Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ: ಹೊಟೇಲ್‌ನಲ್ಲಿ ಅಡುಗೆ ಕೆಲಸಗಾರನ...

ಉಡುಪಿ: ಹೊಟೇಲ್‌ನಲ್ಲಿ ಅಡುಗೆ ಕೆಲಸಗಾರನ ಪುತ್ರಿ, ಪ.ಪಂಗಡದ ಬಾಲಕಿ ಧನ್ಯಾಗೆ ಎಸೆಸೆಲ್ಸಿಯಲ್ಲಿ 622 ಅಂಕ

8 May 2023 7:46 PM IST
share
ಉಡುಪಿ: ಹೊಟೇಲ್‌ನಲ್ಲಿ ಅಡುಗೆ ಕೆಲಸಗಾರನ ಪುತ್ರಿ, ಪ.ಪಂಗಡದ ಬಾಲಕಿ ಧನ್ಯಾಗೆ ಎಸೆಸೆಲ್ಸಿಯಲ್ಲಿ 622 ಅಂಕ

ಉಡುಪಿ, ಮೇ 8: ಹೊಟೇಲ್‌ನಲ್ಲಿ ಅಡುಗೆ ಕೆಲಸ ಮಾಡುವ ಪರಿಶಿಷ್ಟ ಪಂಗಡದ ನರಸಿಂಹ ನಾಯ್ಕ್‌ನ ಬಡ ಕುಟುಂಬದಲ್ಲಿಂದು ಹರ್ಷದ ಹೊನಲು ಹರಿದಿದೆ. ಈ ಕುಟುಂಬದ ಕುಡಿಯೊಂದು ಇಂದು ಪ್ರಕಟಗೊಂಡ ಈ ಬಾರಿಯ ಎಸೆಸೆಲ್ಸಿ ಪರೀಕ್ಷೆಯಲ್ಲಿ 625ರಲ್ಲಿ 622 ಅಂಕ ಪಡೆದಿರುವುದೇ ಕುಟುಂಬದ ಈ ಸಂತೋಷಕ್ಕೆ ಕಾರಣ. 

ಕಾರ್ಕಳ ತಾಲೂಕು ಕುಕ್ಕುಜೆಯ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗದ ಧನ್ಯಾ ನಾಯ್ಕ್ ಅವರೇ ಈ ಸಾಧನೆ ಮಾಡಿದ ಬಾಲಕಿ. ತೀರಾ ಬಡಕುಟುಂಬದಿಂದ ಬಂದ ಈ ಬಾಲಕಿ ವಿದ್ಯೆ ಪಡೆಯುವ ಏಕೈಕ ಉದ್ದೇಶಕ್ಕಾಗಿ ಹರಿಕಂಡಿಗೆ ಸಮೀಪದ ಸಾಂತ್ಯಾರುವಿನಲ್ಲಿರುವ ಚಿಕ್ಕಮ್ಮನ ಮನೆಯಲ್ಲಿದ್ದು ಶಾಲೆಗೆ ಹೋಗುತಿದ್ದಾರೆ.

ಈಕೆಯ ಹೆತ್ತವರು ಇರುವುದು ಹೆಬ್ರಿ ತಾಲೂಕಿನ ಮುಂಡಳ್ಳಿಯಲ್ಲಿ. ತಂದೆ ನರಸಿಂಹ ನಾಯ್ಕರಿಗೆ ಹೊಟೇಲ್‌ನಲ್ಲಿ ಅಡುಗೆ ಕೆಲಸ. ತಾಯಿ ಸುಲೋಚನಾ ಮನೆ ವಾರ್ತೆ ನೋಡಿಕೊಂಡಿದ್ದಾರೆ. ಇವರದು ಪರಿಶಿಷ್ಟ ಪಂಗಡದ (ಮರಾಠಿ) ಬಡ ಕುಟುಂಬ. ಧನ್ಯಾ ನಾಯ್ಕಳ ತಮ್ಮ ದೀಕ್ಷಿತ್ ಮೂರನೇ ತರಗತಿಯಲ್ಲಿ ಓದುತಿದ್ದಾನೆ.

ಧನ್ಯಾ ನಾಯ್ಕ್ ಪ್ರಾಥಮಿಕ ಶಿಕ್ಷಣವನ್ನು ಪಡೆದಿರುವುದು ಬಾಗಲಕೋಟೆಯಲ್ಲಿ. ಎಂಟನೇ ತರಗತಿಯಿಂದ ಆಕೆ ಕಲಿಯುತ್ತಿರುವುದು ಸರಕಾರಿ ಪದವಿ ಪೂರ್ವ ಕಾಲೇಜು ಕುಕ್ಕುಜೆಯಲ್ಲಿ. ಇದೀಗ ಎಸೆಸೆಲ್ಸಿಯಲ್ಲಿ ಅತ್ಯುತ್ತಮ ಅಂಕಗಳನ್ನು ಪಡೆದಿರುವ ಧನ್ಯಾ ನಾಯ್ಕ್, ಮುಂದೆ ಪಿಯುಸಿಯಲ್ಲಿ ವಿಜ್ಞಾನ ವಿಭಾಗದಲ್ಲಿ ಕಲಿತು ಮುಂದೆ ವೈದ್ಯೆಯಾಗುವ ಕನಸನ್ನು ಹೊಂದಿದ್ದಾಳೆ. ತನ್ನ ಕನಸನ್ನು ನನಸುಮಾಡುವ ಛಲವೂ ಆಕೆಗಿದೆ.

ಧನ್ಯಾ ನಾಯ್ಕ್ ಬಹು ಪ್ರತಿಭೆಯ ವಿದ್ಯಾರ್ಥಿನಿ ಎಂದು ರಾಷ್ಟ್ರ ಪ್ರಶಸ್ತಿ ವಿಜೇತ ಸಮಾಜ ಶಿಕ್ಷಕ ಸುರೇಶ್ ಮರಕಾಲ ಹೇಳುತ್ತಾರೆ. ರಂಗೋಲಿ ಸ್ಪರ್ಧೆಯಲ್ಲಿ ಈಕೆ ರಾಜ್ಯಮಟ್ಟದಲ್ಲಿ ತೃತೀಯ ಸ್ಥಾನ ಪಡೆದಿದ್ದಾಳೆ. ಅಲ್ಲದೇ ಅತ್ಯಂತ ಸುಂದರ ಹಾಗೂ ಕಲಾತ್ಮಕವಾಗಿ ಮೆಹಂದಿ ಬರೆಯುವ ಕಲೆ ಈಕೆಗೆ ಕರಗತವಾಗಿದೆ. ಎನ್ಎಂಎಎಸ್ ಪರೀಕ್ಷೆಯಲ್ಲಿ ಧನ್ಯಾ ನಾಯ್ಕ್ ಕಾರ್ಕಳ ತಾಲೂಕಿನ ಟಾಪರ್ ಆಗಿದ್ದಳು ಎಂದು ಸುರೇಶ್ ಮರಕಾಲ ತಿಳಿಸಿದ್ದಾರೆ.

share
Next Story
X