Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಫೆಲೆಸ್ತೀನ್ ಶಾಲೆಯನ್ನು ಕೆಡವಿದ...

ಫೆಲೆಸ್ತೀನ್ ಶಾಲೆಯನ್ನು ಕೆಡವಿದ ಇಸ್ರೇಲ್: ವ್ಯಾಪಕ ಖಂಡನೆ

8 May 2023 11:16 PM IST
share
ಫೆಲೆಸ್ತೀನ್ ಶಾಲೆಯನ್ನು ಕೆಡವಿದ ಇಸ್ರೇಲ್: ವ್ಯಾಪಕ ಖಂಡನೆ

ಜೆರುಸಲೇಂ, ಮೇ 8: ಆಕ್ರಮಿತ ವೆಸ್ಟ್ ಬ್ಯಾಂಕ್ ನಲ್ಲಿ ರವಿವಾರ ಇಸ್ರೇಲ್ ಅಧಿಕಾರಿಗಳು ಫೆಲೆಸ್ತೀನಿಯನ್ ಶಾಲೆಯನ್ನು ಕೆಡವಿದ್ದು ಇದನ್ನು ಯುರೋಪಿಯನ್ ಯೂನಿಯನ್ ತೀವ್ರವಾಗಿ ಖಂಡಿಸಿದೆ.

ಬೆಥ್ಲಹೇಮ್ನಿಂದ ಸುಮಾರು 2 ಕಿ.ಮೀ ದೂರದ ಪ್ರದೇಶದಲ್ಲಿರುವ ಈ ಶಾಲೆಯನ್ನು ಅಕ್ರಮವಾಗಿ ನಿರ್ಮಿಸಲಾಗಿದೆ ಮತ್ತು ಈ ಶಾಲೆಯಲ್ಲಿ ಕಲಿಯುವ ಮಕ್ಕಳ ಅಥವಾ ಶಾಲೆಯನ್ನು ಸಂದರ್ಶಿಸುವವರ ಸುರಕ್ಷತೆಗೆ ಅಪಾಯಕಾರಿ ಎಂದು ಕಂಡುಬಂದ ಬಳಿಕ ಶಾಲೆಯನ್ನು ಕೆಡವಲು ಇಸ್ರೇಲ್ ಕೋರ್ಟ್ ಆದೇಶಿಸಿದೆ ಎಂದು ಇಸ್ರೇಲ್ ಸೇನೆಯ ಘಟಕವಾಗಿರುವ `ಕೊಗಾಟ್'ನ ಹೇಳಿಕೆ ತಿಳಿಸಿದೆ.

ಕಟ್ಟಡವನ್ನು ದುರಸ್ತಿಗೊಳಿಸಿ ಸುಸ್ಥಿತಿಯಲ್ಲಿಡುವಂತೆ ಕಟ್ಟಡದ ಮಾಲಕರಿಗೆ ಹಲವು ಬಾರಿ ಸೂಚನೆ ನೀಡಲಾಗಿದ್ದರೂ ಅವರು ಅದನ್ನು ಪಾಲಿಸಿಲ್ಲ. ಆದ್ದರಿಂದ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಅನಿವಾರ್ಯವಾಗಿ ಕಟ್ಟಡವನ್ನು ಕೆಡವಲಾಗಿದೆ ಎಂದು ಹೇಳಿಕೆ ಪ್ರತಿಪಾದಿಸಿದೆ. ಈ ಜಾಗದಲ್ಲಿ ಶಾಲೆ ಇತ್ತು ಎಂಬ ಯಾವುದೇ ಕುರುಹು ಉಳಿಯದಂತೆ ಕಟ್ಟಡವನ್ನು ನೆಲಸಮ ಮಾಡಲಾಗಿದೆ ಎಂದು ವಿದ್ಯಾರ್ಥಿಗಳು ಹಾಗೂ ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. `ಎಂದಿನಂತೆ ಶಾಲೆಗೆ ಬಂದಾಗ ಅಲ್ಲಿ ಶಾಲೆಯೇ ಇರಲಿಲ್ಲ. ನಮಗೆ ಕಲಿಯಬೇಕು, ಕಲಿಯಲು ಶಾಲೆಯ ಅಗತ್ಯವಿದೆ. 

ಅವರು(ಇಸ್ರೇಲಿಯನ್ನರು) ಧ್ವಂಸ ಮಾಡುವುದನ್ನು ಮುಂದುವರಿಸಲಿ, ನಾವು ಮರು ನಿರ್ಮಿಸುತ್ತೇವೆ' ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ. ಶಾಲೆಯನ್ನು ನೆಲಸಮಗೊಳಿಸಿದ ಜತೆಗೆ, ಶಾಲೆಗೆ ಸಂಬಂಧಿಸಿದ ಎಲ್ಲಾ ವಸ್ತುಗಳನ್ನೂ, ಪೀಠೋಪಕರಣಗಳನ್ನೂ ಟ್ರಕ್ನಲ್ಲಿ ತುಂಬಿರಿಸಿ ಅವರು ಕೊಂಡೊಯ್ದಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿವೆ.

