Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮೀನುಗಾರರಿಗೆ ನ್ಯಾಯ ಕೊಡುವಲ್ಲಿ ಬಿಜೆಪಿ...

ಮೀನುಗಾರರಿಗೆ ನ್ಯಾಯ ಕೊಡುವಲ್ಲಿ ಬಿಜೆಪಿ ವಿಫಲ: ತಲ್ಲೂರಿನಲ್ಲಿ ಗೋಪಾಲ ಪೂಜಾರಿ ರೋಡ್ ಶೋ

7 May 2023 7:31 PM IST
share
ಮೀನುಗಾರರಿಗೆ ನ್ಯಾಯ ಕೊಡುವಲ್ಲಿ ಬಿಜೆಪಿ ವಿಫಲ: ತಲ್ಲೂರಿನಲ್ಲಿ ಗೋಪಾಲ ಪೂಜಾರಿ ರೋಡ್ ಶೋ

ಬೈಂದೂರು, ಮೇ 7: ಬೈಂದೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಗೋಪಾಲ ಪೂಜಾರಿ ರವಿವಾರ ತಲ್ಲೂರಿನಲ್ಲಿ ಬೃಹತ್ ರೋಡ್ ಶೋ ನಡೆಸಿದರು.

ತಲ್ಲೂರಿನ ಕುಂತಿ ಅಮ್ಮ ದೇವಸ್ಥಾನ ಬಳಿಯಿಂದ ಆರಂಭಗೊಂಡ ರೋಡ್ ಶೋ, ತಲ್ಲೂರು ಪೇಟೆ ಮೂಲಕ ಸಾಗಿ, ಹೋಟೆಲ್ ಪ್ರವಾಸಿ ಕ್ರಾಸ್ ಬಳಿ ಯೂ ಟರ್ನ್ ಪಡೆದು, ವಾಪಾಸು ತಲ್ಲೂರು ಪೇಟೆಯಲ್ಲಿ ಸಮಾಪನ ಗೊಂಡಿತು.

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಸೋತಾಗ, ಅನಾರೋಗ್ಯದಲ್ಲಿದ್ದಾಗ ನನ್ನೊಂದಿ ಗಿದ್ದ ಕಾರ್ಯಕರ್ತರೇ ನನ್ನ ಸ್ಟಾರ್ ಪ್ರಚಾರಕರು. ಈಗಲೂ ಮನೆ-ಮನೆಗೆ ಹೋಗಿ ಪ್ರಚಾರ ಮಾಡುತ್ತಿದ್ದಾರೆ.  ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಹೊರತುಪಡಿಸಿ, ರಾಷ್ಟ್ರ- ರಾಜ್ಯ ಮಟ್ಟದ ಯಾವ ನಾಯಕರನ್ನು ಪ್ರಚಾರಕ್ಕೆ ಆಹ್ವಾನಿಸಿಲ್ಲ. ಕಾರ್ಯಕರ್ತರೇ ನನ್ನ ಪರವಾಗಿ ಪ್ರಚಾರ ಮಾಡುತ್ತಿದ್ದಾರೆ ಎಂದರು.

ಸುಕುಮಾರ್ ಶೆಟ್ಟರ ಬಗ್ಗೆ ನಾನು ಮಾತನಾಡುವುದಿಲ್ಲ. ಬಿಜೆಪಿ ಅಭ್ಯರ್ಥಿ ಸೋಲಿನ ಭಯದಿಂದ ಹತಾಶರಾಗಿದ್ದು ಸುಕುಮಾರ್ ಶೆಟ್ಟಿಯವರ ಬಗ್ಗೆ ಆರೋಪಿಸುತ್ತಿದ್ದಾರೆ. ಇದಕ್ಕೆ ಬಿಜೆಪಿ ಅಭ್ಯರ್ಥಿ ಹಾಗೂ ಸುಕುಮಾರ ಶೆಟ್ಟಿಯವರೆ ಪ್ರತಿಕ್ರಿಸಬೇಕು ಎಂದು ಅವರು ತಿಳಿಸಿದರು.

