದು 5 RR ಯೂನಿಟ್ ಸೈನಿಕರು ತಮ್ಮ ಪ್ರಾಣ ಕಳೆದುಕೊಂಡಾಗ ಪ್ರಧಾನಿ ಸಂತಾಪ ಸೂಚಿಸುವುದನ್ನು ತಪ್ಪಿಸಿಕೊಂಡಿದ್ದಾರೆ. ಕೇವಲ 15 ದಿನಗಳಲ್ಲಿ ಎರಡನೇ ಉಗ್ರರ ದಾಳಿ ಆಗಿದೆ, ಅದೂ, ಪಾಕಿಸ್ತಸಾನ ವಿದೇಶಾಂಗ ಸಚಿವರು ಭಾರತಕೆ ಭೇಟಿ ನೀಡುತ್ತಿರುವ ವೇಳೆಯಲ್ಲೇ. ಮೋದಿ ಆಡಳಿತದಲ್ಲಿ ಭಾರತೀಯ ಸೈನಿಕರ ಸಾವಿನ ಸಂಖ್ಯೆ ದ್ವಿಗುಣಗೊಂಡಿದೆ. ಅದಾಗ್ಯೂ, 2019 ರ ಲೋಕಸಭಾ ಚುನಾವಣೆಯ ಸಮಯದಲ್ಲಿ, ಪುಲ್ವಾಮಾ ದಾಳಿಯ ಹುತಾತ್ಮರ ಹೆಸರಿನಲ್ಲಿ ಮತ ಕೇಳುವ ಅವಕಾಶವನ್ನು ಪ್ರಧಾನಿ ಬಿಟ್ಟಿಲ್ಲ.” ಎಂದು ಪ್ರಶಾಂತ್‌ ಪ್ರತಾಪ್‌ ಟ್ವೀಟ್‌ ಮಾಡಿದ್ದಾರೆ. 

"ಆರ್ಟಿಕಲ್ 370 ರದ್ದತಿಯಿಂದ ಕಣಿವೆ ರಾಜ್ಯದಲ್ಲಿ ಶಾಂತಿ ನೆಲೆಸುತ್ತದೆ" ಎಂಬ ನಿರೂಪಣೆಯು ವಿಫಲವಾಗುತ್ತದೆ, ಹಾಗಾಗಿ ಸೈನಿಕರ ಸಾವಿಗೆ ಸಂತಾಪ ಸೂಚಿಸುತ್ತಿಲ್ಲ ಎಂದು ನೆಟ್ಟಿಗರೊಬ್ಬರು ಟ್ವೀಟ್‌ ಮಾಡಿದ್ದಾರೆ.

Five Special Forces soldiers were killed in action in Rajouri sector today.
Condolences Tweets by
Narendra Modi : 0
Rajnath Singh : 0
Amit Shah : 0
Smriti Irani: 0
JP Nadda: 0 pic.twitter.com/WNRQLgXJsn

— Mohammed Zubair (@zoo_bear) May 5, 2023

Tweets on Karnataka Elections by Amit Shah : 5 RTs of PM Modi's tweets . #KarnatakaAssemblyElection pic.twitter.com/MsJrVfrmOt

— Mohammed Zubair (@zoo_bear) May 5, 2023

Tweets + RTs on Karnataka Elections by JP Nadda: 20.#KarnatakaAssemblyElection pic.twitter.com/nBvT0J8w3w

— Mohammed Zubair (@zoo_bear) May 5, 2023

Because they know the narrative of "Article 370 abrogation will bring peace to valley" has failed.

— Commoner (@Rare_Commoner) May 6, 2023

Not the first time. PM skipped on condolence for the last attack on Apr 20, 2023 when 5 RR unit soldiers laid their lives.

Second terrorist attack in just 15 days; especially when Pak FM is visiting India!

The number of death of Indian soldiers have more than … pic.twitter.com/HHg8rpEv0e

— Prashant Pratap (@iPrashantSingh) May 5, 2023
share
Next Story
X