Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇಡಿ ಮುಖ್ಯಸ್ಥನ ಅಧಿಕಾರಾವಧಿ ನವೆಂಬರ್...

ಇಡಿ ಮುಖ್ಯಸ್ಥನ ಅಧಿಕಾರಾವಧಿ ನವೆಂಬರ್ ನಂತರ ಮುಂದುವರಿಯುವುದಿಲ್ಲ: ಕೇಂದ್ರ ಸರಕಾರ ಹೇಳಿಕೆ

8 May 2023 9:09 PM IST
share
ಇಡಿ ಮುಖ್ಯಸ್ಥನ ಅಧಿಕಾರಾವಧಿ ನವೆಂಬರ್ ನಂತರ ಮುಂದುವರಿಯುವುದಿಲ್ಲ: ಕೇಂದ್ರ ಸರಕಾರ ಹೇಳಿಕೆ

ಹೊಸದಿಲ್ಲಿ, ಮೇ 8: ಅನುಷ್ಠಾನ ನಿರ್ದೇಶನಾಲಯ (ಇಡಿ)ದ ಮುಖ್ಯಸ್ಥ ಸಂಜಯ್ ಕುಮಾರ್ ಮಿಶ್ರಾರ ಅಧಿಕಾರಾವಧಿ ಈ ವರ್ಷದ ನವೆಂಬರ್ ನಂತರ ಮುಂದುವರಿಯುವುದಿಲ್ಲ ಎಂದು ಕೇಂದ್ರ ಸರಕಾರ ಸೋಮವಾರ ಸುಪ್ರೀಂ ಕೋರ್ಟ್ ಗೆ ತಿಳಿಸಿದೆ.

ಆರ್ಥಿಕ ಕ್ರಿಯಾ ಕಾರ್ಯಪಡೆ (FATF)ಯು ನಡೆಸುತ್ತಿರುವ ಮೌಲ್ಯಮಾಪನವು ಚಾಲ್ತಿಯಲ್ಲಿರುವ ಹಿನ್ನೆಲೆಯಲ್ಲಿ, ಮಿಶ್ರಾಗೆ ಮೂರನೇ ಬಾರಿಗೆ ಅಧಿಕಾರ ವಿಸ್ತರಣೆಯನ್ನು ನೀಡಲಾಗಿದೆ ಎಂದು ನ್ಯಾ. ಬಿ.ಆರ್. ಗವಾಯಿ ಅವರನ್ನೊಳಗೊಂಡ ಮೂವರು ನ್ಯಾಯಾಧೀಶರ ಪೀಠದ ಎದುರು ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಹೇಳಿದರು.

ಅನುಷ್ಠಾನ ನಿರ್ದೇಶನಾಲಯಕ್ಕೆ ಮಿಶ್ರಾ ‘‘ಅಷ್ಟೊಂದು ಅನಿವಾರ್ಯವೇ’’ ಹಾಗೂ ಅವರ ಸ್ಥಾನವನ್ನು ತುಂಬಬಲ್ಲ ಅಧಿಕಾರಿ ಸರಕಾರಕ್ಕೆ ಸಿಕ್ಕಿಲ್ಲವೇ ಎಂಬುದಾಗಿ ಕಳೆದ ವಿಚಾರಣೆಯಲ್ಲಿ ಸುಪ್ರೀಂ ಕೋರ್ಟ್ ಕೇಳಿತ್ತು.

‘‘ಈ ಅಧಿಕಾರಿ (ಮಿಶ್ರಾ) 2023 ನವೆಂಬರ್ ಬಳಿಕ ಮುಂದುವರಿಯುವಂತಿಲ್ಲ. ಆದರೆ, ಈಗ ಎಫ್ಎಟಿಎಫ್ ನ ಮೌಲ್ಯಮಾಪನ ನಡೆಯುತ್ತಿದೆ. ಅದು 2019ರಲ್ಲಿ ನಡೆಯಬೇಕಾಗಿತ್ತು. ಆದರೆ ಕೋವಿಡ್ ನಿಂದಾಗಿ ನಡೆದಿಲ್ಲ. ಯಾರೂ ಅನಿವಾರ್ಯವಲ್ಲ. ಒಬ್ಬ ನಿರ್ದಿಷ್ಟ ಅಧಿಕಾರಿಯ ಅನುಪಸ್ಥಿತಿಯಲ್ಲಿ ಯಾವುದೇ ಸಂಘಟನೆಯು ನಿಷ್ಕ್ರಿಯವಾಗುವುದಿಲ್ಲ. ಆದರೆ, ಕಳೆದ ಮೂರು ವರ್ಷಗಳಿಂದ ಸಂಸ್ಥೆಯನ್ನು ಮುನ್ನಡೆಸುತ್ತಿದ್ದ ವ್ಯಕ್ತಿಯ ಉಪಸ್ಥಿತಿಯು ಪರಿಣಾಮಕಾರಿಯಾಗಿರುತ್ತದೆ’’ ಎಂದು ತುಷಾರ್ ಮೆಹ್ತಾ ಹೇಳಿದರು.

