ಬಿಜೆಪಿ ಭಾರೀ ಸೋಲಿನ ಹತಾಶೆಯಲ್ಲಿದೆ: ನಿಖಿತ್ರಾಜ್ ಮೌರ್ಯ

ಕಾಪು, ಮೇ 7: ಬಿಜೆಪಿ ಭಾರೀ ಸೋಲಿನ ಹತಾಶೆಯಲ್ಲಿದೆ. ಸೋಲಿನ ಭಯದಲ್ಲಿ ಪ್ರಧಾನಿಯವರನ್ನು ದಾಖಲೆ ಸಂಖ್ಯೆಯಲ್ಲಿ ರಾಜ್ಯಕ್ಕೆ ಕರೆಯಿಸಿ ಪ್ರಚಾರ ಮಾಡಿದ ಕೀರ್ತಿ ಕರ್ನಾಟಕ ಬಿಜೆಪಿಗೆ ಸಲ್ಲುತ್ತದೆ ಎಂದು ಕಾಂಗ್ರೆಸ್ ವಕ್ತಾರ ನಿಖಿತ್ ರಾಜ್ ಮೌರ್ಯ ಟೀಕಿಸಿದ್ದಾರೆ.
ಮುದರಂಗಡಿ ಪೇಟೆಯಲ್ಲಿ ನಡೆದ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡುತಿದ್ದರು. ರಾಜ್ಯ ಬಿಜೆಪಿ ಸರಕಾರ ಲಂಚ ಭ್ರಷ್ಟಾಚಾರದಿಂದಾಗಿ 50ಕ್ಕೂ ಹೆಚ್ಚು ಸರಕಾರಿ ಶಾಲೆಗಳನ್ನು ಮುಚ್ಚಲಾಗುತ್ತಿದೆ. ಸರಕಾರಿ ಶಾಲೆಗಳನ್ನು ಮುಚ್ಚಿ ಬಡ ಜನರನ್ನು ಶಿಕ್ಷಣ ವಂಚಿತರನ್ನಾಗಿಸುತ್ತಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಿಡಿಸಿದರು.
ಅಧಿಕಾರ ದರ್ಪವಿಲ್ಲದ ಅಪರೂಪದ ರಾಜಕಾರಣಿ ವಿನಯ ಕುಮಾರ್ ಸೊರಕೆ. ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದೇ ಬರುತ್ತದೆ ಎಂದು ಎಲ್ಲಾ ಸಮೀಕ್ಷೆಯಲ್ಲಿ ನಿಜವಾಗಿದೆ. ಕಾಪುವಿನಲ್ಲಿವ ವಿನಯ ಕುಮಾರ್ ಶಾಸಕರಾದರೆ ಮಂತ್ರಿ ಆಗೇ ಆಗುತ್ತಾರೆ. ಕಾಪು ಇನ್ನೆಂದು ಕಾಣದ ಭಾರೀ ಅಭಿವೃದ್ಧಿಯಾಗಲಿದೆ ಎಂದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಕಾಂಗ್ರೆಸ್ ಮುಖಂಡರಾದ ಕೃಷ್ಣ ಪೂಜಾರಿ, ಮೈಕಲ್ ಡಿಸೋಜ, ಅಬ್ದುಲ್ ಅಜೀಜ್, ಸೋಮನಾಥ್, ಸುನೀಲ್ ರಾಜ್ ಶೆಟ್ಟಿ, ರೋಹನ್, ರಮೀಜ್, ಅಜೀಜ್, ಡೇವಿಡ್ ಡಿಸೋಜ, ಜಿತೇಂದ್ರ ಫುಟಾರ್ಡೊ ಮೊದಲಾದವರು ಉಪಸ್ಥಿತರಿದ್ದರು.