Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಂಸ್ಕೃತ ಪರೀಕ್ಷೆ: 13,000ಕ್ಕೂ ಹೆಚ್ಚು...

ಸಂಸ್ಕೃತ ಪರೀಕ್ಷೆ: 13,000ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಹಿಂದಿಕ್ಕಿ ಪ್ರಥಮ ಸ್ಥಾನಿಯಾದ ಮುಹಮ್ಮದ್‌ ಇರ್ಫಾನ್‌

6 May 2023 3:07 PM IST
share
ಸಂಸ್ಕೃತ ಪರೀಕ್ಷೆ: 13,000ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಹಿಂದಿಕ್ಕಿ ಪ್ರಥಮ ಸ್ಥಾನಿಯಾದ ಮುಹಮ್ಮದ್‌ ಇರ್ಫಾನ್‌

ಲಕ್ನೊ: ಉತ್ತರ ಪ್ರದೇಶ ಮಾಧ್ಯಮಿಕ ಸಂಸ್ಕೃತ ಶಿಕ್ಷಣ ಪರಿಷತ್ ಮಂಡಳಿಯ ಉತ್ತರ ಮಾಧ್ಯಮ-II (12ನೇ ತರಗತಿ) ಪರೀಕ್ಷೆಯಲ್ಲಿ ಶೇ. 82.71ರಷ್ಟು ಅಂಕ ಪಡೆಯುವ ಮೂಲಕ ಚಂದೌಲಿ ಜಿಲ್ಲೆಯ ಕೃಷಿ ಕಾರ್ಮಿಕ ಸಲಾಲುದ್ದೀನ್ ಎಂಬುವವರ 17 ವರ್ಷದ ಪುತ್ರ ಮುಹಮ್ಮದ್ ಇರ್ಫಾನ್ ಸಂಸ್ಕೃತ ಪರೀಕ್ಷೆಯಲ್ಲಿ ಮೊದಲಿಗನಾಗಿ ತೇರ್ಗಡೆ ಹೊಂದಿದ್ದಾನೆ ಎಂದು timesofindia.com ವರದಿ ಮಾಡಿದೆ.

ಸಂಸ್ಕೃತ ಶಿಕ್ಷಣ ಮಂಡಳಿಯು ಇನ್ನಿತರ ವಿಷಯಗಳೊಂದಿಗೆ ಸಂಸ್ಕೃತ ಭಾಷೆ ಹಾಗೂ ಸಾಹಿತ್ಯವನ್ನು ಕಡ್ಡಾಯ ಪಠ್ಯಕ್ರಮವಾಗಿ ಹೊಂದಿದೆ.

ಮುಂದೊಂದು ದಿನ ಸಂಸ್ಕೃತ ಶಿಕ್ಷಕನಾಗುವ ಕನಸು ಹೊಂದಿರುವ ಇರ್ಫಾನ್, 10 ಮತ್ತು 12ನೇ ತರಗತಿ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿರುವ 20 ವಿದ್ಯಾರ್ಥಿಗಳ ಪೈಕಿ ಏಕೈಕ ಮುಸ್ಲಿಂ ವಿದ್ಯಾರ್ಥಿಯಾಗಿದ್ದಾನೆ.

ತನ್ನ ಮಗನ ಸಾಧನೆಯಿಂದ ಹೆಮ್ಮೆಯಿಂದ ಬೀಗುತ್ತಿರುವ ಇರ್ಫಾನ್ ತಂದೆಯು, ತಾನು ಶುಲ್ಕ ಭರಿಸಲು ಸಾಧ್ಯವಿದ್ದ ಸಂಪೂರ್ಣಾನಂದ ಸಂಸ್ಕೃತ ಶಾಲೆಗೆ ತನ್ನ ಪುತ್ರನನ್ನು ದಾಖಲಿಸಿದ ದಿನವನ್ನು ಸ್ಮರಿಸುತ್ತಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಸಲಾಲುದ್ದೀನ್, "ನಾನು ದಿನಗೂಲಿ ನೌಕರನಾಗಿದ್ದು, ದಿನವೊಂದಕ್ಕೆ ರೂ. 300 ಕೂಲಿ ಪಡೆಯುತ್ತೇನೆ. ತಿಂಗಳಲ್ಲಿ ಕೆಲವೇ ದಿನ ಮಾತ್ರ ನನಗೆ ಕೂಲಿ ದೊರೆಯುತ್ತದೆ" ಎಂದು ತಿಳಿಸಿದ್ದಾರೆ.

"ಇರ್ಫಾನ್ ಯಾವಾಗಲೂ ಉತ್ತಮವಾಗಿ ವ್ಯಾಸಂಗ ಮಾಡುತ್ತಿದ್ದ ಮತ್ತು ಶಾಲೆಗೆ ದಾಖಲಾದ ದಿನದಿಂದಲೇ ಸಂಸ್ಕೃತ ಕಲಿಕೆಯ ಬಗ್ಗೆ ತೀವ್ರ ಆಸಕ್ತಿ ಹೊಂದಿದ್ದ" ಎಂದೂ ತಿಳಿಸಿದ್ದಾರೆ.

"ಆತನೀಗ ಶಾಸ್ತ್ರಿ (ಬಿಎ ಪದವಿಗೆ ಸಮಾನಾಂತರ) ಹಾಗೂ ಆಚಾರ್ಯ (ಎಂಎ ಪದವಿಗೆ ಸಮಾನಾಂತರ) ವ್ಯಾಸಂಗ ಮಾಡಲು ಉದ್ದೇಶಿಸಿದ್ದು, ಅವು ಪೂರ್ಣಗೊಂಡ ನಂತರ ಸಂಸ್ಕೃತ ಶಿಕ್ಷಕನಾಗಿ ಉದ್ಯೋಗ ಮಾಡುವ ಹಂಬಲ ಹೊಂದಿದ್ದಾನೆ" ಎಂದು ಸಲಾಲುದ್ದೀನ್ ತಿಳಿಸಿದ್ದಾರೆ.

share
Next Story
X