Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. 'ಇದಕ್ಕೆಲ್ಲ ಯಾರು ಹೊಣೆ ನರೇಂದ್ರ...

'ಇದಕ್ಕೆಲ್ಲ ಯಾರು ಹೊಣೆ ನರೇಂದ್ರ ಮೋದಿಯವರೇ?': ಪ್ರಧಾನಿಗೆ ಸಿದ್ದರಾಮಯ್ಯರಿಂದ ಸರಣಿ ಪ್ರಶ್ನೆಗಳು

7 May 2023 6:55 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಇದಕ್ಕೆಲ್ಲ ಯಾರು ಹೊಣೆ ನರೇಂದ್ರ ಮೋದಿಯವರೇ?: ಪ್ರಧಾನಿಗೆ ಸಿದ್ದರಾಮಯ್ಯರಿಂದ ಸರಣಿ ಪ್ರಶ್ನೆಗಳು

ಬೆಂಗಳೂರು, ಮೇ 7: ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಮತ ಯಾಚನೆಯಲ್ಲಿ ನಿರತರಾಗಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ರಾಜ್ಯ ವಿಪಕ್ಷ ನಾಯಕ ಸಿದ್ದರಾಮಯ್ಯ ಸರಣಿ ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ.

ಬೆಂಗಳೂರಿನ ರಸ್ತೆ ಸಮಸ್ಯೆ, ಅಪರಾಧಗಳ ಹೆಚ್ಚಳ, ಎಸ್ಸಿ-ಎಸ್ಟಿಗಳ ಮೇಲಿನ ದೌರ್ಜನ್ಯ, ಇತ್ಯಾದಿ ಸಮಸ್ಯೆಗಳನ್ನು ಬೊಟ್ಟು ಮಾಡಿ 'ಇದಕ್ಕೆಲ್ಲ ಯಾರು ಹೊಣೆ?' ಎಂದು 'AnswerMadiModi' ಎಂದು ಹ್ಯಾಶ್ ಟ್ಯಾಗ್ ಮೂಲಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಕರ್ನಾಟಕದಲ್ಲಿಯೇ ಠಿಕಾಣಿ ಹೂಡಿ ಬಾಯ್ತುಂಬಾ ಮಾತನಾಡುತ್ತಿದ್ದಾರೆ. ಆದರೆ ಗುತ್ತಿಗೆದಾರರ ಸಂಘದ ಅಧ್ಯಕ್ಷರು ಮತ್ತು ಅನುದಾನಿತ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷರು ಪ್ರಧಾನಿಗಳಿಗೇ ಪತ್ರ ಬರೆಯುವಷ್ಟು ಭ್ರಷ್ಟಾಚಾರ ಇಲ್ಲಿ ತಾರಕಕ್ಕೇರಿದೆ.

ಕಾಂಗ್ರೆಸ್ ಸರ್ಕಾರದ ಕಾಲದಲ್ಲಿ ಬೆಂಗಳೂರು ನಗರ ಉದ್ಯಾನಗಳ ನಗರ, ಸಿಲಿಕಾನ್ ಸಿಟಿ, ಐಟಿ-ಬಿಟಿ ರಾಜಧಾನಿ, ಸ್ಟಾರ್ಟ್ಅಪ್ ರಾಜಧಾನಿ ಎಂದೆಲ್ಲ ಖ್ಯಾತಿ ಗಳಿಸಿತ್ತು.

ಬಿಜೆಪಿ ಸರ್ಕಾರದ ಕಾಲದಲ್ಲಿ ಗುಂಡಿಬಿದ್ದ ರಸ್ತೆಗಳು, ನೆರೆ ನೀರಿನಲ್ಲಿ ಮುಳುಗುವ ಮನೆಗಳು, ಅಪರಾಧಿಗಳ ಜಗತ್ತಿನ ರಾಜಧಾನಿ ಎಂಬ ಕುಖ್ಯಾತಿ ಗಳಿಸಿದೆ.

ಕಾಂಗ್ರೆಸ್ ಸರ್ಕಾರದ ಕಾಲದಲ್ಲಿ ಬೆಂಗಳೂರು ನಗರ ಉದ್ಯಮಶೀಲರ ಆಸಕ್ತಿಯ ನಂಬರ್ ಒನ್ ತಾಣವಾಗಿತ್ತು.

ಬಿಜೆಪಿ ಸರ್ಕಾರದ ಕಾಲದಲ್ಲಿ ಬೆಂಗಳೂರು ನಗರ ಉದ್ಯಮಶೀಲರ ಆಸಕ್ತಿಯ ನಗರಗಳ ಪಟ್ಟಿಯಲ್ಲಿ ಹದಿನೇಳನೇ ಸ್ಥಾನಕ್ಕೆ ಕುಸಿದಿದೆ.

