Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಮುದಾಯದ ಸ್ವಾಭಿಮಾನಕ್ಕೆ ಧಕ್ಕೆ:...

ಸಮುದಾಯದ ಸ್ವಾಭಿಮಾನಕ್ಕೆ ಧಕ್ಕೆ: ಬಿಜೆಪಿಗೆ ಮತಹಾಕದಂತೆ ಲಿಂಗಾಯತ- ವೀರಶೈವ ವಿಚಾರ ವೇದಿಕೆ ಕರೆ

6 May 2023 4:24 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಸಮುದಾಯದ ಸ್ವಾಭಿಮಾನಕ್ಕೆ ಧಕ್ಕೆ: ಬಿಜೆಪಿಗೆ ಮತಹಾಕದಂತೆ ಲಿಂಗಾಯತ- ವೀರಶೈವ ವಿಚಾರ ವೇದಿಕೆ ಕರೆ

ಬೆಂಗಳೂರು, ಮೇ 6: ‘ಬಿಜೆಪಿಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರು ಲಿಂಗಾಯತ ಸಮುದಾಯದ ಸ್ವಾಭಿಮಾನಕ್ಕೆ ಧಕ್ಕೆ ತರುವ ಆತಂಕಕಾರಿ ಮಾತುಗಳಾನ್ನಾಡಿದ್ದಾರೆ. ಹಾಗಾಗಿ ಲಿಂಗಾಯತ ಸಮುದಾಯದವರು ಬಿಜೆಪಿಗೆ ಮತ ಹಾಕಬಾರದು’ ಎಂದು ಕರ್ನಾಟಕ ಲಿಂಗಾಯತ ಮತ್ತು ವೀರಶೈವ ವಿಚಾರ ವೇದಿಕೆ ಕರೆ ನೀಡಿದೆ.

ಶನಿವಾರ ಪ್ರೆಸ್‍ಕ್ಲಬ್‍ನಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ವೇದಿಕೆಯ ಮುಖಂಡ ಕೆ.ವಿ.ನಾಗರಾಜಮೂರ್ತಿ, ‘ರಾಜ್ಯದಲ್ಲಿ ಬಿಜೆಪಿ ಪಕ್ಷವು ಲಿಂಗಾಯತ ಸಮುದಾಯವನ್ನು ಕಡೆಗಣಿಸುತ್ತಿದ್ದು, ಬಿ.ಎಲ್ ಸಂತೋಷ್ ಅವರು ‘ನಾವು ಹಿಂದುತ್ವದಲ್ಲಿ ಮುಂದುವರೆಯುತ್ತೇವೆ. ನಮಗೆ ಲಿಂಗಾಯತ ಅಗತ್ಯವಿಲ್ಲ, ನಾವು ಇನ್ನೆಷ್ಟು ದಿನ ಲಿಂಗಾಯತ ಓಲೈಕೆ ಮಾಡಿಕೊಂಡಿರಬೇಕು’ ಎಂದು ಅಹಂಕಾರದ ಮಾತುಗಳನ್ನಾಡಿ, ಸಮುದಾಯದ ಸ್ವಾಭಿಮಾನವನ್ನು ಕೆಣಕಿದ್ದಾರೆ’ ಎಂದರು.

ಬೊಮ್ಮಾಯಿ ಅವರ ಸರಕಾರ ಬಂದಾಗಿನಿಂದ ಬಿಜೆಪಿ ಒಂದಲ್ಲ ಒಂದು ರೀತಿಯಲ್ಲಿ ಲಿಂಗಾಯತರ ಮೇಲೆ ಪ್ರತ್ಯಕ್ಷ-ಪರೋಕ್ಷವಾಗಿ ದಬ್ಬಾಳಿಕೆಯನ್ನು ನಡೆಸುತ್ತಿದೆ. ಪಠ್ಯಪುಸ್ತಕಗಳಲ್ಲಿ ವಚನಕಾರರ ವಚನ ಸಾಹಿತ್ಯವನ್ನು ಕೈ ಬಿಟ್ಟಿರುವುದು, ಬಸವಣ್ಣನ ವಿಚಾರಧಾರೆಗಳನ್ನು ತಿರುಚಿರುವುದು ಸ್ಪಷ್ಟವಾಗಿ ಗೋಚರಿಸಿದೆ. 2017ರಲ್ಲಿ ಸಿದ್ಧರಾಮಯ್ಯ ಸರಕಾರ ಬಸವಣ್ಣನವರ ಜೀವನ ಚರಿತ್ರೆಯನ್ನು ಕುರಿತ ನಾಟಕಕ್ಕೆ 75 ಲಕ್ಷ ರೂ.ಗಳನ್ನು ಮೀಸಲಿಡಲಾಗಿತ್ತು. 2018ರಲ್ಲಿ ನಾಟಕ ಪ್ರದರ್ಶನಕ್ಕೂ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ನಂತರ ಅಧಿಕಾರಕ್ಕೆ ಬಂದ ಬಿಜೆಪಿ ಸರಕಾರ ನಾಟಕದ ಯೋಜನೆಯನ್ನೇ ಸ್ಥಗಿತಗೊಳಿಸಿದೆ ಎಂದು ಹೇಳಿದರು.