ವೆಸ್ಟ್ ಬ್ಯಾಂಕ್ ನಲ್ಲಿ ಕಟ್ಟಡ ನಿರ್ಮಿಸಲು ಪರ್ಮಿಟ್ ಪಡೆಯಬೇಕು ಎಂದು ಇಸ್ರೇಲ್ ಆದೇಶಿಸಿದೆ. ಆದರೆ ನಿರ್ಮಾಣಕ್ಕೆ ಪರ್ಮಿಟ್ ಪಡೆಯುವುದು ಅಸಾಧ್ಯದ ಕಾರ್ಯ ಎಂದು ಫೆಲೆಸ್ತೀನ್ ಪ್ರಜೆಗಳು ಹೇಳುತ್ತಿದ್ದಾರೆ. ಫೆಲೆಸ್ತೀನ್ ಶಾಲೆಯನ್ನು ನೆಲಸಮಗೊಳಿಸಿರುವ ಕಾರ್ಯವನ್ನು ಈ ಪ್ರದೇಶದ ಯೆಹೂದಿ ವಸಾಹತುಗಾರರ ಸಂಘಟನೆ `ದಿ ಗಷ್ ಎಟ್ಝಿಯಾನ್ ರೀಜನಲ್ ಕೌನ್ಸಿಲ್' ಸ್ವಾಗತಿಸಿದೆ.

 ಶಾಲೆಯ ಕಟ್ಟಡ ಶಿಥಿಲಗೊಂಡಿರುವ ಬಗ್ಗೆ ಕಳೆದ 6 ವರ್ಷದಿಂದ ಗಮನ ಸೆಳೆಯುತ್ತಿದ್ದರೂ ವಿಫಲವಾದ ಬಳಿಕ ಕಟ್ಟಡವನ್ನು ಕೆಡವಲಾಗಿದೆ. ಈ ಶಾಲೆಯ ವಿದ್ಯಾರ್ಥಿಗಳನ್ನು ಸಮೀಪದ ಶಾಲೆಗೆ ದಾಖಲಿಸಲಾಗುವುದು ಎಂದು ಇಸ್ರೇಲ್ ಅಧಿಕಾರಿಗಳು ಹೇಳಿದ್ದಾರೆ.  `ಶಾಲೆಯ ಕಟ್ಟಡವನ್ನು ನೆಲಸಮಗೊಳಿಸಿರುವುದು ಘೋರ ಅಪರಾಧವಾಗಿದೆ ಮತ್ತು ಶಾಲೆಯ ವಿದ್ಯಾರ್ಥಿಗಳನ್ನು ಮುಕ್ತ, ಸುರಕ್ಷಿತ ಮತ್ತು ಸ್ಥಿರ ಶಿಕ್ಷಣ ಕ್ರಮದಿಂದ ವಂಚಿತಗೊಳಿಸಲಿದೆ' ಎಂದು ಫೆಲೆಸ್ತೀನ್ ಅಥಾರಿಟಿಯ ಶಿಕ್ಷಣ ಸಚಿವಾಲಯ ಖಂಡಿಸಿದೆ.

ಶಾಲೆ ನೆಲಸಮಗೊಳಿಸಿರುವುದರಿಂದ ಆಘಾತವಾಗಿದೆ.ಇದರಿಂದ ಕನಿಷ್ಟ 60 ಫೆಲೆಸ್ತೀನ್ ಮಕ್ಕಳ ಭವಿಷ್ಯದ ಮೇಲೆ ಪರಿಣಾಮ ಬೀರಲಿದೆ. ಕಟ್ಟಡ ಧ್ವಂಸಗೊಳಿಸಿರುವುದು ಅಂತರಾಷ್ಟ್ರೀಯ ಕಾನೂನಿನಡಿ ಅಕ್ರಮವಾಗಿದ್ದು ಇದು ಫೆಲೆಸ್ತೀನ್ ಜನಸಮುದಾಯದ ಬವಣೆಯನ್ನು ಇನ್ನಷ್ಟು ಹೆಚ್ಚಿಸಲಿದೆ ಮತ್ತು ಈಗಾಗಲೇ ತೀವ್ರಗೊಂಡಿರುವ ಉದ್ವಿಗ್ನತೆಯನ್ನು ಮತ್ತಷ್ಟು ಉಲ್ಬಣಿಸಲಿದೆ ಎಂದು ಯುರೋಪಿಯನ್ ಯೂನಿಯನ್ನ  ನಿಯೋಗ ಖಂಡಿಸಿದೆ.

share
Next Story
X