ಅಪರಾಧ ಸಂಖ್ಯೆಗಳ ಹೆಚ್ಚಳ, ಕುಸಿದುಬಿದ್ದಿರುವ ಮೂಲಸೌಕರ್ಯ ವ್ಯವಸ್ಥೆ ಮತ್ತು ಗುಂಡಿಬಿದ್ದ ರಸ್ತೆಗಳಿಂದಾಗಿ ಜಾಗತಿಕ ವಾಸಯೋಗ್ಯ ಸೂಚ್ಯಂಕದಲ್ಲಿ ಬೆಂಗಳೂರು ಕನಿಷ್ಠ ಶ್ರೇಣಿಗೆ ತಲುಪಿದೆ.

ಕಳೆದ ಮೂರು ವರ್ಷಗಳಲ್ಲಿ ಕೇವಲ ಗುಂಡಿಬಿದ್ದ ರಸ್ತೆಗಳಿಂದಾಗಿ 31 ಮಂದಿಪ್ರಾಣ ಕಳೆದುಕೊಂಡಿದ್ದಾರೆ.

ಕಳೆದ ಮೂರು ವರ್ಷಗಳಲ್ಲಿ ಬಿಬಿಎಂಪಿ ಕೇವಲ ರಸ್ತೆ ಗುಂಡಿಮುಚ್ಚಲು ರೂ.7,121 ಖರ್ಚು ಮಾಡಿದರೂ ಇನ್ನೂ ನೂರಾರು ಹಳೆಯ ಗುಂಡಿಗಳು ಉಳಿದಿವೆ, ಹೊಸ ಗುಂಡಿಗಳು ತಯರಾಗುತ್ತಿವೆ.

ಶೇಕಡಾ 48ರಷ್ಟು ವಾಹನದಟ್ಟಣೆಯ ಪ್ರಮಾಣದಿಂದಾಗಿ ಬೆಂಗಳೂರು ನಗರ ದೇಶದಲ್ಲಿ ಎರಡನೇ ಅತ್ಯಂತ ಹೆಚ್ಚು ವಾಹನ ದಟ್ಟಣೆಯ ನಗರ ಎಂಬ ಕುಖ್ಯಾತಿಗೆ ಒಳಪಟ್ಟಿದೆ. ಇದರಿಂದಾಗಿ ನಗರವಾಸಿಗಳು ಮನೆಗಿಂತ ಹೆಚ್ಚಿನ ಸಮಯ ರಸ್ತೆಯಲ್ಲಿ ಕಳೆಯುವಂತಾಗಿದೆ.

ಎನ್.ಸಿ.ಆರ್.ಬಿ ವರದಿ ಪ್ರಕಾರ ದೇಶದ ಮೆಟ್ರೋಪಾಲಿಟನ್ ನಗರಗಳಲ್ಲಿ ನಡೆಯುವ ಅಪರಾಧಗಳ ಪೈಕಿ 72% ಕಳ್ಳತನಗಳು ಬೆಂಗಳೂರು ನಗರದಲ್ಲಿ ನಡೆಯುತ್ತಿರುವ ಕಾರಣ ಬೆಂಗಳೂರು ನಗರ ಈಗ ಅಪರಾಧಗಳ ತಾಣವಾಗಿದೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೇಲಿನ ದೌರ್ಜನ್ಯದ ಪ್ರಮಾಣ 2021ರಲ್ಲಿ ಶೇ.18ರಷ್ಟು ಹೆಚ್ಚಾಗಿದೆ.

ಎನ್.ಡಿ.ಪಿ.ಎಸ್ ಕಾಯ್ದೆಯಡಿ ದಾಖಲಾಗುತ್ತಿರುವ ಪ್ರಕರಣಗಳ ಸಂಖ್ಯೆ 1493% ರಷ್ಟು ಹೆಚ್ಚಾಗಿವೆ. 2021ರಲ್ಲಿ ಇಮ್ಮೊರಲ್ ಟ್ರಾಪಿಕಿಂಗ್ ಶೇ.61ರಷ್ಟು ಹೆಚ್ಚಾಗಿದೆ.

ಬೆಂಗಳೂರು ನಗರಕ್ಕೆ ಕುಡಿಯುವ ನೀರು ಪೂರೈಸಲು ರೂಪಿಸಲಾಗಿರುವ ಮೇಕೆದಾಟು ಯೋಜನೆಗೆ ಅನುಮತಿ ನೀಡದೆ ಇರುವ ಕಾರಣದಿಂದಾಗಿ ನಗರದಲ್ಲಿ ಕುಡಿಯುವ ನೀರಿನ ಕೊರತೆ ಹೆಚ್ಚಾಗುತ್ತಿದೆ. ನಗರದ ಜನ ಕುಡಿಯುವ ನೀರಿಗಾಗಿ ಖಾಸಗಿ ಬೋರ್ ವೆಲ್ ಮತ್ತು ಟ್ಯಾಂಕರ್ ನೀರನ್ನು ಬಳಸುತ್ತಿದ್ದಾರೆ. 'ಇದಕ್ಕೆಲ್ಲ ಯಾರು ಹೊಣೆ ನರೇಂದ್ರ ಮೋದಿಯವರೇ?' ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

#AnswerMadiModi pic.twitter.com/78AkT5qAaf

— Siddaramaiah (@siddaramaiah) May 7, 2023
share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X