ಬಿಜೆಪಿ ಅವಧಿಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಡೆಸಲಾಗುತ್ತಿದ್ದ ವಚನ ಸಂಗೀತೋತ್ಸವವನ್ನು ಕೈಬಿಡಲಾಗಿದೆ. ವಚನ ಸಂಗೀತೋತ್ಸವ ಕಾರ್ಯಕ್ರಮಕ್ಕೆ ಮೀಸಲಿಟ್ಟಿದ್ದ 90 ಲಕ್ಷ ರೂ.ಅನುದಾನವನ್ನು ಸಚಿವ ಸುನೀಲ್ ಕುಮಾರ್ ಕಾರ್ಕಳ ಉತ್ಸವಕ್ಕೆ ಬಳಸಿಕೊಂಡಿದ್ದು, ಅಲ್ಲಿ ವಚನ ಸಾಹಿತ್ಯದ ಒಂದೇ ಒಂದು ಕಾರ್ಯಕ್ರಮವನ್ನು ನಡೆಸದೆ ಕೇವಲ ವೈದಿಕಶಾಹಿ ಕಾರ್ಯಕ್ರಮಗಳನ್ನೇ ನಡೆಸಿ, ನಮ್ಮ ಲಿಂಗಾಯತ ಸಮುದಾಯಕ್ಕೆ ಅಪಚಾರವೆಸಗಿದ್ದಾರೆ ಎಂದು ಕೆ.ವಿ. ನಾಗರಾಜಮೂರ್ತಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿ ವರ್ಷ ಶರಣರ ಚಿಂತನೆಗಳಿಗೆ ಅನುಗುಣವಾಗಿ ರಾಜ್ಯಮಟ್ಟದಲ್ಲಿ ನಡೆಸಲಾಗುತ್ತಿದ್ದ ಶರಣರ ಜಯಂತಿಗಳನ್ನು ರದ್ದು ಮಾಡಿ, ಅದನ್ನು ಜಿಲ್ಲಾಮಟ್ಟದ ಕಾರ್ಯಕ್ರಮಗಳಾಗಿ ಆಯೋಜಿಸಲಾಗುತ್ತಿದೆ. ಇದು ಶರಣರಿಗೆ ಮಾಡಿರುವ ದೊಡ್ಡ ಅಪಚಾರವಾಗಿದೆ. ಹೀಗೆ ನಿರಂತರವಾಗಿ ಶರಣರ ಸಂಸ್ಲೃತಿಯ ಮೇಲೆ ದಬ್ಬಾಳಿಕೆ ಮಾಡುತ್ತಿರುವ ಬಿಜೆಪಿ ಸರಕಾರ ಇದೀಗ ಚುನಾವಣಾ ಸಂದರ್ಭದಲ್ಲಿಯೂ ತಮ್ಮ ವೈದಿಕಶಾಹಿ ಮನುವಾದಿ ಸಿದ್ಧಾಂತಗಳನ್ನು ಮುನ್ನೆಡೆಸಿಕೊಂಡು ಹೋಗುತ್ತಿದೆ ಎಂದು ಅವರು ತಿಳಿಸಿದರು.

ಇತ್ತೀಚಿನ ರಾಜಕೀಯ ಬೆಳವಣಿಗೆಯನ್ನು ಗಮನಿಸಿದರೆ, ಲಿಂಗಾಯತ ಸಮುದಾಯದ ನಾಯಕ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿ ಅವರು ಕಣ್ಣೀರು ಹಾಕುವಂತೆ ಮಾಡಿದ್ದು, ನಮ್ಮೆಲ್ಲರ ಕಣ್ಣ ಮುಂದೆ ಇದೆ. ಯಡಿಯೂರಪ್ಪ ನಂತರದ ನಾಯಕರ ಮೇಲೆ ದಾಳಿ ಶುರು ಮಾಡಿದ್ದು, ಜಗದೀಶ್ ಶೆಟ್ಟರ್, ಲಕ್ಷ್ಮಣ ಸವದಿ, ಆಯನೂರು ಮಂಜುನಾಥ್, ಸಂಜಯ್ ಪಾಟೀಲ್ ಸೊಗಡು ಶಿವಣ್ಣ ಮುಂತಾದ ಪ್ರಭಾವಿ ಲಿಂಗಾಯತ ನಾಯಕರನ್ನು ಮೂಲೆಗುಂಪು ಮಾಡಲಾಗಿದೆ. ಹೀಗೆ ಲಿಂಗಾಯತ ನಾಯಕರನ್ನು ನಿರ್ಣಾಮ ಮಾಡುವ ಬಿಜೆಪಿಯ ಕುತಂತ್ರ ನಡೆಯುತ್ತಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಬಿಜೆಪಿಯು ಲಿಂಗಾಯತ ಮತ್ತು ವೀರಶೈವ ಸಮುದಾಯಕ್ಕೆ ಅನ್ಯಾಯವನ್ನು ಮಾಡುತ್ತಿರುವ ಕಾರಣ ಸಮುದಾಯವು ಬಿಜೆಪಿಯನ್ನು ಚುನಾವಣೆಯಲ್ಲಿ ಸೋಲಿಸಬೇಕಾಗಿದೆ. ಈ ಮೂಲಕ ಸಮುದಾಯದವರು ಬಿಜೆಪಿಗೆ ತಕ್ಕ ಪಾಠವನ್ನು ಕಲಿಸಬೇಕಾಗಿದೆ ಎಂದು ಅವರು ಕರೆ ನೀಡಿದರು.

ಪತ್ರಿಕಾಗೋಷ್ಟಿಯಲ್ಲಿ ಸಮುದಾಯದ ಮುಖಂಡರಾದ ಸಾಗರನಹಳ್ಳಿ ನಟರಾಜ್, ಪ್ರೊ. ಕೃಪಾಶಂಕರ್, ಅಶೋಕ್ ಲೋಣಿ, ಆರ್.ಜಿ.ಹಳ್ಳಿ ನಾಗರಾಜ ಮತ್ತಿತರರು ಉಪಸ್ಥಿತರಿದ್ದರು.   

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X