2021ರಲ್ಲಿ, ಮಿಶ್ರಾಗೆ ಯಾವುದೇ ವಿಸ್ತರಣೆ ನೀಡಬಾರದು ಎಂದು ಸುಪ್ರೀಂ ಕೋರ್ಟ್ ಸ್ಪಷ್ಟವಾಗಿ ಸರಕಾರಕ್ಕೆ ಸೂಚಿಸಿತ್ತು. ಆದರೆ, ನ್ಯಾಯಾಲಯದ ಆದೇಶ ಹೊರಬಿದ್ದ ಎರಡು ತಿಂಗಳುಗಳ ಬಳಿಕ, ಸರಕಾರವು ಕೇಂದ್ರೀಯ ಜಾಗೃತ ಆಯೋಗ (ಸಿವಿಸಿ) ಕಾಯ್ದೆಗೆ ತಿದ್ದುಪಡಿಗಳನ್ನು ತಂದಿತು. 2021ರ ನವೆಂಬರ್ ನಲ್ಲಿ ಅದು ಈ ಸಂಬಂಧ ಸುಗ್ರೀವಾಜ್ಞೆ ಹೊರಡಿಸಿತು. ಮಿಶ್ರಾರ ಅಧಿಕಾರಾವಧಿಯನ್ನು ಒಂದು ವರ್ಷ, ಅಂದರೆ 2022 ನವೆಂಬರ್ವರೆಗೆ ವಿಸ್ತರಿಸಲು ಈ ತಿದ್ದುಪಡಿಗಳು ಸರಕಾರಕ್ಕೆ ಅವಕಾಶ ನೀಡಿದವು. ಇವೇ ತಿದ್ದುಪಡಿಗಳ ಆಧಾರದಲ್ಲಿ, ಸರಕಾರವು ಅದೇ ಅಧಿಕಾರಿಯ ಅಧಿಕಾರಾವಧಿಯನ್ನು ಇನ್ನೂ ಒಂದು ವರ್ಷ ವಿಸ್ತರಿಸಿತು. ಈಗ ಅವರು 2023 ನವೆಂಬರ್ 18ರವರೆಗೆ ಅವರು ಈ ಹುದ್ದೆಯಲ್ಲಿ ಮುಂದುವರಿಯಬಹುದಾಗಿದೆ.

ಮೌಲ್ಯಮಾಪನದ ವಿಷಯ 2021ರಲ್ಲಿ ಯಾಕೆ ಹೇಳಿಲ್ಲ ಸುಪ್ರೀಂ ಕೋರ್ಟ್ ಪ್ರಶ್ನೆ

‘‘ಎಫ್ಎಟಿಎಫ್ ಮಾಲ್ಯಮಾಪನವು 2019ರಲ್ಲಿ ನಡೆಯಬೇಕಾಗಿತ್ತು ಎನ್ನುವುದು ನಿಮಗೆ ಗೊತ್ತಿದ್ದರೆ, ಅದನ್ನು ನೀವು 2021ರ ತೀರ್ಪಿನ ಮೊದಲು ನ್ಯಾಯಾಲಯದ ಗಮನಕ್ಕೆ ತಂದಿದ್ದೀರಾ? ಕೆಲವು ಅತ್ಯಂತ ಗಂಭೀರ ತನಿಖೆಗಳು ನಡೆಯುತ್ತಿವೆ, ಹಾಗಾಗಿ ಅಧಿಕಾರದಲ್ಲಿ ಅವರು ಮುಂದುವರಿಯುವುದು ಅಗತ್ಯ ಎಂದಷ್ಟೇ ನೀವು ಆಗ ಹೇಳಿದ್ದಿರಿ. ನಿಮ್ಮ ಆ ವಾದದ ಆಧಾರದಲ್ಲಿ, ಅವರಿಗೆ 2022 ನವೆಂಬರ್ವರೆಗೆ ಅಧಿಕಾರದಲ್ಲಿ ಮುಂದುವರಿಯಲು ನ್ಯಾಯಾಲಯವು ಅವಕಾಶ ನೀಡಿತು. ಹಾಗಾದರೆ, ಈಗ ನೀವು ನಮ್ಮ ಎದುರು ಹೇಳುತ್ತಿರುವ ಎಫ್ಎಟಿಎಫ್ ಮೌಲ್ಯಮಾಪನ ನಂತರ ಯೋಚಿಸಿದ ವಿಷಯವೇ?’’ ಎಂದು ನ್ಯಾ. ಗವಾಯಿ ಸರಕಾರವನ್ನು ಪ್ರಶ್ನಿಸಿದರು.

ಕಾಂಗ್ರೆಸ್ ಪಕ್ಷದ ವಕ್ತಾರ ರಣದೀಪ್ ಸಿಂಗ್ ಸುರ್ಜೆವಾಲಾ, ತೃಣಮೂಲ ಕಾಂಗ್ರೆಸ್ ನಾಯಕಿ ಮಹುವಾ ಮೋಯಿತ್ರಾ, ಸಾಮಾಜಿಕ ಹೋರಾಟಗಾರ ಹಾಗೂ ಮಧ್ಯಪ್ರದೇಶ ಕಾಂಗ್ರೆಸ್ ಮಹಿಳಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಜಯಾ ಠಾಕೂರ್ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸುತ್ತಿದೆ.

share
Next Story
X