ಬೈಂದೂರಲ್ಲಿ ಕಾಂಗ್ರೆಸ್ ಪರವಾದ ಅಲೆಯಿದೆ. ಕಳೆದ ಬಾರಿ ಪರೇಶ್ ಮೇಸ್ತ ಪ್ರಕರಣದಲ್ಲಿ ನನ್ನನ್ನು ಸೋಲಿಸಿದ ನೋವು ಮತದಾರರಲ್ಲಿದೆ. ಸಂವಿಧಾನ ವಿರೋಧಿ ಕಾರ್ಯದಲ್ಲಿ ಭಾಗಿಯಾಗಿರುವುದು ಕಂಡು ಬಂದರೆ ಅಂತಹ ಸಂಘಟನೆ ನಿಷೇಧ ಎಂದು ಹೇಳಲಾಗಿದೆಯೇ ಹೊರತು ಯಾವುದೇ ಸಂಘಟನೆ ಗಳನ್ನು ಕಾಂಗ್ರೆಸ್ ನಿಷೇಧ ಮಾಡಲ್ಲ ಎಂದವರು ಸ್ಪಷ್ಟಪಡಿಸಿದರು.

ಕುಡಿಯುವ ನೀರಿನ ವಾರಾಹಿ ಕಾಮಗಾರಿ ವಿಳಂಬ, 94ಸಿ ಹಕ್ಕುಪತ್ರ, ಅಕ್ರಮ-ಸಕ್ರಮ ನೆನೆಗುದಿಗೆ ಬಿದ್ದಿರುವ ಬಗ್ಗೆ, ಉಪ್ಪುನೀರಿನ ತಡೆಗೋಡೆ, ವಾರಾಹಿ ಬಲದಂಡೆ ಯೋಜನೆ, ಸಿದ್ದಾಪುರ ಏತ ನೀರಾವರಿ, ಬಂದೂರನ್ನು ಮಾದರಿಯಾಗಿಸಲು ಪಣ, ಗಂಗೊಳ್ಳಿ, ಮರವಂತೆ, ಕೊಡೇರಿ, ಅಳ್ವೆಗದ್ದೆ ಬಂದರುಗಳ ಅಭಿವೃದ್ಧಿಗೆ ಚಾಲನೆ, ಸೀಮೆಎಣ್ಣೆ 3 ಸಾವಿರ ಲೀ. ಕೊಡಬೇಕಿತ್ತು. ಆದರೆ ವರ್ಷದಲ್ಲಿ ಒಟ್ಟಾರೆ ಕೊಟ್ಟಿರುವುದು ಕೇವಲ 670 ಲೀ. ಮಾತ್ರ. ಮತ್ಸಾಶ್ರಯ ಮನೆ ಕೊಟ್ಟಿಲ್ಲ, ಮೀನುಗಾರರಿಗೆ ನ್ಯಾಯ ಕೊಡಿಸಿಲ್ಲ, ನಮ್ಮ ಸರಕಾರ ಬಂದರೆ ಬಜೆಟ್ನಲ್ಲಿಯೇ ಹಣವಿಟ್ಟು, ಸೀಮೆಎಣ್ಣೆ ನಿರಂತರ ಪೂರೈಕೆ ಮಾಡಲು ಶ್ರಮಿಸಲಾಗುವುದು ಎಂದು ಅವರು ಭರವಸೆ ನೀಡಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರದೀಪ್ ಕುಮಾರ್ ಶೆಟ್ಟಿ ಗುಡಿಬೆಟ್ಟು, ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಪಾಂಡು ಹೆಮ್ಮಾಡಿ, ಗುಲ್ವಾಡಿ ಗ್ರಾಪಂ ಅಧ್ಯಕ್ಷ ಸುದೀಶ್ ಶೆಟ್ಟಿ,  ತಲ್ಲೂರು ಗ್ರಾಪಂ ಮಾಜಿ ಅಧ್ಯಕ್ಷ ಆನಂದ ಬಿಲ್ಲವ, ಗ್ರಾಪಂ ಸದಸ್ಯೆ ಜುಡಿತ್ ಮೆಂಡೊನ್ಸಾ, ಪ್ರಮುಖರಾದ ಹರೀಶ್ ತೋಳಾರ್, ಪ್ರಶಾಂತ್ ಪೂಜಾರಿ ಕರ್ಕಿ ಮೊದಲಾದವರು ಉಪಸ್ಥಿತರಿದ್ದರು.

share
Next Story
X